ಪ್ರಾತಿನಿಧಿಕ ಚಿತ್ರ 
ದೇಶ

Pahalgam terror attack: ಆರು ತಿಂಗಳ ನಂತರ ಕಾಶ್ಮೀರದಲ್ಲಿ ಸಿನಿಮಾ ಚಿತ್ರೀಕರಣ ಪುನರಾರಂಭ

ಈ ಹಾಸ್ಯ ಚಿತ್ರವನ್ನು 'ಜೆಸ್ಸಿ' ಮತ್ತು 'ಲೇಡೀಸ್ & ಜಂಟಲ್‌ಮನ್'ನಂತಹ ಚಿತ್ರಗಳಿಗೆ ಹೆಸರುವಾಸಿಯಾದ ವಿಮಲ್ ಕೃಷ್ಣ ನಿರ್ದೇಶಿಸುತ್ತಿದ್ದಾರೆ.

ಶ್ರೀನಗರ: ಕಾಶ್ಮೀರದ ಪ್ರವಾಸೋದ್ಯಮಕ್ಕೆ ಇದೀಗ ಶುಭಸುದ್ದಿಯೆಂದರೆ, 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಆರು ತಿಂಗಳ ನಂತರ, ಕಣಿವೆಯಲ್ಲಿ ಸಿನಿಮಾ ಚಿತ್ರೀಕರಣಗಳು ಪುನರಾರಂಭಗೊಂಡಿವೆ.

ಏಪ್ರಿಲ್ 22 ರಂದು ಭಯೋತ್ಪಾದಕ ದಾಳಿ ನಡೆದ ಸ್ಥಳವಾದ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರವಾಸಿ ರೆಸಾರ್ಟ್‌ನಲ್ಲಿ ತೆಲುಗು ಚಿತ್ರತಂಡವು ಚಿತ್ರೀಕರಣವನ್ನು ಪ್ರಾರಂಭಿಸಿದೆ.

ಈ ಹಾಸ್ಯ ಚಿತ್ರವನ್ನು 'ಜೆಸ್ಸಿ' ಮತ್ತು 'ಲೇಡೀಸ್ & ಜಂಟಲ್‌ಮನ್'ನಂತಹ ಚಿತ್ರಗಳಿಗೆ ಹೆಸರುವಾಸಿಯಾದ ವಿಮಲ್ ಕೃಷ್ಣ ನಿರ್ದೇಶಿಸುತ್ತಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣ, ಕಾಶ್ಮೀರವು ಪ್ರವಾಸಿಗರಿಗೆ ಮತ್ತು ಚಲನಚಿತ್ರ ಚಿತ್ರೀಕರಣಕ್ಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಹೇಳಿದರು.

'ಪ್ರತಿಯೊಬ್ಬ ಕಾಶ್ಮೀರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಶೂಟಿಂಗ್‌ಗಾಗಿ ಇಲ್ಲಿಗೆ ಬರುವ ಮೊದಲ ಚಿತ್ರತಂಡ ನಮ್ಮದು. ಇದು ಶೇ 100 ರಷ್ಟು ಸುರಕ್ಷಿತವಾಗಿದೆ ಎಂದು ನಾನು ಹೇಳಬಲ್ಲೆ. ನಾವು ಸಂಪೂರ್ಣವಾಗಿ ಸುರಕ್ಷಿತವೆಂದು ಭಾವಿಸುತ್ತೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ ಎಂದು ನಾನು ಭಾವಿಸುತ್ತೇನೆ' ಎಂದರು.

'ನಾವು ಚಿತ್ರಕ್ಕಾಗಿ ಸುಂದರವಾದ ಸ್ಥಳವನ್ನು ಹುಡುಕುತ್ತಿದ್ದೆವು ಮತ್ತು ಅದು ಕಾಶ್ಮೀರದಲ್ಲಿ ಕಂಡುಕೊಂಡೆವು. ಕಾಶ್ಮೀರದಲ್ಲಿ ಏಕೆ ಚಿತ್ರೀಕರಣ ಮಾಡಬಾರದು ಎಂದು ನಾನು ಯೋಚಿಸಿದೆ. ಈಗ ಇಲ್ಲಿ ಸಂಪೂರ್ಣವಾಗಿ ಸುರಕ್ಷಿತವಾಗಿದೆ. ಜುಲೈನಲ್ಲಿ ನಾವು ಇಲ್ಲಿಗೆ ಬಂದಿದ್ದೆವು ಮತ್ತು ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಸರ್ಕಾರ, ಭದ್ರತಾ ಪಡೆಗಳು ಮತ್ತು ವಿಶೇಷವಾಗಿ ಸ್ಥಳೀಯರು ನಮ್ಮನ್ನು ತಮ್ಮ ಕುಟುಂಬ ಸದಸ್ಯರಂತೆ ನಡೆಸಿಕೊಂಡಿದ್ದಾರೆ. ಪಹಲ್ಗಾಮ್ ವೇಳಾಪಟ್ಟಿಯನ್ನು ಪೂರ್ಣಗೊಳಿಸಿದ ನಂತರ, ಚಿತ್ರತಂಡವು ಶ್ರೀನಗರದಲ್ಲಿ ಚಿತ್ರೀಕರಣ ಮುಂದುವರಿಸಲಿದೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತೀಯ ಸೇನೆ ಸಹ ಮೇಲ್ಜಾತಿಯವರಿಂದ ನಿಯಂತ್ರಿಸಲ್ಪಡುತ್ತದೆ': ರಾಹುಲ್ ಗಾಂಧಿಯಿಂದ ಹೊಸ ವಿವಾದ

ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ರ ವಯೋಮಾನದವರು- ಸಿಎಂ ಸಿದ್ದರಾಮಯ್ಯ

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ತಡೆಯಾಜ್ಞೆ ವಿರೋಧಿಸಿ ಸರ್ಕಾರದ ಮೇಲ್ಮನವಿ; 'ಆದೇಶ ಕಾಯ್ದಿರಿಸಿದ' ಹೈಕೋರ್ಟ್

ಏಷ್ಯಾ ಕಪ್ ವಿವಾದ: ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್‌ಗೆ ಐಸಿಸಿ ಕಠಿಣ ಶಿಕ್ಷೆ, ಸೂರ್ಯಕುಮಾರ್ ಯಾದವ್‌ಗೆ ದಂಡ

ಭಾರತ ಸದ್ಯದಲ್ಲೇ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ- ಕೇಂದ್ರ ಹಣಕಾಸು ಸಚಿವೆ

SCROLL FOR NEXT