ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ Photo | PTI
ದೇಶ

Defence projects: ನಿರಂತರ ವಿಳಂಬ; ಒಂದೇ ಒಂದು ಯೋಜನೆಯೂ ಸಕಾಲದಲ್ಲಿ ಪೂರ್ಣಗೊಂಡಿಲ್ಲ- IAF ಮುಖ್ಯಸ್ಥರ ಕಳವಳ!

'ನಾನು ಯೋಚಿಸಿದಂತೆ ಒಂದೇ ಒಂದು ಯೋಜನೆಯು ಸಕಾಲದಲ್ಲಿ ಪೂರ್ಣಗೊಂಡಿಲ್ಲ. ಇದರ ಕಡೆಗೆ ನಾವು ಗಮನ ಹರಿಸಬೇಕಾಗಿದೆ

ನವದೆಹಲಿ: ರಕ್ಷಣಾ ಯೋಜನೆಗಳಲ್ಲಿನ ನಿರಂತರ ವಿಳಂಬಗಳ ಬಗ್ಗೆ ವಾಯುಪಡೆ ಮುಖ್ಯಸ್ಥ ಮತ್ತು ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಗುರುವಾರ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

CII ವಾರ್ಷಿಕ ವ್ಯಾಪಾರ ಶೃಂಗಸಭೆ 2025 ರಲ್ಲಿ ಮಾತನಾಡಿದ ಏರ್ ಚೀಫ್ ಮಾರ್ಷಲ್, ಯೋಜನೆಯ ಕಾರ್ಯಗತಗೊಳಿಸುವಿಕೆಯಲ್ಲಿ ಪದೇ ಪದೇ ವಿಳಂಬ ಮಾಡಲಾಗುತ್ತಿದೆ ಎಂದು ಹೇಳುವ ಮೂಲಕ ಸಕಾಲದಲ್ಲಿ ಯೋಜನೆ ಪೂರ್ಣಗೊಳಿಸದ ಸರ್ಕಾರದ ಅಭ್ಯಾಸವನ್ನು ಟೀಕಿಸಿದರು.

ವಿಮಾನ ಪೂರೈಕೆಯಂತಹ ಯೋಜನೆಗಳನ್ನು ಸಕಾಲದಲ್ಲಿ ಪೂರೈಸುತ್ತಿಲ್ಲ. ಇದರಿಂದ ಸವಾಲಿನ ಪರಿಸ್ಥಿತಿವೇರ್ಪಡುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಏರ್ ಚೀಫ್ ಮಾರ್ಷಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

'ನಾನು ಯೋಚಿಸಿದಂತೆ ಒಂದೇ ಒಂದು ಯೋಜನೆಯು ಸಕಾಲದಲ್ಲಿ ಪೂರ್ಣಗೊಂಡಿಲ್ಲ. ಇದರ ಕಡೆಗೆ ನಾವು ಗಮನ ಹರಿಸಬೇಕಾಗಿದೆ ಎಂದು ಅವರು ಹೇಳಿದರು.

ಒಪ್ಪಂದಕ್ಕೆ ಸಹಿ ಮಾಡುವಾಗ, ಕೆಲವೊಮ್ಮೆ ಅದು ಬರುವುದಿಲ್ಲ ಎಂದು ನಮಗೆ ಖಾತ್ರಿ ಇರುತ್ತದೆ. ಆದರೆ ನಾವು ಒಪ್ಪಂದಕ್ಕೆ ಸಹಿ ಹಾಕುತ್ತೇವೆ. ನಂತರ ಆ ಪ್ರಕ್ರಿಯೆಯು ಕ್ಷೀಣಿಸುತ್ತದೆ. ಸಾಧಿಸಲು ಸಾಧ್ಯವಾಗದದ್ದನ್ನು ನಾವು ಏಕೆ ಭರವಸೆ ನೀಡಬೇಕು? ಎಂದು ಏರ್ ಮಾರ್ಷಲ್ ಸಿಂಗ್ ಪ್ರಶ್ನಿಸಿದರು.

ಆಪರೇಷನ್ ಸಿಂಧೂರ್ ಅನ್ನು ರಾಷ್ಟ್ರದ ಗೆಲುವು ಎಂದು ಶ್ಲಾಘಿಸಿದ ಅವರು, ಭಯೋತ್ಪಾದನೆಯನ್ನು ಎದುರಿಸುವಲ್ಲಿ ಸಶಸ್ತ್ರ ಪಡೆಗಳು, ಏಜೆನ್ಸಿಗಳು ಮತ್ತು ಪ್ರತಿಯೊಬ್ಬ ಭಾರತೀಯ ನಾಗರಿಕರ ಸಾಮೂಹಿಕ ಪ್ರಯತ್ನಗಳಿಂದ ಈ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT