ಭಾಸ್ಕರ್ ಜ್ಯೋತಿ ಮಹಾಂತ 
ದೇಶ

ಜುಬೀನ್ ಸಾವಿನ ಪ್ರಕರಣದಲ್ಲಿ ಸಹೋದರನ ಬಂಧನ: ಅಸ್ಸಾಂ ಮುಖ್ಯ ಮಾಹಿತಿ ಆಯುಕ್ತ ರಾಜೀನಾಮೆ

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಸಲಹೆಯ ಮೇರೆಗೆ ಭಾಸ್ಕರ್ ಜ್ಯೋತಿ ಮಹಾಂತ ಅವರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಗುವಾಹಟಿ: ಸಿಂಗಾಪುರದಲ್ಲಿ ಖ್ಯಾತ ಗಾಯಕ ಜುಬೀನ್ ಗಾರ್ಗ್ ಸಾವಿನ ಪ್ರಕರಣದಲ್ಲಿ ತಮ್ಮ ಸಹೋದರ ಶ್ಯಾಮಕಾನು ಮಹಾಂತ ಅವರನ್ನು ಬಂಧಿಸಿದ ನಂತರ ಅಸ್ಸಾಂ ಮುಖ್ಯ ಮಾಹಿತಿ ಆಯುಕ್ತ(ಸಿಐಸಿ) ಭಾಸ್ಕರ್ ಜ್ಯೋತಿ ಮಹಾಂತ ಅವರು ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಸಲಹೆಯ ಮೇರೆಗೆ ಭಾಸ್ಕರ್ ಜ್ಯೋತಿ ಮಹಾಂತ ಅವರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸಂಗೀತ ದಿಗ್ಗಜ ಜುಬೀನ್ ಗಾರ್ಗ್ ಅವರ ನಿಗೂಢ ಸಾವಿನ ಪ್ರಕರಣದಲ್ಲಿ ಮಹಂತ ಅವರ ಸಹೋದರ ಶ್ಯಾಮಕಾನು ಮಹಾಂತ ಅವರನ್ನು ಇತರ ಆರು ಜನರೊಂದಿಗೆ ಬಂಧಿಸಲಾಗಿದ್ದು, ಹಲವಾರು ಆರ್‌ಟಿಐ ಅರ್ಜಿಗಳು ಸಲ್ಲಿಕೆಯಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸೆಪ್ಟೆಂಬರ್ 19 ರಂದು ಶ್ಯಾಮಕಾನು ಆಯೋಜಿಸಿದ್ದ 4ನೇ ಈಶಾನ್ಯ ಭಾರತ ಉತ್ಸವದಲ್ಲಿ ಪ್ರದರ್ಶನ ನೀಡಲು ಸಿಂಗಾಪುರಕ್ಕೆ ತೆರಳಿದ್ದ ಗಾರ್ಗ್ ಸಮುದ್ರದಲ್ಲಿ ಈಜುವಾಗ ಮುಳುಗಿ ಸಾವನ್ನಪ್ಪಿದ್ದರು.

ಅಸ್ಸಾಂನ ಮಾಜಿ ಐಪಿಎಸ್ ಅಧಿಕಾರಿ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ರಾಗಿರುವ ಭಾಸ್ಕರ್ ಜ್ಯೋತಿ ಮಹಾಂತ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸಹೋದರನ ಹೆಸರು ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ, ಸಿಐಸಿಯಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ಭಾವಿಸಿದೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

"ನನ್ನ ಸಹೋದರನ ಬಗ್ಗೆ ಯಾವುದೇ ಆರ್‌ಟಿಐ ಅರ್ಜಿ ಸಲ್ಲಿಸಿದರೆ, ಅದು ಅನುಮಾನಗಳಿಗೆ ಅಥವಾ ತಪ್ಪು ವ್ಯಾಖ್ಯಾನಗಳಿಗೆ ಕಾರಣವಾಗಬಹುದು ಎಂದು ನನ್ನ ಆತ್ಮಸಾಕ್ಷಿ ಹೇಳಿತು. ಸಣ್ಣ ಅನುಮಾನವನ್ನು ತಪ್ಪಿಸಲು, ನಾನು ರಾಜೀನಾಮೆ ನೀಡುತ್ತಿದ್ದೇನೆ" ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ತೈಲ ಸಾಗಣೆ ನಿಂತರೆ ಇದೂವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

US-Iran war ಎಫೆಕ್ಟ್: ಪಾಕಿಸ್ತಾನದಲ್ಲಿ ಇಂಧನ ಸಂಕಷ್ಟ; ಶಾಲೆಗಳು 2 ವಾರ ಬಂದ್, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

ಆಹಾರ, ಶೂ, ಸಮವಸ್ತ್ರ ಎಲ್ಲಾ ಸೌಲಭ್ಯಗಳಿದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ: ಸರ್ಕಾರ ವಿಷಾದ

'ದೆಹಲಿಯಲ್ಲಿ ಯಾರನ್ನು ಭೇಟಿ ಮಾಡಿದ್ದೇನೆ ಎಂದು ಬಹಿರಂಗಪಡಿಸುವುದಿಲ್ಲ, ಬೆಂಗಳೂರಿನಲ್ಲಿ ಶಾಸಕರಿಗೆ ಡಿನ್ನರ್ ಮೀಟಿಂಗ್ ಏರ್ಪಡಿಸಿದ್ದೇನೆ': ಡಿ ಕೆ ಶಿವಕುಮಾರ್-Video

ಹೆಜ್ಬೊಲ್ಲಾಹ್‌ ಹೆಡೆಮುರಿ ಕಟ್ಟಿದ ಇಸ್ರೇಲ್; ದಕ್ಷಿಣ ಲೆಬನಾನ್ ನಲ್ಲಿದ್ದ ಉಗ್ರ ಸಂಘಟನೆ ಮುಖ್ಯಸ್ಥನ ಭೀಕರ ಹತ್ಯೆ!

SCROLL FOR NEXT