ಸಂಗ್ರಹ ಚಿತ್ರ 
ದೇಶ

ಸೆಕ್ಸ್‌ಗೆ ಸಹಕರಿಸಲಿಲ್ಲ ಎಂದು 40 ವರ್ಷದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ 14 ವರ್ಷದ ಬಾಲಕ!

ಉತ್ತರ ಪ್ರದೇಶದ ಹಮೀರ್‌ಪುರದಿಂದ ತೀವ್ರ ಕಳಕಳಿ ಮತ್ತು ಆಘಾತಕಾರಿ ಘಟನೆ ನಡೆದಿದೆ.

ಉತ್ತರ ಪ್ರದೇಶದ ಹಮೀರ್‌ಪುರದಿಂದ ತೀವ್ರ ಕಳಕಳಿ ಮತ್ತು ಆಘಾತಕಾರಿ ಘಟನೆ ನಡೆದಿದೆ. ಸೆಕ್ಸ್‌ಗೆ ಸಹಕರಿಸಲಿಲ್ಲ ಎಂಬ ಕಾರಣಕ್ಕೆ 40 ವರ್ಷದ ಮಹಿಳೆಯ ಮೇಲೆ 14 ವರ್ಷದ ಬಾಲಕ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ನವೆಂಬರ್ 3 ರಂದು ನಡೆದಿತ್ತು. ಒಂಬತ್ತನೇ ತರಗತಿಯ ಬಾಲಕನೊಬ್ಬ ಹೊಲದಲ್ಲಿ ಹುಲ್ಲು ಕೊಯ್ಯುತ್ತಿದ್ದಾಗ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಪ್ರಯತ್ನಿಸಿದ್ದನು. ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಳು. ಇದರಿಂದ ಆಕ್ರೋಶಗೊಂಡ ಬಾಲಕ ಕುಡುಗೋಲು ಮತ್ತು ಕೋಲಿನಿಂದ ಆಕೆಯ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಇದರಿಂದ ಆಕೆ ಗಂಭೀರವಾಗಿ ಗಾಯಗೊಂಡಿದ್ದಳು.

ಹೊಲದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಕಂಡ ತಕ್ಷಣ ಗ್ರಾಮಸ್ಥರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಆಕೆಯನ್ನು ಚಂಡೀಗಢದ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಬುಧವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ. ಘಟನಾ ಸ್ಥಳದಿಂದ ಪೊಲೀಸರು ಕುಡುಗೋಲು, ಕೋಲು, ಮುರಿದ ಮಾಪಕ ಮತ್ತು ಪೆನ್ನಿನ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಅಪ್ರಾಪ್ತ ಬಾಲಕ ಹಲ್ಲೆ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಹೀಗಾಗಿ ಆತನನ್ನು ಬಾಲಗೃಹದಲ್ಲಿ ಇರಿಸಲಾಗಿದೆ. ತನ್ನ 17 ವರ್ಷದ ಅಂಗವಿಕಲ ಮಗನನ್ನು ಮಹಿಳೆ ಬೆಳೆಸುತ್ತಿದ್ದು ಆಕೆಯೆ ಕುಟುಂಬದ ಏಕೈಕ ಆಧಾರವಾಗಿದ್ದಳು. ಹಮೀರ್‌ಪುರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಉಪಾಧ್ಯಾಯ ಮಾತನಾಡಿ, ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದರು. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

ಟಿ20 ವಿಶ್ವಕಪ್ 2026: ಆಫ್ಘಾನಿಸ್ತಾನ ಬೆಂಬಿಡದ super Over ಭೂತ, ಇತಿಹಾಸ ಹೇಳೋದೇನು? 3 ಸೂಪರ್ ಓವರ್ ಕಂಡಿದ್ದ ಆ ಪಂದ್ಯ!

ಬೆಂಗಳೂರಿನಲ್ಲಿ ಮತ್ತೊಂದು ರಸ್ತೆ ಗಲಾಟೆ: ಬಾನೆಟ್ ಮೇಲೆ ವ್ಯಕ್ತಿಯ ಎಳೆದೊಯ್ದ ಕಾರು ಜಪ್ತಿ, ಚಾಲಕ ಬಂಧನ!

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ಬಗ್ಗು ಬಡಿದ ವೆಸ್ಟ್ ಇಂಡೀಸ್, 30 ರನ್ ಭರ್ಜರಿ ಜಯ

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'

SCROLL FOR NEXT