ಸಾಂದರ್ಭಿಕ ಚಿತ್ರ online desk
ದೇಶ

ಬಂಗಾಳ SIR: ಗುರುತಿನ ದಾಖಲೆಗಳಲ್ಲಿ ದೋಷದಿಂದ ನೊಂದು ವ್ಯಕ್ತಿ ಆತ್ಮಹತ್ಯೆ!

ಉಲುಬೇರಿಯಾ ಪ್ರದೇಶದ ಖಾಲಿಸಾನಿ ನಿವಾಸಿ ಜಹೀರ್ ಮಾಲ್ ಅವರು ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಹೌರಾ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ನಡೆಯುತ್ತಿದ್ದು, ಹೌರಾ ಜಿಲ್ಲೆಯಲ್ಲಿ ಮಂಗಳವಾರ 30 ವರ್ಷದ ವ್ಯಕ್ತಿಯೊಬ್ಬ ತನ್ನ ಗುರುತಿನ ದಾಖಲೆಯಲ್ಲಿನ ದೋಷಗಳಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಲುಬೇರಿಯಾ ಪ್ರದೇಶದ ಖಾಲಿಸಾನಿ ನಿವಾಸಿ ಜಹೀರ್ ಮಾಲ್ ಅವರು ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರ ಕುಟುಂಬವು, ಜಹೀರ್ ಅವರ ಅಧಿಕೃತ ದಾಖಲೆಗಳಲ್ಲಿ ಒಂದರಲ್ಲಿ ಕಾಗುಣಿತ ದೋಷ ಕಂಡುಬಂದ ನಂತರ ಅವರು ತೀವ್ರ ಒತ್ತಡದಲ್ಲಿದ್ದರು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ತಪ್ಪನ್ನು ಸರಿಪಡಿಸುವ ಪ್ರಯತ್ನದಲ್ಲಿ ಅವರು ಕಳೆದ ಕೆಲವು ವಾರಗಳಿಂದ ಸಂಬಂಧಪಟ್ಟ ಸ್ಥಳೀಯ ಕಚೇರಿಗಳಿಗೆ ಹಲವು ಬಾರಿ ಭೇಟಿ ನೀಡಿದ್ದರು. ಆದರೆ ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

"SIR ಪ್ರಕ್ರಿಯೆಯ ಸಮಯದಲ್ಲಿ ಅವರ ಪೌರತ್ವ ಅಥವಾ ಮತದಾರರ ಅರ್ಹತೆ ಪರಿಶೀಲಿಸುವಲ್ಲಿ ಈ ದೋಷವು ತೊಡಕುಗಳಿಗೆ ಕಾರಣವಾಗಬಹುದು ಎಂದು ಜಹೀರ್ ಆತಂಕಗೊಂಡಿದ್ದರು" ಎಂದು ಅವರು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್(TMC) ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಸಚಿವ ಪುಲಕ್ ರಾಯ್ ಅವರಿಗೆ ದುಃಖಿತ ಕುಟುಂಬವನ್ನು ಭೇಟಿ ಮಾಡುವಂತೆ ಸೂಚಿಸಿದ್ದಾರೆ.

ರಾಯ್ ನಂತರ ಸಂಬಂಧಿಕರನ್ನು ಭೇಟಿ ಮಾಡಿ ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಸಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

Toxic Teaserನಲ್ಲಿ 'ಟೂ ಮಚ್ ಸೆಕ್ಸ್' ಇದೆಯೇ? CBFCಗೆ ಮತ್ತೊಂದು ದೂರು!

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

IPL 2026: RCB ತವರು ಮೈದಾನ ಕೊನೆಗೂ ಬಹುತೇಕ ಫಿಕ್ಸ್, ಈ ಎರಡು ಮೈದಾನಗಳಲ್ಲೇ ಪಂದ್ಯ!

SCROLL FOR NEXT