ಸಂಜಯ್ ರಾವತ್ PTI
ದೇಶ

ಪಹಲ್ಗಾಮ್ ದಾಳಿಯ ಆರು ಉಗ್ರರು ಬಿಜೆಪಿ ಸೇರಿರಬಹುದು!

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಆರು ಭಯೋತ್ಪಾದಕರನ್ನು ಬಂಧಿಸುವಲ್ಲಿನ ವಿಳಂಬವನ್ನು ಪ್ರಶ್ನಿಸಿದರು.

ಮುಂಬೈ: "ಪಹಲ್ಗಾಮ್ ದಾಳಿಯ ಆರು ಭಯೋತ್ಪಾದಕರನ್ನು ಹಿಡಿಯಲಾಗುತ್ತಿಲ್ಲ. ಬಹುಶಃ ಅವರು ಬಿಜೆಪಿ ಸೇರಬಹುದು ಮತ್ತು ಮುಂದೊಂದು ದಿನ ಆ ಆರು ಜನ ಬಿಜೆಪಿಗೆ ಸೇರಿದ್ದಾರೆ ಎಂದು ಬಿಜೆಪಿ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಬರಬಹುದು" ಎಂದು ಶಿವಸೇನಾ(ಯುಬಿಟಿ) ಸಂಸದ ಸಂಜಯ್ ರಾವತ್ ಶುಕ್ರವಾರ ವ್ಯಂಗ್ಯವಾಡಿದ್ದಾರೆ.

ಇಂದು ಮುಂಬೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಜಯ್ ರಾವತ್, ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಆರು ಭಯೋತ್ಪಾದಕರನ್ನು ಬಂಧಿಸುವಲ್ಲಿನ ವಿಳಂಬವನ್ನು ಪ್ರಶ್ನಿಸಿದರು. ಈ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದರು.

"ಭಯೋತ್ಪಾದಕರು ಬಿಜೆಪಿಗೆ ಸೇರಿರಬಹುದು - ಅದಕ್ಕಾಗಿಯೇ ಅವರನ್ನು ಹಿಡಿಯಲಾಗುತ್ತಿಲ್ಲ. ಪಹಲ್ಗಾಮ್‌ನ ಆರು ಭಯೋತ್ಪಾದಕರನ್ನು ಬಂಧಿಸಲಾಗುತ್ತಿಲ್ಲ. ಬಹುಶಃ ಒಂದು ದಿನ ಆ ಆರು ಜನರು ಪಕ್ಷಕ್ಕೆ ಸೇರಿದ್ದಾರೆ ಎಂದು ಬಿಜೆಪಿ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಬರಬಹುದು. ಆದ್ದರಿಂದ, ಎಲ್ಲವನ್ನೂ ಮರೆತುಬಿಡಿ" ಎಂದು ರಾವತ್ ಹೇಳಿದ್ದಾರೆ.

"ಇದು ಸಂಪೂರ್ಣವಾಗಿ ಹಾಸ್ಯಾಸ್ಪದ ಹೇಳಿಕೆ ಮತ್ತು ಇದು ನಮ್ಮ ಸಶಸ್ತ್ರ ಪಡೆಗಳಿಗೆ ಮಾಡಿದ ಅವಮಾನ" ಎಂದು ರಾವತ್‌ ಹೇಳಿಕೆಗೆ ಬಿಜೆಪಿ ನಾಯಕ ರಾಮ್ ಕದಮ್ ತಿರುಗೇಟು ನೀಡಿದ್ದಾರೆ.

"ಶಿವಸೇನೆ-ಯುಬಿಟಿ ನಾಯಕರಾದ ಉದ್ಧವ್ ಠಾಕ್ರೆ ಮತ್ತು ಸಂಜಯ್ ರಾವತ್ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಮತ್ತು ಅವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು" ಎಂದು ಕದಮ್ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ

SCROLL FOR NEXT