ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 
ದೇಶ

SIR ವಿರುದ್ಧ ಕಾನೂನು ಹೋರಾಟಕ್ಕೆ ಕೇರಳ ಸರ್ಕಾರ ನಿರ್ಧಾರ; ಪ್ರತಿಪಕ್ಷಗಳಿಂದಲೂ ಬೆಂಬಲ

ಭಾರತೀಯ ಜನತಾ ಪಕ್ಷವನ್ನು ಹೊರತುಪಡಿಸಿ ಎಲ್ಲಾ ಪಕ್ಷಗಳು ಸರ್ಕಾರದ ಈ ಕ್ರಮವನ್ನು ಬೆಂಬಲಿಸಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಅನುಷ್ಠಾನದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಘೋಷಿಸಿದ್ದಾರೆ.

ಇಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆನ್‌ಲೈನ್‌ ಮೂಲಕ ನಡೆಸಿದ ಸರ್ವಪಕ್ಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷವನ್ನು ಹೊರತುಪಡಿಸಿ ಎಲ್ಲಾ ಪಕ್ಷಗಳು ಸರ್ಕಾರದ ಈ ಕ್ರಮವನ್ನು ಬೆಂಬಲಿಸಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವುದರಿಂದ, SIR ಅನ್ನು ಹೇಗೆ ಪ್ರಶ್ನಿಸಬೇಕು ಎಂಬುದರ ಕುರಿತು ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಕಾನೂನು ಸಲಹೆ ಪಡೆಯುತ್ತವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ನವೀಕರಿಸಿದ ಪಟ್ಟಿ ಈಗಾಗಲೇ ಜಾರಿಯಲ್ಲಿರುವಾಗ, 2002 ರ ಪಟ್ಟಿಗಳನ್ನು ಆಧರಿಸಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವುದು 'ಅವೈಜ್ಞಾನಿಕ' ಮತ್ತು 'ದುರುದ್ದೇಶಪೂರಿತ ಉದ್ದೇಶ'ವನ್ನು ಹೊಂದಿದೆ ಎಂದು ಕೇರಳ ಸಿಎಂ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಎತ್ತಿದ ಕಳವಳಗಳನ್ನು ಸಂಪೂರ್ಣವಾಗಿ ಒಪ್ಪುತ್ತೇವೆ ಮತ್ತು ಎಸ್ಐಆರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದರೆ ಬೆಂಬಲಿಸಲು ಸಿದ್ಧರಿದ್ದೇವೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಅವರು ಹೇಳಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷ-ಮಾರ್ಕ್ಸ್‌ವಾದಿ ರಾಜ್ಯ ಕಾರ್ಯದರ್ಶಿ ಎಂ ವಿ ಗೋವಿಂದನ್ ಅವರು ಎಸ್ಐಆರ್ 'ಅಸಂವಿಧಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ' ಎಂದು ಟೀಕಿಸಿದರು.

ರಾಜ್ಯದಲ್ಲಿ ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಬೂತ್ ಮಟ್ಟದ ಅಧಿಕಾರಿಗಳು(ಬಿಎಲ್‌ಒಗಳು) ಗಣತಿ ನಮೂನೆಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಮನೆಗಳಿಗೆ ಭೇಟಿ ನೀಡಲು ಆರಂಭಿಸಿದ ಒಂದು ದಿನದ ನಂತರ ಸರ್ವಪಕ್ಷ ಸಭೆ ನಡೆಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ 'ದೆಹಲಿಗೆ' ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್! ವರಿಷ್ಠರನ್ನು ಭೇಟಿಯಾಗ್ತಾರಾ?

ನವದೆಹಲಿ: 'ವಿಶ್ವಕಪ್ ವಿಜೇತ' ಆಟಗಾರ್ತಿಯರ ಜೊತೆಗೆ ಪ್ರಧಾನಿ ಮೋದಿ ಸಂವಾದ! ದೀಪ್ತಿ ಶರ್ಮಾರ 'ವಿಶೇಷ ಶಕ್ತಿ'ಯ ಗುಣಗಾನ

ನಡು ಮುರಿದರೂ ಬುದ್ಧಿ ಕಲಿಯದ ಪಾಪಿಸ್ತಾನ; Op Sindoor ನಡೆದ ಆರೇ ತಿಂಗಳಲ್ಲಿ ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಸ್ಕೆಚ್; ಲಷ್ಕರ್, ಜೈಶ್ ಹೊಸ ಪ್ಲಾನ್ ಬಹಿರಂಗ!

ICC ಮಹಿಳಾ ವಿಶ್ವಕಪ್ ಚಾಂಪಿಯನ್ಸ್: ಭಾರತ ತಂಡಕ್ಕೆ 'ಬಂಪರ್' ಬಹುಮಾನ ಘೋಷಿಸಿದ ಟಾಟಾ ಮೋಟಾರ್ಸ್!

'ಕೊಟ್ಟ ಮಾತು ಉಳಿಸಿಕೊಳ್ಳಿ': ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಗೆ ಜೆಮಿಮಾ ಆಗ್ರಹ! Video

SCROLL FOR NEXT