ಎನ್ಕೌಂಟರ್ ನಡೆದ ಸ್ಥಳದಲ್ಲಿ ಪೊಲೀಸರು. 
ದೇಶ

ಉತ್ತರ ಪ್ರದೇಶ: ಹಾಪುರದಲ್ಲಿ ಪೊಲೀಸರ ಎನ್ಕೌಂಟರ್; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್ ಹತ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಸದಸ್ಯ, ಗಾಜಿಯಾಬಾದ್‌ನ ಲೋನಿ ನಿವಾಸಿ ನವೀನ್ ಕುಮಾರ್‌ನನ್ನು ಹತ್ಯೆ ಮಾಡಿರುವುದಾಗಿ ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಲಖನೌ: ಉತ್ತರಪ್ರದೇಶದ ಹಾಪುರದಲ್ಲಿ ಪೊಲೀಸರು ಎನ್ಕೌಂಟರ್ ನಡೆಸಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್‌ನನ್ನು ಹತ್ಯೆ ಮಾಡಿದ್ದಾರೆ.

ಹಾಪುರ್‌ನ ಥಾನಾ ಕೊಟ್ವಾಲಿ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಎನ್ಕೌಂಟರ್ ನಡೆಸಲಾಗಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಸದಸ್ಯ, ಗಾಜಿಯಾಬಾದ್‌ನ ಲೋನಿ ನಿವಾಸಿ ನವೀನ್ ಕುಮಾರ್‌ನನ್ನು ಹತ್ಯೆ ಮಾಡಿರುವುದಾಗಿ ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಕೊತ್ವಾಲಿಯಲ್ಲಿ ಬಿಷ್ಣೋಯ್ ಗ್ಯಾಂಗ್ ಇರುವ ಖಚಿತ ಮಾಹಿತಿಯನ್ನಾಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಬಿಷ್ಣೋಯ್ ಗ್ಯಾಂಗ್ ಪೊಲೀಸರ ಮೇಲೆ ಪ್ರತಿದಾಳಿ ಮಾಡಿದ್ದರು.

ಈ ವೇಳೆ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್‌ಗೆ ಗಂಭೀರ ಗಾಯಗಳಾಗಿದ್ದವು. ಬಳಿಕ ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ, ನೋಯ್ಡಾ ಘಟಕ ಮತ್ತು ದೆಹಲಿ ಪೊಲೀಸರ ವಿಶೇಷ ಘಟಕದ ಜಂಟಿ ತಂಡಗಳು ಸೇರಿ ಈ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಎನ್ಕೌಂಟರ್ ನಲ್ಲಿ ಹತ್ಯೆಯಾಗಿರುವ ನವೀನ್ ಮೇಲೆ ದೆಹಲಿಯ ಥಾನಾ ಫರ್ಶ್ ಬಜಾರ್‌ನಲ್ಲಿ ಕೊಲೆ, ದರೋಡೆ, ಅಪಹರಣ ಸೇರಿ 20ಕ್ಕೂ ಪ್ರಕರಣ ದಾಖಲಾಗಿದ್ದವು. ಈ ಹಿಂದೆ ದೆಹಲಿಯಲ್ಲಿ ಪ್ರಕರಣದಲ್ಲಿ ನವೀನ್ ಜೈಲು ಶಿಕ್ಷೆ ಅನುಭವಿಸಿದ್ದ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮ ನೌಕೆಗಳನ್ನು ಅತ್ಯುತ್ತಮ ಶಸ್ತ್ರಾಸ್ತ್ರಗಳಿಂದ ತುಂಬುತ್ತಿದ್ದೇವೆ; ಇರಾನ್ ಬಗ್ಗದೇ ಹೋದಲ್ಲಿ ಸರ್ವನಾಶ- ಮಾತುಕತೆಗೂ ಮುನ್ನ ಟ್ರಂಪ್ ಬೆದರಿಕೆ!

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

ಅಪರಿಚಿತ ದೆವ್ವಕ್ಕಿಂತ ಪರಿಚಿತ ದೆವ್ವವೇ ವಾಸಿ! ಇರಾನ್ ಹೊಸ ಆಡಳಿತ ಹಳೆಯದ್ದಕ್ಕಿಂತ ಕ್ರೂರ: 40 ದಿನಗಳ ಬಳಿಕ ಇಸ್ರೇಲ್ ಹೀಗೆ ಹೇಳಿದ್ದೇಕೆ?

SCROLL FOR NEXT