ಪ್ರಧಾನಮಂತ್ರಿಯವರು ಅಂಚೆಚೀಟಿ ಬಿಡುಗಡೆ ಮಾಡಿದರು. 
ದೇಶ

'ವಂದೇ ಮಾತರಂ' ಭಾರತೀಯರಲ್ಲಿ ಹೊಸ ಚೈತನ್ಯ ತುಂಬುತ್ತದೆ: 150ನೇ ವಾರ್ಷಿಕೋತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ನ 150 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಪೋರ್ಟಲ್ ನ್ನು ಸಹ ಪ್ರಧಾನಿ ಮೋದಿ ಉದ್ಘಾಟಿಸಿದರು.

ದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ರಾಷ್ಟ್ರೀಯ ಗೀತೆ "ವಂದೇ ಮಾತರಂ" ನ ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.

ಇಂದು ನಾವು 'ವಂದೇ ಮಾತರಂ' ನ 150 ವರ್ಷಗಳನ್ನು ಆಚರಿಸುತ್ತೇವೆ; ಇದು ನಮಗೆ ಹೊಸ ಸ್ಫೂರ್ತಿ ನೀಡುತ್ತದೆ, ದೇಶದ ಜನರನ್ನು ಹೊಸ ಚೈತನ್ಯದಿಂದ ತುಂಬುತ್ತದೆ ಎಂದು ಪ್ರಧಾನಿ ಹೇಳಿದರು. ವಂದೇ ಮಾತರಂ ಎಂಬ ಪದವು ನಮಗೆ ಆತ್ಮವಿಶ್ವಾಸವನ್ನು ತುಂಬುವುದರ ಜೊತೆಗೆ ಸಾಧಿಸಲಾಗದ ಯಾವುದೇ ಗುರಿಯಿಲ್ಲ ಎಂಬ ಧೈರ್ಯವನ್ನು ನೀಡುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ನ 150 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಪೋರ್ಟಲ್ ನ್ನು ಸಹ ಪ್ರಧಾನಿ ಮೋದಿ ಉದ್ಘಾಟಿಸಿದರು.

ಇಂದಿನ ಆಚರಣೆಯಲ್ಲಿ ಮುಖ್ಯ ಕಾರ್ಯಕ್ರಮದ ಜೊತೆಗೆ ಸಮಾಜದ ಎಲ್ಲಾ ವರ್ಗಗಳ ನಾಗರಿಕರ ಭಾಗವಹಿಸುವಿಕೆಯೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ "ವಂದೇ ಮಾತರಂ" ನ ಪೂರ್ಣ ಆವೃತ್ತಿಯ ಸಾಮೂಹಿಕ ಗಾಯನ ನಡೆಯಿತು. ಪ್ರಧಾನಿ ಮೋದಿ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ 'ವಂದೇ ಮಾತರಂ' ನ ಪೂರ್ಣ ಆವೃತ್ತಿಯ ಸಾಮೂಹಿಕ ಗಾಯನದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಮತ್ತು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕೂಡ ಉಪಸ್ಥಿತರಿದ್ದರು.

ಒಂದು ವರ್ಷದವರೆಗೆ ಕಾರ್ಯಕ್ರಮ

ಈ ಕಾರ್ಯಕ್ರಮವು ಇಂದಿನಿಂದ ನವೆಂಬರ್ 7, 2026 ರವರೆಗೆ ವರ್ಷಪೂರ್ತಿ ದೇಶಾದ್ಯಂತ ನಡೆಯುತ್ತದೆ. ಇದು ಭಾರತದ ಸ್ವಾತಂತ್ರ್ಯ ಚಳವಳಿಗೆ ಸ್ಫೂರ್ತಿ ನೀಡಿದ ಮತ್ತು ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯ 150 ವರ್ಷಗಳನ್ನು ಆಚರಿಸುತ್ತದೆ.

ಪ್ರಧಾನ ಮಂತ್ರಿ ಕಚೇರಿಯ (PMO) ಪ್ರಕಟಣೆಯ ಪ್ರಕಾರ, 2025 ವರ್ಷವು ವಂದೇ ಮಾತರಂನ 150 ವರ್ಷಗಳನ್ನು ಸೂಚಿಸುತ್ತದೆ. ಬಂಕಿಮಚಂದ್ರ ಚಟರ್ಜಿಯವರ ರಾಷ್ಟ್ರೀಯ ಗೀತೆ ವಂದೇ ಮಾತರಂನ್ನು 1875 ರ ನವೆಂಬರ್ 7 ರಂದು ಅಕ್ಷಯ ನವಮಿಯ ಶುಭ ಸಂದರ್ಭದಲ್ಲಿ ಬರೆಯಲಾಗಿದೆ.

ವಂದೇ ಮಾತರಂ

ವಂದೇ ಮಾತರಂ ಮೊದಲು ಸಾಹಿತ್ಯ ಜರ್ನಲ್ ಬಂಗದರ್ಶನ್‌ನಲ್ಲಿ ಅವರ ಕಾದಂಬರಿ ಆನಂದಮಠದ ಭಾಗವಾಗಿ ಕಾಣಿಸಿಕೊಂಡಿತು. ಶಕ್ತಿ, ಸಮೃದ್ಧಿ ಮತ್ತು ದೈವತ್ವದ ಸಾಕಾರವಾಗಿ ಮಾತೃಭೂಮಿಯನ್ನು ಆಹ್ವಾನಿಸುವ ಹಾಡು, ಭಾರತದ ಏಕತೆ ಮತ್ತು ಸ್ವಾಭಿಮಾನದ ಜಾಗೃತಿ ಮನೋಭಾವಕ್ಕೆ ಕಾವ್ಯಾತ್ಮಕ ಅಭಿವ್ಯಕ್ತಿಯನ್ನು ನೀಡಿತು.

ಶೀಘ್ರದಲ್ಲೇ ರಾಷ್ಟ್ರ ಭಕ್ತಿಯ ಶಾಶ್ವತ ಸಂಕೇತವಾಯಿತು. ಅಕ್ಟೋಬರ್ 1 ರಂದು, ಕೇಂದ್ರ ಸಚಿವ ಸಂಪುಟವು 'ವಂದೇ ಮಾತರಂ' ನ 150 ನೇ ವಾರ್ಷಿಕೋತ್ಸವವನ್ನು ದೇಶಾದ್ಯಂತ ಆಚರಿಸಲು ಅನುಮೋದನೆ ನೀಡಿತು. ಇದು ನಾಗರಿಕರನ್ನು, ವಿಶೇಷವಾಗಿ ನಮ್ಮ ಯುವಕರು ಮತ್ತು ವಿದ್ಯಾರ್ಥಿಗಳನ್ನು ಹಾಡಿನ ಮೂಲ, ಕ್ರಾಂತಿಕಾರಿ ಮನೋಭಾವದೊಂದಿಗೆ ಸಂಪರ್ಕಿಸುವ ಪರಿಣಾಮಕಾರಿ ಚಳವಳಿಯನ್ನು ಬೆಳೆಸುತ್ತದೆ. ಈ ಆಚರಣೆಗಳು ಕಾಲಾತೀತ ಸಂದೇಶವನ್ನು ಗೌರವಿಸುತ್ತದೆ ಮತ್ತು ಅದರ ಪರಂಪರೆಯನ್ನು ಸಂಪೂರ್ಣವಾಗಿ ಆಚರಿಸಲಾಗುತ್ತದೆ.

ಬಿಜೆಪಿ ಎರಡು ಪ್ರಮುಖ ಸಾಂಸ್ಕೃತಿಕ ಮೈಲಿಗಲ್ಲುಗಳನ್ನು ಗುರುತಿಸುವ ರಾಷ್ಟ್ರವ್ಯಾಪಿ ಆಚರಣೆಗಳಿಗೆ ವ್ಯಾಪಕ ಯೋಜನೆಯನ್ನು ರೂಪಿಸಿದೆ, ಅದು ವಂದೇ ಮಾತರಂನ 150 ನೇ ವಾರ್ಷಿಕೋತ್ಸವ ಮತ್ತು ಬುಡಕಟ್ಟು ಐಕಾನ್ ಭಗವಾನ್ ಬಿರ್ಸಾ ಮುಂಡಾ ಅವರ 150 ನೇ ಜನ್ಮ ವಾರ್ಷಿಕೋತ್ಸವ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರತಿಭಟನೆಗೆ ಮಣಿದ ಸರ್ಕಾರ; ಕಬ್ಬಿಗೆ 3300 ರೂ. ನಿಗದಿ; ರೈತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಕಬ್ಬು ಬೆಳೆಗಾರರ ಕಿಚ್ಚು: ಬೆಳಗಾವಿಯಲ್ಲಿ ಪೊಲೀಸರ ಲಾಠಿ ಚಾರ್ಜ್ ವಿರುದ್ಧ ಸಿಡಿದೆದ್ದ ರೈತರು; ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ!

ಕಣ್ಣಿಗೆ ಖಾರದ ಪುಡಿ ಎರಚಿ ಮಹಿಳೆ ಕಳ್ಳತನಕ್ಕೆ ಯತ್ನ, 20 ಸೆಕೆಂಡ್ ನಲ್ಲಿ 18 ಬಾರಿ 'ಕಪಾಳಮೋಕ್ಷ' ಮಾಡಿದ ಚಿನ್ನದಂಗಡಿ ಮಾಲೀಕ! Video

ಕಬ್ಬು ಬೆಳೆಗಾರರ ಕಿಚ್ಚು: ಕೇಂದ್ರ ವಿರುದ್ಧ ಕೈತೋರಿಸಿ ಸಿದ್ದರಾಮಯ್ಯ ಈಗ ಪಲಾಯನವಾದಿಯಾಗಿದ್ದಾರೆ - ಪ್ರಹ್ಲಾದ್‌ ಜೋಶಿ

ಸಿದ್ದರಾಮಯ್ಯ ಕೆಳಗಿಳಿಸುವುದು ಅಷ್ಟು ಸುಲಭವಲ್ಲ, ಅವರ ಸಾಮರ್ಥ್ಯದ ಬಗ್ಗೆ ನಮಗಷ್ಟೇ ಗೊತ್ತು: ಎಚ್‌ಡಿಕೆ

SCROLL FOR NEXT