ಸಾಂದರ್ಭಿಕ ಚಿತ್ರ  
ದೇಶ

ಉತ್ತರ ಪ್ರದೇಶದ ಹಾರ್ದೊಯ್ ಯಲ್ಲಿ ಅಪಘಾತ: ಐವರು ಸಾವು

ಶಹಾಬಾದ್ ವೃತ್ತ ಅಧಿಕಾರಿ ಅನುಜ್ ಮಿಶ್ರಾ, ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ, ಆಲಮ್‌ನಗರ ರಸ್ತೆಯಲ್ಲಿ ಕಂದಕಕ್ಕೆ ಬಿದ್ದು 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಾರ್ದೋಯ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಹಾರ್ದೋಯ್ ಜಿಲ್ಲೆಯಲ್ಲಿ ಕಾರು ಕಂದಕಕ್ಕೆ ಬಿದ್ದು ಆರು ವರ್ಷದ ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ.

ಶಹಾಬಾದ್ ವೃತ್ತ ಅಧಿಕಾರಿ ಅನುಜ್ ಮಿಶ್ರಾ, ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ, ಆಲಮ್‌ನಗರ ರಸ್ತೆಯಲ್ಲಿ ಕಂದಕಕ್ಕೆ ಬಿದ್ದು 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಲ್ಲಾ ಗಾಯಾಳುಗಳನ್ನು ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು, ಅಲ್ಲಿ ವೈದ್ಯರು ಒಂದು ಮಗು ಸೇರಿದಂತೆ ಐದು ಜನರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಿದ ನಂತರ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತರನ್ನು ಜಿತೇಂದ್ರ (22), ಆಕಾಶ್ (18), ಸಿದ್ಧಾರ್ಥ್ (6), ರಾಮು (35) ಮತ್ತು ಜೌಹರಿ (40) ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.

ಮೃತರು ಹಾರ್ದೋಯ್‌ನ ಪಾಲಿ ಪೊಲೀಸ್ ಠಾಣೆ ಪ್ರದೇಶದ ನಿವಾಸಿಗಳು. ಇಂದು ಶನಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT