ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಯತ್ನಿಸಿದ ಮಹಿಳೆ 
ದೇಶ

ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಮಹಿಳೆ ಯತ್ನ; 20 ಸೆಕೆಂಡ್ ನಲ್ಲಿ 18 ಬಾರಿ 'ಕಪಾಳಮೋಕ್ಷ' ಮಾಡಿದ ಚಿನ್ನದಂಗಡಿ ಮಾಲೀಕ! Video

ಆಭರಣ ಖರೀದಿ ನೆಪದಲ್ಲಿ ಅಂಗಡಿ ಪ್ರವೇಶ ಮಾಡಿದ್ದ ಮುಸುಕುದಾರಿ ಮಹಿಳೆ ಮಾಲೀಕನ ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಯತ್ನಿಸಿದ್ದಾರೆ.

ಅಹ್ಮದಾಬಾದ್: ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಯತ್ನಿಸಿದ ಮಹಿಳೆಗೆ ಚಿನ್ನದಂಗಡಿ ಮಾಲೀಕ ಕೇವಲ 20 ಸೆಕೆಂಡ್ ನಲ್ಲಿ 18 ಬಾರಿ ಕಪಾಳಮೋಕ್ಷ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ.

ಗುಜರಾತ್‌ನ ಅಹ್ಮದಾಬಾದ್‌ನ ರಾಣಿಪ್ ಪ್ರದೇಶದ ನಕ್ದಂಡ್ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಆಭರಣ ಖರೀದಿ ನೆಪದಲ್ಲಿ ಅಂಗಡಿ ಪ್ರವೇಶ ಮಾಡಿದ್ದ ಮುಸುಕುದಾರಿ ಮಹಿಳೆ ಅಂಗಡಿ ಮಾಲೀಕನನ್ನು ಮಾತಿನಲ್ಲಿ ಸಿಲುಕಿಸಿ ಬಳಿಕ ನೋಡ ನೋಡುತ್ತಲೇ ಆತನ ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಯತ್ನಿಸಿದ್ದಾರೆ.

ಈ ವೇಳೆ ಮಹಿಳೆಯ ಖತರ್ನಾಕ್ ಸಂಚು ಅರಿತ ಅಂಗಡಿ ಮಾಲೀಕ ಕೂಡಲೇ ಆಕೆಗೆ ಕಪಾಳ ಮೋಕ್ಷ ಮಾಡಿದ್ದಾನೆ.

20 ಸೆಕೆಂಡ್ ನಲ್ಲಿ 18 ಬಾರಿ ಥಳಿತ

ಈ ವೇಳೆ ಮಹಿಳೆಯ ದರೋಡೆ ಯತ್ನವನ್ನು ವಿಫಲಗೊಳಿಸಿದ ಅಂಗಡಿ ಮಾಲೀಕ ಕೇವಲ 20 ಸೆಕೆಂಡ್ ನಲ್ಲಿ 18 ಬಾರಿ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ವೇಳೆ ಮಹಿಳೆ ಪರಾರಿಗೆ ಯತ್ನಿಸಿದ್ದು ಮಾಲೀಕ ಕೂಡ ಆಕೆಯನ್ನು ಹಿಂಬಾಲಿಸಿ ಹಿಡಿಯಲು ಯತ್ನಿದ್ದಾನೆ. ಆದರೆ ಮಹಿಳೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.

ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಅಂಗಡಿ ಮಾಲೀಕನ ಚಾಣಾಕ್ಷತನ ಮತ್ತು ಧೈರ್ಯವನ್ನು ಶ್ಲಾಘಿಸಿದ್ದಾರೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ರಾನಿಪ್ ಪೊಲೀಸರು ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಮಹಿಳೆಗಾಗಿ ಶೋಧ ನಡೆಸುತ್ತಿರುವ ಪೊಲೀಸರು ಇದು ಯಾವುದೋ ಓರ್ವ ಮಹಿಳೆಯ ಕೃತ್ಯವಲ್ಲ. ಒಂದು ಗ್ಯಾಂಗ್ ನ ಸಂಚಾಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಮಹಿಳೆಯ ಕುರಿತು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ರಾಣಿಪ್ ಪೊಲೀಸ್ ಠಾಣೆಯ ಪಿಐ ಕೇತನ್ ವ್ಯಾಸ್ ಹೇಳಿದ್ದಾರೆ. ಆಭರಣ ವ್ಯಾಪಾರಿ ದೂರು ದಾಖಲಿಸಲು ನಿರಾಕರಿಸುತ್ತಿದ್ದರೂ, ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಮಹಿಳೆಯ ತನಿಖೆಯನ್ನು ಪ್ರಾರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುಣೆ ಭೂ ಹಗರಣ: ಮಹಾರಾಷ್ಟ್ರ ಸರ್ಕಾರದಿಂದ ಕವರ್‌ಅಪ್? FIR ನಲ್ಲಿ ಅಜಿತ್ ಪವಾರ್ ಪುತ್ರನ ಹೆಸರಿಲ್ಲ, ಆದ್ರೆ...

ಟೋಪಿ ಧರಿಸುವಂತ ಪರಿಸ್ಥಿತಿ ಬಂದರೆ ನನ್ನ ತಲೆಯನ್ನೇ ಕತ್ತರಿಸಿಕೊಳ್ಳುತ್ತೇನೆ: ಸಿಎಂ ರೇವಂತ್ ರೆಡ್ಡಿ ವಿರುದ್ಧ ಬಂಡಿ ಸಂಜಯ್ ವಾಗ್ದಾಳಿ

Mark Teaser: ಕಿಚ್ಚ ಸುದೀಪ್ ಮಾಸ್ ಅವತಾರಕ್ಕೆ ಅಭಿಮಾನಿಗಳು ಫಿದಾ, ಡಿ.25ಕ್ಕೆ ರಸದೌತಣ!

'ಮತಗಳ್ಳತನದ ಮೂಲಕ ಅಧಿಕಾರಕ್ಕೆ ಬಂದ ಸರ್ಕಾರದಿಂದ ದಲಿತರ ಭೂಮಿ ಕಳ್ಳತನ': ಮೋದಿ ಮೌನ ಪ್ರಶ್ನಿಸಿದ ರಾಹುಲ್

ಅಕ್ರಮ ಪರಮಾಣು ಚಟುವಟಿಕೆಗಳು ಪಾಕಿಸ್ತಾನದ ದೀರ್ಘಕಾಲೀನ ಅಭ್ಯಾಸ: ಟ್ರಂಪ್ ಹೇಳಿಕೆ ಕುರಿತು ಭಾರತ ತೀಕ್ಷ್ಣ ಪ್ರತಿಕ್ರಿಯೆ!

SCROLL FOR NEXT