ಟರ್ಕಿ ಅಧ್ಯಕ್ಷರೊಂದಿಗೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ 
ದೇಶ

ಯಾವುದೇ ದೇಶ ಪಾಕಿಸ್ತಾನ 'ಭಯೋತ್ಪಾದಕ ರಾಷ್ಟ್ರ' ಅಂತಿಲ್ಲ: ಕೇಂದ್ರದ ವಿದೇಶಾಂಗ ನೀತಿ ವಿರುದ್ಧ ಕಾಂಗ್ರೆಸ್ ಕಿಡಿ!

ನಮ್ಮ ವಿದೇಶಾಂಗ ನೀತಿಯ ಪರಿಣಾಮ ಯಾವುದೇ ದೇಶವು ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಅಂತಾ ಕರೆಯಲಿಲ್ಲ.

ನವದೆಹಲಿ: ಯಾವುದೇ ದೇಶ ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರ ಎಂದು ಕರೆಯುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಶುಕ್ರವಾರ ಹೇಳುವ ಮೂಲಕ ಕೇಂದ್ರದ ವಿದೇಶಾಂಗ ನೀತಿ ವಿರುದ್ಧ ಕಿಡಿಕಾರಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಾಗೂ ತದನಂತರ ವಿದೇಶಾಂಗ ನೀತಿಯ ಫಲಿತಾಂಶ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಪವನ್ ಖೇರಾ, ನಮ್ಮ ವಿಫಲ ವಿದೇಶಾಂಗ ನೀತಿಯ ಫಲಿತಾಂಶವನ್ನು ಪಹಲ್ಗಮ್ ದಾಳಿ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆಯಲ್ಲಿ ನೋಡಿದ್ದೇವೆ. ನಮ್ಮ ವಿದೇಶಾಂಗ ನೀತಿಯ ಪರಿಣಾಮ ಯಾವುದೇ ದೇಶವು ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಅಂತಾ ಕರೆಯಲಿಲ್ಲ ಎಂದರು.

ಆಪರೇಷನ್ ಸಿಂಧೂರ್ ಪ್ರಾರಂಭಿಸಿದಾಗ ಯಾವುದೇ ದೇಶವು ನಮ್ಮ ಪರವಾಗಿ ಹೇಳಿಕೆ ನೀಡಲಿಲ್ಲ ಎಂದು ಅವರು ತಿಳಿಸಿದರು.

ಪಾಕಿಸ್ತಾನದೊಂದಿಗೆ ರಷ್ಯಾ ಒಪ್ಪಂದ: ಇದೀಗ, ಆಪರೇಷನ್ ಸಿಂಧೂರ್ ನಂತರ, ಕುವೈತ್ ಪಾಕಿಸ್ತಾನದ ಮೇಲಿನ ವೀಸಾ ನಿರ್ಬಂಧಗಳನ್ನು ರದ್ದುಗೊಳಿಸಿದೆ. ಇರಾನ್, ಯುಎಇ ಮತ್ತು ಗಲ್ಫ್ ರಾಷ್ಟ್ರಗಳು ಪಾಕಿಸ್ತಾನದೊಂದಿಗೆ ಎಂಒಯುಗಳಿಗೆ ಸಹಿ ಹಾಕುತ್ತಿವೆ ಮತ್ತು ಅತ್ಯಂತ ಆಘಾತಕಾರಿ ವಿಷಯವೆಂದರೆ ನಿನ್ನೆ, ರಷ್ಯಾ ತನ್ನ ಹಳೆಯ ಉಕ್ಕಿನ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಪಾಕಿಸ್ತಾನದೊಂದಿಗೆ ಎಂಒಯುಗೆ ಸಹಿ ಹಾಕಿದೆ. ಈ ಒಪ್ಪಂದಡಿ ಪಾಕಿಸ್ತಾನವು ರಷ್ಯಾದಿಂದ $ 2.6 ಬಿಲಿಯನ್ ಪಡೆಯುತ್ತದೆ ಎಂದು ತಿಳಿಸಿದರು.

"ಇದು ನಮ್ಮ ವಿಫಲ ವಿದೇಶಾಂಗ ನೀತಿಯ ಫಲಿತಾಂಶವಾಗಿದೆ ಎಂದ ಪವನ್ ಖೇರಾ ಬಿಜೆಪಿ ನಾಯಕ ಸಂಬಿತ್ ಪಾತ್ರ ಅವರ ಟೀಕೆಗಳನ್ನು ನಿರಾಕರಿಸಿದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಯ ಹೇಳಿಕೆ ಸಮರ್ಥಿಸಿಕೊಂಡು ಸರ್ಕಾರವನ್ನು ಪ್ರಶ್ನಿಸುವ ಕಾಂಗ್ರೆಸ್‌ನ ಹಕ್ಕನ್ನು ಪುನರುಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT