ಪ್ರಧಾನಿ ಮೋದಿ 
ದೇಶ

ಕೆಲವೇ ನಿಮಿಷಗಳಲ್ಲೇ ಪಾಕ್ ವಾಯುನೆಲೆ ಧ್ವಂಸ; ಇದು ನವ ಭಾರತದ ತಾಕತ್ತು: ಪ್ರಧಾನಿ ಮೋದಿ

"ಭಯೋತ್ಪಾದಕರು ಒಳನುಸುಳಲು ರಕ್ಷಣೆ ನೀಡುತ್ತಿದ್ದ ಪಾಕಿಸ್ತಾನ ಸೇನೆಯನ್ನು ನಮ್ಮ ಪಡೆಗಳು ತೀವ್ರಗತಿಯಲ್ಲಿ ಮಂಡಿಯೂರುವಂತೆ ಮಾಡಿದವು.

ನವದೆಹಲಿ: 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ವೇಳೆ ಭಾರತೀಯ ಸೇನಾಪಡೆಗಳು ಪಾಕಿಸ್ತಾನದಲ್ಲಿನ ವಾಯುನೆಲೆಗಳನ್ನು ಕೆಲವೇ ನಿಮಿಷಗಳಲ್ಲಿ ಧ್ವಂಸಗೊಳಿಸಿವೆ. ಇದು ನವ ಭಾರತದ ತಾಕತ್ತನ್ನು ತೋರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಿಹಾರದ ಕರಕಟ್ ನಲ್ಲಿ ಶುಕ್ರವಾರ ನಡೆದ ರ‍್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಭರವಸೆ ನೀಡಿದ್ದೆ,. ಇದೀಗ ಭಯೋತ್ಪಾದಕರ ಕೇಂದ್ರ ಕಚೇರಿ ಧೂಳಿಪಟ ಮಾಡಿ ರಾಜ್ಯದಲ್ಲಿ ನಿಂತಿರುವುದಾಗಿ ಹೇಳಿದರು.

"ಭಯೋತ್ಪಾದಕರು ಒಳನುಸುಳಲು ರಕ್ಷಣೆ ನೀಡುತ್ತಿದ್ದ ಪಾಕಿಸ್ತಾನ ಸೇನೆಯನ್ನು ನಮ್ಮ ಪಡೆಗಳು ತೀವ್ರಗತಿಯಲ್ಲಿ ಮಂಡಿಯೂರುವಂತೆ ಮಾಡಿದವು. ಕೆಲವೇ ನಿಮಿಷಗಳಲ್ಲಿ ಪಾಕಿಸ್ತಾನದ ಹಲವಾರು ವಾಯುನೆಲೆಗಳು ಮತ್ತು ಭಯೋತ್ಪಾದಕರ ಅಡಗುತಾಣಗಳನ್ನು ನಾಶಪಡಿಸಲಾಯಿತು. ಇದು ನವ ಭಾರತ ಮತ್ತು ಇದು ನವ ಭಾರತದ ಶಕ್ತಿ ಎಂದು ಬಣ್ಣಿಸಿದರು.

ಪಹಲ್ಗಾಮ್ ದಾಳಿಯ ಎರಡು ದಿನಗಳ ನಂತರ ಬಿಹಾರಕ್ಕೆ ಬಂದಿದ್ದೆ. ಉಗ್ರರನ್ನು ಹುಡುಕಿ ಹೊಡೆಯುವುದಾಗಿ ಈ ನೆಲದಿಂದ ಭರವಸೆ ನೀಡಿದ್ದೆ. ಈ ಭರವಸೆಯನ್ನು ಈಡೇರಿಸುವುದೊಂದಿಗೆ ಈಗ ಮತ್ತೆ ಬಿಹಾರಕ್ಕೆ ಬಂದಿದ್ದೇನೆ. ಪಾಕಿಸ್ತಾನಕ್ಕೆ ಕುಳಿತುಕೊಂಡು ನಮ್ಮ ಸಹೋದರಿಯರ ಸಿಂಧೂರವನ್ನು ನಾಶಪಡಿಸಿದ ಉಗ್ರರ ನೆಲೆಗಳನ್ನು ನಮ್ಮ ಸೇನೆ ನಾಶಮಾಡಿದೆ ಎಂದು ಹೇಳಿದರು.

ಆಪರೇಷನ್ ಸಿಂಧೂರ ತಾಕತ್ತಿಗೆ ಪಾಕಿಸ್ತಾನ ಮತ್ತು ಇಡೀ ವಿಶ್ವವೇ ಸಾಕ್ಷಿಯಾಗಿದೆ ಎಂದರು. ಮತ್ತೆ ಭಾರತದ ವಿರುದ್ಧ ಕಾಲು ಕೆರೆದು ದಾಳಿಯಂತಹ ಪ್ರಯತ್ನಕ್ಕೆ ಮುಂದಾದರೆ ಉಗ್ರರ ವಿರುದ್ಧ ಆಫರೇಷನ್ ಸಿಂಧೂರ್ ಮುಂದುವರೆಯಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!