ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಅವರು ಪ್ರಮಾಣ ವಚನ ಬೋಧಿಸಿದರು. 
ದೇಶ

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಅಂಜಾರಿಯಾ, ಬಿಷ್ಣೋಯ್, ಚಂದೂರ್ಕರ್ ಪ್ರಮಾಣ ವಚನ ಸ್ವೀಕಾರ

ಮೂವರು ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರದೊಂದಿಗೆ ಒಟ್ಟು 34 ನ್ಯಾಯಮೂರ್ತಿಗಳ ಸಂಖ್ಯಾಬಲದ ಸರ್ವೋಚ್ಚ ನ್ಯಾಯಾಲಯ ಸಂಪೂರ್ಣ ಸದಸ್ಯರೊಂದಿಗೆ ಕಾರ್ಯನಿರ್ವಹಿಸಲಿದೆ.

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಎನ್‌.ವಿ.ಅಂಜಾರಿಯಾ, ವಿಜಯ್‌ ಬಿಷ್ಣೋಯ್‌ ಹಾಗೂ ಎ.ಎಸ್‌.ಚಂದೂರ್ಕರ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮೂವರು ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದರು.

ಮೂವರು ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರದೊಂದಿಗೆ ಒಟ್ಟು 34 ನ್ಯಾಯಮೂರ್ತಿಗಳ ಸಂಖ್ಯಾಬಲದ ಸರ್ವೋಚ್ಚ ನ್ಯಾಯಾಲಯ ಸಂಪೂರ್ಣ ಸದಸ್ಯರೊಂದಿಗೆ ಕಾರ್ಯನಿರ್ವಹಿಸಲಿದೆ.

ಸಿಜೆಐಯಾಗಿದ್ದ ಸಂಜೀವ್‌ ಖನ್ನಾ, ನ್ಯಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ಬೆಲಾ ತ್ರಿವೇದಿ ಅವರು ಈಚಗೆ ನಿವೃತ್ತಿ ಹೊಂದಿದ್ದರಿಂದ ಮೂರು ಹುದ್ದೆಗಳು‌ ಖಾಲಿ ಉಳಿದಿದ್ದವು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಕೊಲಿಜಿಯಂ ಮೇ 26ರಂದು ಮೂವರು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ಗೆ ಪದೋನ್ನತಿಗೊಳಿಸುವಂತೆ ಶಿಫಾರಸು ಮಾಡಿತ್ತು.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಅವರ ಮಾತೃ ಹೈಕೋರ್ಟ್‌ ಗುಜರಾತ್‌ ಆಗಿದ್ದು, ಗುವಾಹಟಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಜಯ್‌ ಬಿಷ್ಣೋಯ್‌ ಅವರ ಮಾತೃ ಹೈಕೋರ್ಟ್‌ ರಾಜಸ್ಥಾನ ಹೈಕೋರ್ಟ್ ಆಗಿದೆ. ನ್ಯಾ. ಚಂದೂರ್ಕರ್‌ ಅವರ ಮಾತೃ ಹೈಕೋರ್ಟ್‌ ಬಾಂಬೆ ಹೈಕೋರ್ಟ್ ಆಗಿದೆ.

2011ರ ನವೆಂಬರ್‌ 21ರಂದು ನ್ಯಾ. ಅಂಜಾರಿಯಾ ಅವರು ಗುಜರಾತ್‌ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದು, 2013ರ ಸೆಪ್ಟೆಂಬರ್‌ 6ರಂದು ಕಾಯಂಗೊಂಡಿದ್ದರು. 2024ರ ಫೆಬ್ರವರಿ 25ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿಗೊಂಡಿದ್ದರು.

ನ್ಯಾಯಮೂರ್ತಿ ಬಿಷ್ಣೋಯ್‌ ಅವರು 1989ರ ಜುಲೈ 8ರಂದು ವಕೀಲರಾಗಿ ನೋಂದಣಿ ಮಾಡಿಸಿದ್ದು, ರಾಜಸ್ಥಾನ ಹೈಕೋರ್ಟ್‌ ಮತ್ತು ಜೋಧಪುರದ ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯಲ್ಲಿ ಪ್ರಾಕ್ಟೀಸ್‌ ಮಾಡಿದ್ದಾರೆ. ಸಿವಿಲ್‌, ಕ್ರಿಮಿನಲ್‌, ಸಾಂವಿಧಾನಿಕ, ಸೇವಾ ಮತ್ತು ಚುನಾವಣಾ ಪ್ರಕರಣಗಳನ್ನು ನಡೆಸಿದ್ದಾರೆ.

ನ್ಯಾ. ಚಂದೂರ್ಕರ್‌ ಅವರು 1988ರ ಜುಲೈ 21ರಂದು ವಕೀಲರಾಗಿ ನೋಂದಣಿಯಾಗಿದ್ದು, ಮುಂಬೈನ ಹಿರಿಯ ವಕೀಲ ಬಿ ಎನ್‌ ನಾಯ್ಕ್‌ ಅವರ ಚೇಂಬರ್‌ನಲ್ಲಿ ವೃತ್ತಿ ಬದುಕು ಆರಂಭಿಸಿದ್ದರು. ಆನಂತರ ನ್ಯಾಯಮೂರ್ತಿಯಾಗಿ ಪದೋನ್ನತಿಗೊಂಡಿದ್ದರು. 1992ರಲ್ಲಿ ನಾಗ್ಪುರ ಪೀಠಕ್ಕೆ ಪ್ರಾಕ್ಟೀಸ್‌ ವರ್ಗಾಯಿಸಿಕೊಂಡಿದ್ದ ನ್ಯಾ. ಚಂದೂರ್ಕರ್‌ ಅವರು ಹಲವು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಹಾಜರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT