ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ Photo | PTI
ದೇಶ

Defence projects: ನಿರಂತರ ವಿಳಂಬ; ಒಂದೇ ಒಂದು ಯೋಜನೆಯೂ ಸಕಾಲದಲ್ಲಿ ಪೂರ್ಣಗೊಂಡಿಲ್ಲ- IAF ಮುಖ್ಯಸ್ಥರ ಕಳವಳ!

'ನಾನು ಯೋಚಿಸಿದಂತೆ ಒಂದೇ ಒಂದು ಯೋಜನೆಯು ಸಕಾಲದಲ್ಲಿ ಪೂರ್ಣಗೊಂಡಿಲ್ಲ. ಇದರ ಕಡೆಗೆ ನಾವು ಗಮನ ಹರಿಸಬೇಕಾಗಿದೆ

ನವದೆಹಲಿ: ರಕ್ಷಣಾ ಯೋಜನೆಗಳಲ್ಲಿನ ನಿರಂತರ ವಿಳಂಬಗಳ ಬಗ್ಗೆ ವಾಯುಪಡೆ ಮುಖ್ಯಸ್ಥ ಮತ್ತು ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಗುರುವಾರ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

CII ವಾರ್ಷಿಕ ವ್ಯಾಪಾರ ಶೃಂಗಸಭೆ 2025 ರಲ್ಲಿ ಮಾತನಾಡಿದ ಏರ್ ಚೀಫ್ ಮಾರ್ಷಲ್, ಯೋಜನೆಯ ಕಾರ್ಯಗತಗೊಳಿಸುವಿಕೆಯಲ್ಲಿ ಪದೇ ಪದೇ ವಿಳಂಬ ಮಾಡಲಾಗುತ್ತಿದೆ ಎಂದು ಹೇಳುವ ಮೂಲಕ ಸಕಾಲದಲ್ಲಿ ಯೋಜನೆ ಪೂರ್ಣಗೊಳಿಸದ ಸರ್ಕಾರದ ಅಭ್ಯಾಸವನ್ನು ಟೀಕಿಸಿದರು.

ವಿಮಾನ ಪೂರೈಕೆಯಂತಹ ಯೋಜನೆಗಳನ್ನು ಸಕಾಲದಲ್ಲಿ ಪೂರೈಸುತ್ತಿಲ್ಲ. ಇದರಿಂದ ಸವಾಲಿನ ಪರಿಸ್ಥಿತಿವೇರ್ಪಡುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಏರ್ ಚೀಫ್ ಮಾರ್ಷಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

'ನಾನು ಯೋಚಿಸಿದಂತೆ ಒಂದೇ ಒಂದು ಯೋಜನೆಯು ಸಕಾಲದಲ್ಲಿ ಪೂರ್ಣಗೊಂಡಿಲ್ಲ. ಇದರ ಕಡೆಗೆ ನಾವು ಗಮನ ಹರಿಸಬೇಕಾಗಿದೆ ಎಂದು ಅವರು ಹೇಳಿದರು.

ಒಪ್ಪಂದಕ್ಕೆ ಸಹಿ ಮಾಡುವಾಗ, ಕೆಲವೊಮ್ಮೆ ಅದು ಬರುವುದಿಲ್ಲ ಎಂದು ನಮಗೆ ಖಾತ್ರಿ ಇರುತ್ತದೆ. ಆದರೆ ನಾವು ಒಪ್ಪಂದಕ್ಕೆ ಸಹಿ ಹಾಕುತ್ತೇವೆ. ನಂತರ ಆ ಪ್ರಕ್ರಿಯೆಯು ಕ್ಷೀಣಿಸುತ್ತದೆ. ಸಾಧಿಸಲು ಸಾಧ್ಯವಾಗದದ್ದನ್ನು ನಾವು ಏಕೆ ಭರವಸೆ ನೀಡಬೇಕು? ಎಂದು ಏರ್ ಮಾರ್ಷಲ್ ಸಿಂಗ್ ಪ್ರಶ್ನಿಸಿದರು.

ಆಪರೇಷನ್ ಸಿಂಧೂರ್ ಅನ್ನು ರಾಷ್ಟ್ರದ ಗೆಲುವು ಎಂದು ಶ್ಲಾಘಿಸಿದ ಅವರು, ಭಯೋತ್ಪಾದನೆಯನ್ನು ಎದುರಿಸುವಲ್ಲಿ ಸಶಸ್ತ್ರ ಪಡೆಗಳು, ಏಜೆನ್ಸಿಗಳು ಮತ್ತು ಪ್ರತಿಯೊಬ್ಬ ಭಾರತೀಯ ನಾಗರಿಕರ ಸಾಮೂಹಿಕ ಪ್ರಯತ್ನಗಳಿಂದ ಈ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT