ಟೈಗರ್ ಫಾಲ್ಸ್ 
ದೇಶ

Tiger Falls: ಜಲಪಾತದ ಮೇಲಿಂದ ಮರಬಿದ್ದು ಇಬ್ಬರ ಸಾವು! Video

ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ಜಿಲ್ಲೆಯ ಚಕ್ರತದಲ್ಲಿರುವ ಜನಪ್ರಿಯ ಜಲಪಾತವಾದ ಟೈಗರ್ ಫಾಲ್ಸ್‌ನಲ್ಲಿ ಈ ಭೀಕರ ಘಟನೆ ನಡೆದಿದೆ.

ಡೆಹ್ರಾಡೂನ್: ಜಲಪಾತ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರ ಮೇಲೆ ಮರ ಬಿದ್ದ ಪರಿಣಾಣ ಇಬ್ಬರು ಪ್ರವಾಸಿಗರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ಜಿಲ್ಲೆಯ ಚಕ್ರತದಲ್ಲಿರುವ ಜನಪ್ರಿಯ ಜಲಪಾತವಾದ ಟೈಗರ್ ಫಾಲ್ಸ್‌ನಲ್ಲಿ ಈ ಭೀಕರ ಘಟನೆ ನಡೆದಿದ್ದು, ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದಾಗ ಮರ ಬಿದ್ದು ದೆಹಲಿಯ ಮಹಿಳೆ ಸೇರಿದಂತೆ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ದೆಹಲಿಯ ಶಹದಾರ ಪ್ರದೇಶದ ಅಲ್ಕಾ ಆನಂದ್ ಮತ್ತು ಚಕ್ರತದ ಗೀತಾರಾಮ್ ಜೋಶಿ (48) ಎಂದು ಗುರುತಿಸಲಾಗಿದೆ.

ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿ ಸ್ಥಳ ಪರಿಶೀಲನೆ ನಡೆಸಿದ ಚಕ್ರತ ಪೊಲೀಸ್ ಠಾಣೆಯ ಉಸ್ತುವಾರಿ ಚಂದ್ರಶೇಖರ್ ನೌಟಿಯಾಲ್, "ಆನಂದ್ ತನ್ನ ಮಗಳು ಮತ್ತು ಆಕೆಯ ಭಾವಿ ಪತಿಯೊಂದಿಗೆ ಬಂದಿದ್ದರು. ಆದರೆ ಜೋಶಿ ತನ್ನ ಪತ್ನಿ ಮತ್ತು ಮಗಳೊಂದಿಗೆ ಅಲ್ಲಿದ್ದರು.

ಅವರು ಇತರ ಪ್ರವಾಸಿಗರೊಂದಿಗೆ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದಾಗ ಸುಮಾರು 60 ಮೀಟರ್ ಎತ್ತರದಿಂದ ಜಲಪಾತದ ಜೊತೆಗೆ ಮರ ಉರುಳಿತು. ಈ ವೇಳೆ ಅಲ್ಕಾ ಆನಂದ್ ಮತ್ತು ಚಕ್ರತದ ಗೀತಾರಾಮ್ ಜೋಶಿ ಅವರ ಮೇಲೆ ಮರ ಬಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಂತೆಯೇ ಅಲ್ಲಿಯೇ ಸಮೀಪದಲ್ಲಿ ನಿಂತಿದ್ದ ಇತರ ಮೂವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳದಲ್ಲಿದ್ದ ಪ್ರವಾಸಿಗರು ಮರವನ್ನು ಮೇಲಕ್ಕೆತ್ತಲು ಪ್ರಯತ್ನಿಸಿದರು.

ನಂತರ, ಪೊಲೀಸರು ಸ್ಥಳಕ್ಕೆ ತಲುಪಿ ಅವರನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಮರಣೋತ್ತರ ಪರೀಕ್ಷೆಯ ನಂತರ ಅವರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು" ಎಂದು ನೌಟಿಯಾಲ್ ಹೇಳಿದರು.

ಇನ್ನು ಈ ದುರಂತದ ಹೊರತಾಗಿಯೂ ಸ್ಥಳೀಯ ಜಿಲ್ಲಾಡಳಿತ ಜಲಪಾತವನ್ನು ಪ್ರವಾಸಿಗರ ವೀಕ್ಷಣೆಗೆ ಮುಚ್ಚಿಲ್ಲ ಎಂದು ಹೇಳಲಾಗಿದೆ.

ಅಂದಹಾಗೆ ಡೆಹ್ರಾಡೂನ್ ನ ಟೈಗರ್ ಜಲಪಾತವು ಭಾರತದ ಅತಿ ಎತ್ತರದ ನೇರ ಜಲಪಾತಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇಲ್ಲಿ ಸುಮಾರು 312 ಅಡಿಗಳಷ್ಟು ಮೇಲಿನಿಂದ ಕೆಳಕ್ಕೆ ನೀರು ಧುಮುಕತ್ತದೆ. ಈ ಪ್ರದೇಶವು ತನ್ನ ರಮಣೀಯ ಸೌಂದರ್ಯಕ್ಕೆ ಹೆಸರುವಾಸಿಯಾಗಿದ್ದು, ಪ್ರತಿನಿತ್ಯ ನೂರಾರು ಪ್ರವಾಸಿಗರನ್ನು ಆಕರ್ಷಿಸುತ್ತದೆ. ವಿಶೇಷವಾಗಿ ಬೇಸಿಗೆಯ ತಿಂಗಳುಗಳಲ್ಲಿ ಇಲ್ಲಿಗೆ ಗಣನೀಯ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT