ಅಜಿತ್ ಸಿಂಗ್ ಚೌಧರಿ 
ದೇಶ

ರಷ್ಯಾ: ಹಾಲು ತರಲು ಹೋಗಿದ್ದ ಭಾರತೀಯ ವಿದ್ಯಾರ್ಥಿ ಕಣ್ಮರೆ; 19 ದಿನಗಳ ನಂತರ ಮೃತದೇಹ ಪತ್ತೆ!

ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಅವರು 2023 ರಲ್ಲಿ ಎಂಬಿಬಿಎಸ್ ಕೋರ್ಸ್‌ಗಾಗಿ ಬಶ್ಕಿರ್ ರಾಜ್ಯ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಯಾಗಿದ್ದರು.

ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಗುರುವಾರ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ.

ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಅವರು 2023 ರಲ್ಲಿ ಎಂಬಿಬಿಎಸ್ ಕೋರ್ಸ್‌ಗಾಗಿ ಬಶ್ಕಿರ್ ರಾಜ್ಯ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಯಾಗಿದ್ದರು.

ಇದೇ ಅಕ್ಟೋಬರ್ 19 ರಂದು ಅವರು ಉಫಾದಲ್ಲಿ ಕಾಣೆಯಾಗಿದ್ದರು. ವಿದ್ಯಾರ್ಥಿ ಬೆಳಗ್ಗೆ 11 ಗಂಟೆ ಸುಮಾರಿಗೆ ಹಾಲು ಖರೀದಿಸಲು ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ಹೊರಟುಹೋಗಿದ್ದರು, ಆದರೆ ಹಿಂತಿರುಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಚೌಧರಿ ಅವರ ಮೃತದೇಹ ವೈಟ್ ನದಿಯ ಪಕ್ಕದಲ್ಲಿರುವ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ ಎಂದು ಅಲ್ವಾರ್ ಸರಸ್ ಡೈರಿ ಅಧ್ಯಕ್ಷ ನಿತಿನ್ ಸಾಂಗ್ವಾನ್ ತಿಳಿಸಿದ್ದಾರೆ. ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಯಾವುದೇ ಹೇಳಿಕೆಗಳು ಬಂದಿಲ್ಲ ಆದರೆ ಗುರುವಾರ ಚೌಧರಿ ಅವರ ಕುಟುಂಬಕ್ಕೆ ಅವರ ಸಾವಿನ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

19 ದಿನಗಳ ಹಿಂದೆ ನದಿ ದಂಡೆಯ ಬಳಿ ಚೌಧರಿ ಅವರ ಬಟ್ಟೆ, ಮೊಬೈಲ್ ಫೋನ್ ಮತ್ತು ಶೂಗಳು ಪತ್ತೆಯಾಗಿದ್ದವು ಎಂದು ಮಾಜಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅಲ್ವಾರ್ ಹೇಳಿದ್ದಾರೆ.

ಅಜಿತ್ ಕುಟುಂಬದವರು ತಮ್ಮ ಮಗ ಒಳ್ಳೆಯ ವಿದ್ಯಾಭ್ಯಾಸ ಮಾಡಿ, ಒಳ್ಳೆಯ ಕೆಲಸ ಪಡೆದುಕೊಳ್ಳಲಿ ಎನ್ನುವ ಹೆಚ್ಚಿನ ಭರವಸೆಗಳೊಂದಿಗೆ ರಷ್ಯಾಗೆ ಕಳುಹಿಸಿತ್ತು. ಅವರ ಪೋಷಕರು ಕಷ್ಟಪಟ್ಟು ಹಣವನ್ನು ಒಟ್ಟುಗೂಡಿಸಿದ್ದರು.

22 ವರ್ಷದ ಮಗ ಕಣ್ಮರೆಯಾದ ಸುದ್ದಿ ಕೇಳಿ ಕುಟುಂಬವು ತೀವ್ರ ದುಃಖಿತವಾಗಿತ್ತು, ಇಡೀ ಕುಟುಂಬವು ಅವನು ಸುರಕ್ಷಿತವಾಗಿ ಮರಳಲು ಪ್ರಯತ್ನಗಳು ಮತ್ತು ಪ್ರಾರ್ಥನೆಗಳನ್ನು ಮಾಡುತ್ತಿತ್ತು ಎಂದು ಅವರು ಹೇಳಿದರು.

ವಿದ್ಯಾರ್ಥಿಯ ಶವವನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಕಾಂಗ್ರೆಸ್ ನಾಯಕರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಒತ್ತಾಯಿಸಿದ್ದಾರೆ. ವಿದ್ಯಾರ್ಥಿಯ ಸಾವಿನ ಬಗ್ಗೆ ವಿಶ್ವವಿದ್ಯಾಲಯ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel