ದತ್ತಾತ್ರೇಯ ಹೊಸಬಾಳೆ  
ದೇಶ

RSS ನಿಷೇಧಿಸಬೇಕು: ಖರ್ಗೆ ಹೇಳಿಕೆಗೆ ದತ್ತಾತ್ರೇಯ ಹೊಸಬಾಳೆ ಹೇಳಿದ್ದೇನು?

ಯಾರೋ ಬಯಸಿದ ಮಾತ್ರಕ್ಕೆ ಸಂಘಟನೆಯನ್ನು ನಿಷೇಧಿಸಲು ಸಾಧ್ಯವಿಲ್ಲ, ಇಂತಹ ಬೇಡಿಕೆ ಇಡುವವರು ಹಿಂದಿನ ಅನುಭವದಿಂದ ಪಾಠ ಕಲಿಯಬೇಕು ಎಂದು ತಿರುಗೇಟು ನೀಡಿದ್ದಾರೆ.

ನವದೆಹಲಿ: RSS ನಿಷೇಧಿಸಬೇಕು ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಶನಿವಾರ ಪ್ರತಿಕ್ರಿಯಿಸಿದ್ದಾರೆ.

ಯಾರೋ ಬಯಸಿದ ಮಾತ್ರಕ್ಕೆ ಸಂಘಟನೆಯನ್ನು ನಿಷೇಧಿಸಲು ಸಾಧ್ಯವಿಲ್ಲ, ಇಂತಹ ಬೇಡಿಕೆ ಇಡುವವರು ಹಿಂದಿನ ಅನುಭವದಿಂದ ಪಾಠ ಕಲಿಯಬೇಕು ಎಂದು ತಿರುಗೇಟು ನೀಡಿದ್ದಾರೆ.

ಜಬಲ್‌ಪುರದಲ್ಲಿ ಮೂರು ದಿನಗಳ ಆರ್ ಎಸ್ ಎಸ್ ನ ಅಖಿಲ ಭಾರತ ಕಾರ್ಯಕಾರಿಣಿ ಸಭೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮೂರು ಬಾರಿ ಇಂತಹ ಪ್ರಯತ್ನಗಳು ನಡೆದಿದ್ದವು, ಆಗ ಸಮಾಜ ಏನು ಹೇಳಿತು, ನ್ಯಾಯಾಲಯ ಏನು ಹೇಳಿತು? ಇಷ್ಟೆಲ್ಲ ಆದರೂ ಸಂಘದ ಕೆಲಸ ಬೆಳೆಯುತ್ತಲೇ ಹೋಯಿತು. ನಿಷೇಧ ಹೇರಲು ಸೂಕ್ತ ಕಾರಣಗಳಿರಬೇಕು ಎಂದರು.

ಯಾರೊ ಬಯಸಿದ ಮಾತ್ರಕ್ಕೆ ಅದು ಆಗುವುದಿಲ್ಲ. ಭಾರತದ ಏಕತೆ, ಭದ್ರತೆ ಮತ್ತು ಸಂಸ್ಕೃತಿಗಾಗಿ ಕೆಲಸ ಮಾಡುವ ಸಂಘಟನೆಯನ್ನು ನಿಷೇಧಿಸಬೇಕು ಎಂದು ನಾಯಕರೊಬ್ಬರು ಹೇಳಿದರೆ, ಅವರು ಕಾರಣವನ್ನು ಸಹ ತಿಳಿಸಬೇಕು" ಎಂದು ಹೊಸಬಾಳೆ ಹೇಳಿದರು.

ಸಮಾಜವು ಆರ್‌ಎಸ್‌ಎಸ್ ಅನ್ನು ಒಪ್ಪಿಕೊಂಡಿದೆ. ಸರ್ಕಾರಿ ವ್ಯವಸ್ಥೆ" ಕೂಡ ಅಂತಹ ನಿಷೇಧಗಳನ್ನು ತಪ್ಪು ಎಂದು ತೀರ್ಪು ನೀಡಿದೆ. ಈಗ ನಿಷೇಧಕ್ಕೆ ಒತ್ತಾಯಿಸುವವರು ಹಿಂದಿನ ಅನುಭವಗಳಿಂದ ಕಲಿಯಬೇಕು ಎಂದು ಆರ್ ಎಸ್ ಎಸ್ ಹಿರಿಯ ನಾಯಕ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

Bangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'..: BJP ನಾಯಕ ಟೆಮ್ಜೆನ್

'ಮುಲ್ಲಾಗಳು ತೊಲಗಲಿ': 3 ವರ್ಷದ ಬಳಿಕ ಇರಾನ್‌ನಲ್ಲಿ ಮತ್ತೆ ಬೃಹತ್ ಪ್ರತಿಭಟನೆ; ಬೀದಿಗಿಳಿದ Gen Zಗಳು, ಗುಂಡೇಟಿಗೆ 7 ಮಂದಿ ಬಲಿ!

ಮಣಿಪುರ: 27 ಕಚ್ಚಾ ಬಾಂಬ್‌ಗಳನ್ನು ನಿಷ್ಕ್ರಿಯಗೊಳಿಸಿದ ಪೊಲೀಸರು

SCROLL FOR NEXT