ಪ್ರಧಾನಿ ಮೋದಿ 
ದೇಶ

Bihar Poll: ಈ ಬಾರಿ NDA ದಾಖಲೆಯ ಗೆಲುವು; ಜಂಗಲ್ ರಾಜ್ ಹೀನಾಯ ಸೋಲು ನಿಶ್ಚಿತ- ಪ್ರಧಾನಿ ಮೋದಿ

ಸಮೀಕ್ಷೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಎನ್ ಡಿಎ ದೊಡ್ಡ ಗೆಲುವು ಸಾಧಿಸುತ್ತದೆ ಎಂದು ದೃಢಪಡಿಸಲಾಗಿದೆ. ಆದ್ದರಿಂದ ಗೆಲುವಿನ ಬಗ್ಗೆ ನನಗೆ ಯಾವುದೇ ಪ್ರಶ್ನೆಗಳಿಲ್ಲ ಆದರೆ ಹೆಚ್ಚು ಹೆಚ್ಚು ಮತದಾನ ನಡೆಯಬೇಕು ಎಂದು ಪ್ರಧಾನಿ ಹೇಳಿದರು.

ಪಾಟ್ನಾ: ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಳೆದ 20 ವರ್ಷಗಳಲ್ಲೇ ಅತ್ಯಧಿಕ ದಾಖಲೆ ಮತಗಳಿಂದ ಎನ್ ಡಿಎ ಗೆಲ್ಲಿಸಲು ಜನರು ನಿರ್ಧರಿಸಿದ್ದು, ಜಂಗಲ್ ರಾಜ್ ಜನರು ಹೀನಾಯವಾಗಿ ಸೋಲಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭವಿಷ್ಯ ನುಡಿದಿದ್ದಾರೆ.

ಬಿಹಾರದ ಮಹಿಳಾ ಬಿಜೆಪಿ-ಎನ್ ಡಿಎ ಕಾರ್ಯಕರ್ತರೊಂದಿಗೆ ನಮೋ ಆಪ್ ಮೂಲಕ ಸಂವಾದ ನಡೆಸಿದ ಪ್ರಧಾನಿ, ಬಿಹಾರದಲ್ಲಿ ಹಲವು ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದೇನೆ. ಪ್ರತಿಯೊಂದು ಸಮಾವೇಶದಲ್ಲೂ ದಾಖಲೆ ಪ್ರಮಾಣದಲ್ಲಿ ಜನರು ಸೇರುತ್ತಿದ್ದು, ಹೆಚ್ಚಿನ ಸಂಖ್ಯೆಯ ಮಹಿಳೆಯರು ಬರುತ್ತಿದ್ದಾರೆ. ಬಿಹಾರ ಬಿಜೆಪಿಯ ಮಹಿಳಾ ಕಾರ್ಯಕರ್ತರು 'ಮೇರಾ ಬೂತ್, ಸಬ್ಸೆ ಮಜ್ಬೂತ್' ಎಂಬ ಸಂಕಲ್ಪದೊಂದಿಗೆ ಅದ್ಭುತವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಸಮೀಕ್ಷೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಎನ್ ಡಿಎ ದೊಡ್ಡ ಗೆಲುವು ಸಾಧಿಸುತ್ತದೆ ಎಂದು ದೃಢಪಡಿಸಲಾಗಿದೆ. ಆದ್ದರಿಂದ ಗೆಲುವಿನ ಬಗ್ಗೆ ನನಗೆ ಯಾವುದೇ ಪ್ರಶ್ನೆಗಳಿಲ್ಲ ಆದರೆ ಹೆಚ್ಚು ಹೆಚ್ಚು ಮತದಾನ ನಡೆಯಬೇಕು" ಎಂದು ಪ್ರಧಾನಿ ಹೇಳಿದರು.

ಎನ್‌ಡಿಎ ಬಗ್ಗೆ ಜನರಲ್ಲಿ ಅಪಾರ ಉತ್ಸಾಹವಿದೆ. ಅವರ ಮಾತುಗಳು ಬಡವರು, ದಲಿತರು, ಮಹಾ ದಲಿತರು, ಹಿಂದುಳಿದವರು ಮತ್ತು ಅತ್ಯಂತ ಹಿಂದುಳಿದವರಲ್ಲಿ ಪ್ರಚಲಿತದಲ್ಲಿರುವ ಭಾವನೆಯನ್ನು ಪ್ರತಿಧ್ವನಿಸುತ್ತವೆ ಎಂದರು.

ಕಳೆದ 20 ವರ್ಷಗಳಲ್ಲಿಯೇ ಅತ್ಯಧಿಕ ದಾಖಲೆಯ ಪ್ರಮಾಣದಲ್ಲಿ ಎನ್‌ಡಿಎ ಗೆಲ್ಲಿಸಲು ಬಿಹಾರದ ಜನರು ಮನಸ್ಸು ಮಾಡಿದ್ದಾರೆ, ಆದರೆ 'ಜಂಗಲ್ ರಾಜ್ ಜನರು' ರಾಜ್ಯದಲ್ಲಿ ಅತ್ಯಂತ ಕೆಟ್ಟ ಸೋಲನ್ನು ಅನುಭವಿಸಲಿದ್ದಾರೆ ಎಂದು ಅವರು ಹೇಳಿದರು.

ಬಿಹಾರದಲ್ಲಿ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತೀಯ ಸೇನೆ ಸಹ ಮೇಲ್ಜಾತಿಯವರಿಂದ ನಿಯಂತ್ರಿಸಲ್ಪಡುತ್ತದೆ': ರಾಹುಲ್ ಗಾಂಧಿಯಿಂದ ಹೊಸ ವಿವಾದ

ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ರ ವಯೋಮಾನದವರು- ಸಿಎಂ ಸಿದ್ದರಾಮಯ್ಯ

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ತಡೆಯಾಜ್ಞೆ ವಿರೋಧಿಸಿ ಸರ್ಕಾರದ ಮೇಲ್ಮನವಿ; 'ಆದೇಶ ಕಾಯ್ದಿರಿಸಿದ' ಹೈಕೋರ್ಟ್

ಏಷ್ಯಾ ಕಪ್ ವಿವಾದ: ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್‌ಗೆ ಐಸಿಸಿ ಕಠಿಣ ಶಿಕ್ಷೆ, ಸೂರ್ಯಕುಮಾರ್ ಯಾದವ್‌ಗೆ ದಂಡ

ಭಾರತ ಸದ್ಯದಲ್ಲೇ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ- ಕೇಂದ್ರ ಹಣಕಾಸು ಸಚಿವೆ

SCROLL FOR NEXT