ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡ 
ದೇಶ

ವಿಶ್ವಕಪ್ ವಿಜೇತ ಮಹಿಳಾ ತಂಡಕ್ಕೆ ವಜ್ರದ ಆಭರಣ ಉಡುಗೊರೆ: ಸೂರತ್ ಉದ್ಯಮಿ ಘೋಷಣೆ

ಗೋವಿಂದ್ ಧೋಲಾಕಿಯಾ ಅವರು ಶ್ರೀ ರಾಮಕೃಷ್ಣ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್‌ನ ಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದಾರೆ.

ಸೂರತ್: ಸೂರತ್ ಮೂಲದ ಉದ್ಯಮಿ ಮತ್ತು ರಾಜ್ಯಸಭಾ ಸದಸ್ಯ ಗೋವಿಂದ್ ಧೋಲಾಕಿಯಾ ಅವರು ಏಕದಿನ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ವಜ್ರಾಭರಣ ಮತ್ತು ಸೌರ ಫಲಕಗಳನ್ನು ಬಹುಮಾನ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ.

ಗೋವಿಂದ್ ಧೋಲಾಕಿಯಾ ಅವರು ಶ್ರೀ ರಾಮಕೃಷ್ಣ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್‌ನ ಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದಾರೆ.

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಮಹಿಳಾ ತಂಡ, ದಕ್ಷಿಣ ಆಫ್ರಿಕಾದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಗೌರವ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರಿಗೆ ಪತ್ರ ಬರೆದ ಧೋಲಾಕಿಯಾ ಅವರು, ಚಾಂಪಿಯನ್ ತಂಡದ ಪ್ರತಿಯೊಬ್ಬ ಸದಸ್ಯರಿಗೂ "ಅವರ ಪ್ರತಿಭೆ ಮತ್ತು ಗೆಲುವಿಗೆ ಮೆಚ್ಚುಗೆಯ ಸಂಕೇತವಾಗಿ" "ವಜ್ರದ ಆಭರಣ" ವನ್ನು ನೀಡುವ ಬಯಕೆ ವ್ಯಕ್ತಪಡಿಸಿದ್ದಾರೆ.

ತಮ್ಮ ಲೋಕೋಪಕಾರಿ ಕೆಲಸಕ್ಕೆ ಹೆಸರುವಾಸಿಯಾದ ಧೋಲಾಕಿಯಾ, "ನಮ್ಮ ದೇಶಕ್ಕೆ ಬೆಳಕು ನೀಡಿದವರ ಬದುಕು ಸಹ ಸದಾ ಬೆಳಗುತ್ತಲೇ ಇರುಬೇಕು ಎಂಬ ಉದ್ದೇಶದಿಂದ ಅವರ ಮನೆಗಳಿಗೆ ಸೋಲಾರ್ ಫಲಕಗಳನ್ನು ಉಡುಗೊರೆಯಾಗಿ ನೀಡುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

ಭಾರತವನ್ನು ಪ್ರತಿನಿಧಿಸುವ ಮಹಿಳಾ ಕ್ರಿಕೆಟಿಗರು ತಮ್ಮ ಧೈರ್ಯ, ಶಿಸ್ತು ಮತ್ತು ದೃಢಸಂಕಲ್ಪದಿಂದ ಈಗಾಗಲೇ ಶತಕೋಟಿ ಭಾರತೀಯರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಧೋಲಾಕಿಯಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!