ಆನೆಗಳ ಸಾಂದರ್ಭಿಕ ಚಿತ್ರ 
ದೇಶ

22 ಆನೆಗಳ ಹಿಂಡು ಸುರಕ್ಷಿತವಾಗಿ ಹಳಿ ದಾಟಲು 3-4 ಗಂಟೆ ರೈಲುಗಳ ಸಂಚಾರ ಸ್ಥಗಿತ!

"ರೈಲು ಹಳಿಯ ಬಳಿ 22 ಆನೆಗಳ ಚಲನವಲನದ ಬಗ್ಗೆ ನಮಗೆ ವರದಿ ಬಂದ ಕೂಡಲೇ, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ರೈಲು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು ಎಂದು ಅವರು ಹೇಳಿದ್ದಾರೆ.

ಚಕ್ರಧರಪುರ: ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗದ ವ್ಯಾಪ್ತಿಯಲ್ಲಿ 22 ಕಾಡು ಆನೆಗಳ ಹಿಂಡು ಸುರಕ್ಷಿತವಾಗಿ ತೆರಳುವುದನ್ನು ಖಚಿತಪಡಿಸಿಕೊಳ್ಳಲು ಸುಮಾರು ಒಂದು ಡಜನ್ ಹೆಚ್ಚು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿಯಿಂದ ಬಿರ್ಸಾ ಮತ್ತು ಡಿ ಕ್ಯಾಬಿನ್ ವಿಭಾಗದ ನಡುವಿನ ಜಾರ್ಖಂಡ್-ಒಡಿಶಾ ಗಡಿಯ ಬಳಿ ಆನೆಗಳ ಚಲನವಲನದ ಬಗ್ಗೆ ಫೀಲ್ಡ್ ಅಧಿಕಾರಿಗಳು ಮಾಹಿತಿ ನೀಡಿದ ನಂತರ ರೈಲ್ವೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು, ಶನಿವಾರ ಬೆಳಗ್ಗೆ ಆನೆಗಳ ಹಿಂಡು ಸುರಕ್ಷಿತವಾಗಿ ಹಳಿ ದಾಟುವವರೆಗೆ 3-4 ಗಂಟೆಗಳ ಕಾಲ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಯಿತು ಎಂದು ಅವರು ಹೇಳಿದ್ದಾರೆ.

ವನ್ಯಜೀವಿ ಸಂರಕ್ಷಣೆ ಮತ್ತು ಕಾರ್ಯಾಚರಣೆಯ ಸುರಕ್ಷತೆಗೆ ತನ್ನ ಬದ್ಧತೆಯನ್ನು ಖಚಿತಪಡಿಸಿಕೊಳ್ಳಲು, ಚಕ್ರಧರಪುರ ವಿಭಾಗವು ನವೆಂಬರ್ 1 ರಂದು 22 ಆನೆಗಳ ಹಿಂಡಿನ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಲು ಬಿಸ್ರಾ ಮತ್ತು ಡಿ ಕ್ಯಾಬಿನ್ ವಿಭಾಗದ ನಡುವಿನ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು ಎಂದು ಆಗ್ನೇಯ ರೈಲ್ವೆಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ(ಸಿಕೆಪಿ ವಿಭಾಗ) ಆದಿತ್ಯ ಕುಮಾರ್ ಚೌಧರಿ ಅವರು ತಿಳಿಸಿದ್ದಾರೆ.

"ರೈಲು ಹಳಿಯ ಬಳಿ 22 ಆನೆಗಳ ಚಲನವಲನದ ಬಗ್ಗೆ ನಮಗೆ ವರದಿ ಬಂದ ಕೂಡಲೇ, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ರೈಲು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಹಣೆಗೆ ಗನ್ ಇಟ್ಟು ತೇಜಸ್ವಿ ತನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿಕೊಂಡಿದ್ದಾರೆ: ಪ್ರಧಾನಿ ಮೋದಿ

3ನೇ ಟಿ20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ದಾಖಲೆಯ ಜಯ, ತವರಿನಲ್ಲೇ ಕಾಂಗರೂಗಳಿಗೆ ಮುಖಭಂಗ

'200 ವರ್ಷ ಇತಿಹಾಸ, 1993ರಲ್ಲಿ ಕರ್ನಾಟಕ': ರಾಜ್ಯೋತ್ಸವದಂದೇ ಕನ್ನಡಕ್ಕೆ ಜಮೀರ್ ಅಪಮಾನ: ಜೆಡಿಎಸ್ ಕಿಡಿ, Video

3ನೇ ಟಿ20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 5 ವಿಕೆಟ್ ಭರ್ಜರಿ ಜಯ

ಬಿಹಾರ: ಪ್ರಚಾರದ ವೇಳೆ 'ಮೀನು ಹಿಡಿದ' ರಾಹುಲ್ ಗಾಂಧಿ! Video

SCROLL FOR NEXT