ಪ್ರಶಾಂತ್ ಕಿಶೋರ್ online desk
ದೇಶ

ಮೊದಲ ಹಂತದ ಮತದಾನಕ್ಕೂ ಮುನ್ನವೇ ಪ್ರಶಾಂತ್ ಕಿಶೋರ್ ಗೆ ಭಾರೀ ಹಿನ್ನಡೆ: BJP ಸೇರಿದ ಜನ್ ಸುರಾಜ್ ಪಕ್ಷದ ಅಭ್ಯರ್ಥಿ

ಅಭಿವೃದ್ಧಿ ಮತ್ತು ಸ್ಥಿರ ಸರ್ಕಾರದ ಹಿತಾಸಕ್ತಿಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸಿಂಗ್ ಹೇಳಿದರು. ನಾನು ಎನ್‌ಡಿಎ ಅಭ್ಯರ್ಥಿಯನ್ನು ಸಂಪೂರ್ಣವಾಗಿ ಬೆಂಬಲಿಸಲು ನಿರ್ಧರಿಸಿದ್ದೇನೆ. ಬಹು ದೊಡ್ಡ ಅಂತರದಿಂದ ಅವರ ಗೆಲುವಿಗಾಗಿ ಎಲ್ಲ ಪ್ರಯತ್ನಗಳನ್ನು ಮಾಡುತ್ತೇನೆ.

ಪಾಟ್ನಾ: ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷಕ್ಕೆ ತೀವ್ರ ಹಿನ್ನೆಡೆ ಎದುರಾಗಿದೆ. ಮೊದಲ ಹಂತದ ಮತದಾನಕ್ಕೆ ಒಂದು ದಿನ ಮೊದಲು ಅಂದರೆ ಬುಧವಾರ ಜನ್ ಸುರಾಗ್ ಪಕ್ಷದ ಅಭ್ಯರ್ಥಿ ಪಕ್ಷ ಬದಲಿಸಿ ಬಿಜೆಪಿ ಸೇರಿದ್ದಾರೆ.

ಮುಂಗೇರ್‌ನಲ್ಲಿ ಜೆಎಸ್‌ಪಿಯಿಂದ ಕಣಕ್ಕಿಳಿದಿದ್ದ ಸಂಜಯ್ ಸಿಂಗ್, ಬಿಜೆಪಿ ಅಭ್ಯರ್ಥಿ ಕುಮಾರ್ ಪ್ರಣಯ್ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಜೆಎಸ್‌ಪಿಯ ಅಭ್ಯರ್ಥಿಗಳ ಸಂಖ್ಯೆ ಈಗ ನಾಲ್ಕರಷ್ಟು ಕಡಿಮೆಯಾಗಿದೆ, ಈ ಹಿಂದೆಯು ದಾನಾಪುರ, ಬ್ರಹ್ಮಪುರ ಮತ್ತು ಗೋಪಾಲ್‌ಗಂಜ್‌ ಅಭ್ಯರ್ಥಿಗಳು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.

ಅಭಿವೃದ್ಧಿ ಮತ್ತು ಸ್ಥಿರ ಸರ್ಕಾರದ ಹಿತಾಸಕ್ತಿಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸಿಂಗ್ ಹೇಳಿದರು. ನಾನು ಎನ್‌ಡಿಎ ಅಭ್ಯರ್ಥಿಯನ್ನು ಸಂಪೂರ್ಣವಾಗಿ ಬೆಂಬಲಿಸಲು ನಿರ್ಧರಿಸಿದ್ದೇನೆ. ಬಹು ದೊಡ್ಡ ಅಂತರದಿಂದ ಅವರ ಗೆಲುವಿಗಾಗಿ ಎಲ್ಲ ಪ್ರಯತ್ನಗಳನ್ನು ಮಾಡುತ್ತೇನೆ ಎಂದು ಸಂಜಯ್ ಸಿಂಗ್ ತಿಳಿಸಿದ್ದಾರೆ.

ಸಿಂಗ್ ಪಕ್ಷ ಬದಲಾವಣೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲವಾದರೂ, "ನಿಜವಾದ ಬದಲಾವಣೆ" ತರಲು ಅಗತ್ಯವಿರುವ ಬಲವಾದ ನಾಯಕತ್ವವನ್ನು ಜೆಎಸ್‌ಪಿ ಒದಗಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರ ವಿಧಾನಸಭಾ ಚುನಾವಣೆ 2025: ಈವರೆಗೂ ಶೇ.43 ರಷ್ಟು ಮತದಾನ, ನ. 14 ರಂದು ಹೊಸ ಸರ್ಕಾರ ರಚನೆ ಎಂದ ತೇಜಸ್ವಿ ಯಾದವ್

ಹರಿಯಾಣ ಮತಗಳ್ಳತನ ಆರೋಪ; 'ಜನರ ವಂಚಿಸಲು ನನ್ನ ಹೆಸರು ಬಳಕೆ': ರಾಹುಲ್ ಉಲ್ಲೇಖಿಸಿದ್ದ ಬ್ರೆಜಿಲ್ ಮಾಡೆಲ್ ಲಾರಿಸ್ಸಾ ಶಾಕಿಂಗ್ ಹೇಳಿಕೆ..!

ಕೆಜಿಎಫ್‌ 'ಚಾಚಾ' ಖ್ಯಾತಿಯ ಹರೀಶ್ ರಾಯ್ ನಿಧನ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ

Video: 'ನಿನ್ ಯೋಗ್ಯತೆಗೆ ದೀಪಾವಳಿ ಬೋನಸ್ ಕೂಡ ಕೊಟ್ಟಿಲ್ಲಾ..': Live zoom ಮೀಟಿಂಗ್ ವೇಳೆ ಕೆಲಸಕ್ಕೆ ರಾಜಿನಾಮೆ ಕೊಟ್ಟ ಭೂಪ!

ಬಾಂಬೆ ಹೈಕೋರ್ಟ್‌ನ ಹೊಸ ಕಟ್ಟಡವು ನ್ಯಾಯ ದೇಗುಲವಾಗಿರಬೇಕೇ ಹೊರತು 7-ಸ್ಟಾರ್ ಹೋಟೆಲ್ ಅಲ್ಲ: ಸಿಜೆಐ ಬಿ.ಗವಾಯಿ

SCROLL FOR NEXT