ವಿಶ್ವಕಪ್ ಗೆದ್ದ ಭಾರತ ತಂಡದೊಂದಿಗೆ ಪ್ರಧಾನಿ ಮೋದಿ 
ದೇಶ

ನವದೆಹಲಿ: 'ವಿಶ್ವಕಪ್ ವಿಜೇತ' ಆಟಗಾರ್ತಿಯರ ಜೊತೆಗೆ ಪ್ರಧಾನಿ ಮೋದಿ ಸಂವಾದ! ದೀಪ್ತಿ ಶರ್ಮಾರ 'ವಿಶೇಷ ಶಕ್ತಿ'ಯ ಗುಣಗಾನ

ಮಹಿಳಾ ವಿಶ್ವಕಪ್ ಚಾಂಪಿಯನ್ ಗಳಿಗೆ ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ, ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತೋರಿದ ಅದ್ಬುತ ಪ್ರದರ್ಶನಕ್ಕೆ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡವನ್ನು ಅಭಿನಂದಿಸಿದರು.

ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಮತ್ತು ಮುಖ್ಯ ತರಬೇತುದಾರ ಅಮೋಲ್ ಮುಜುಂದಾರ್ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದರು.

ಮಹಿಳಾ ವಿಶ್ವಕಪ್ ಚಾಂಪಿಯನ್ ಗಳಿಗೆ ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ, ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತೋರಿದ ಅದ್ಬುತ ಪ್ರದರ್ಶನಕ್ಕೆ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡವನ್ನು ಅಭಿನಂದಿಸಿದ್ದು, ಅವರೊಂದಿಗೆ ಸಂವಾದ ನಡೆಸಿದ್ದಾರೆ.

ಸತತ ಮೂರು ಸೋಲುಗಳನ್ನು ಅನುಭವಿಸಿದ ನಂತರ ಭಾರತ ಮಹಿಳಾ ತಂಡದ ಕಂಬ್ಯಾಕ್ ನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. 2017ರ ವಿಶ್ವಕಪ್ ಬಳಿಕ ಪ್ರಧಾನಿ ಅವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡ ನಾಯಕಿ ಹರ್ಮನ್ ಪ್ರೀತ್ ಕೌರ್, ಅಂದು ಟ್ರೋಪಿ ಇಲ್ಲದೆ ಬಂದಿದ್ದೆವು. ಆದರೆ ಈಗ ಟ್ರೋಫಿ ಗೆದ್ದು ಪ್ರಧಾನಿ ಭೇಟಿಯಾಗಿದ್ದೇವೆ.ಹೀಗೆ ಭೇಟಿಯಾಗುವುದಾಗಿ ಆಶಿಸಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಅವರ ಮಾತುಗಳು ಸದಾ ಸ್ಪೂರ್ತಿದಾಯಕವಾಗಿವೆ. ಅವರು ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಉಪ ನಾಯಕಿ ಸ್ಮೃತಿ ಮಂಧಾನ ಹೇಳಿದ್ದಾರೆ.

ದೀಪ್ತಿ ಶರ್ಮಾರ 'ವಿಶೇಷ ಶಕ್ತಿ'ಯ ಗುಣಗಾನ: ದೀಪ್ತಿ ಶರ್ಮಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ 'ಜೈ ಶ್ರೀ ರಾಮ್' ಎಂದು ಬರೆದುಕೊಂಡದ್ದು ಮತ್ತು ಅವರ ತೋಳಿನ ಮೇಲೆ ಭಗವಾನ್ ಹನುಮಾನ್ ಅವರ ಹಚ್ಚೆ ಇದ್ದ ಬಗ್ಗೆ ಪ್ರಧಾನಿ ಚರ್ಚಿಸಿದ್ದಾರೆ. ಅದು ಅವರಿಗೆ ಶಕ್ತಿ ನೀಡಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ 'ದೆಹಲಿಗೆ' ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್! ವರಿಷ್ಠರನ್ನು ಭೇಟಿಯಾಗ್ತಾರಾ?

ನಡು ಮುರಿದರೂ ಬುದ್ಧಿ ಕಲಿಯದ ಪಾಪಿಸ್ತಾನ; Op Sindoor ನಡೆದ ಆರೇ ತಿಂಗಳಲ್ಲಿ ಕಾಶ್ಮೀರದಲ್ಲಿ ಮತ್ತೊಂದು ದಾಳಿಗೆ ಸ್ಕೆಚ್; ಲಷ್ಕರ್, ಜೈಶ್ ಹೊಸ ಪ್ಲಾನ್ ಬಹಿರಂಗ!

ICC ಮಹಿಳಾ ವಿಶ್ವಕಪ್ ಚಾಂಪಿಯನ್ಸ್: ಭಾರತ ತಂಡಕ್ಕೆ 'ಬಂಪರ್' ಬಹುಮಾನ ಘೋಷಿಸಿದ ಟಾಟಾ ಮೋಟಾರ್ಸ್!

'ಕೊಟ್ಟ ಮಾತು ಉಳಿಸಿಕೊಳ್ಳಿ': ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಗೆ ಜೆಮಿಮಾ ಆಗ್ರಹ! Video

EAM ಜೈಶಂಕರ್ ಮುಂದಿನ ವಾರ ಕೆನಡಾಕ್ಕೆ ಭೇಟಿ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು!

SCROLL FOR NEXT