ಆಪರೇಷನ್ ಪಿಂಪಲ್  
ದೇಶ

Operation Pimple: ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಒಳನುಸುಳುವಿಕೆ ಪ್ರಯತ್ನ ವಿಫಲ, ಇಬ್ಬರು ಉಗ್ರರ ಹತ್ಯೆ

ಒಳನುಸುಳುವಿಕೆ ಪ್ರಯತ್ನದ ಕುರಿತು ಬಂದ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ನಿನ್ನೆ ಕಾರ್ಯಾಚರಣೆ ಆರಂಭಗೊಂಡಿತು.

ಜಮ್ಮು -ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರನ್ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಈ ಮಾಹಿತಿಯನ್ನು ಭಾರತೀಯ ಸೇನೆಯು ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿದೆ.

ಒಳನುಸುಳುವಿಕೆ ಪ್ರಯತ್ನದ ಕುರಿತು ಬಂದ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ನಿನ್ನೆ ಕಾರ್ಯಾಚರಣೆ ಆರಂಭಗೊಂಡಿತು. ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಯೋಧರು ವ್ಯಕ್ತಿಗಳನ್ನು ಪ್ರಶ್ನಿಸಿದರು. ಆಗ ಭಯೋತ್ಪಾದಕರು ಒಂದೇ ಸಮನೆ ಗುಂಡು ಹಾರಿಸಲು ಪ್ರಯತ್ನಿಸಿದರು. ಪ್ರತಿದಾಳಿಯನ್ನು ಭದ್ರತಾ ಪಡೆ ಯೋಧರು ಮಾಡಿದಾಗ ಇಬ್ಬರು ಉಗ್ರರು ಹತರಾದರು ಎಂದು ಚಿನಾರ್ ಕಾರ್ಪ್ಸ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ.

ಮೊನ್ನೆ ಬುಧವಾರ ಮುಂಜಾನೆ ಕಿಶ್ತ್ವಾರ್ ಜಿಲ್ಲೆಯ ದೂರದ ಛಾತ್ರು ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದ ಮೂರು ದಿನಗಳ ನಂತರ ಇದು ನಡೆದಿದೆ.

ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಸಂಸ್ಥೆಗಳು ನಿರ್ದಿಷ್ಟ ಗುಪ್ತಚರ ಮಾಹಿತಿಯನ್ನು ಪಡೆದ ನಂತರ ಅಧಿಕಾರಿಗಳು ಆಪರೇಷನ್ ಛಾತ್ರು ನ್ನು ಪ್ರಾರಂಭಿಸಿದರು. ಈ ಸುಳಿವಿನ ಮೇರೆಗೆ, ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಮತ್ತು ಜಮ್ಮು- ಕಾಶ್ಮೀರ ಪೊಲೀಸರ ಜಂಟಿ ತಂಡಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಸುಮಾರು ಇಬ್ಬರು ಅಥವಾ ಮೂವರು ಭಯೋತ್ಪಾದಕರು ಈ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಸೇನಾ ಪಶ್ಚಿಮ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮನೋಜ್ ಕುಮಾರ್ ಕಟಿಯಾರ್ ಅವರು ಜಮ್ಮು-ಪಠಾಣ್‌ಕೋಟ್ ವಲಯದ ಉದ್ದಕ್ಕೂ ಮುಂಭಾಗದ ಪ್ರದೇಶಗಳಲ್ಲಿ ಬೀಡುಬಿಟ್ಟಿರುವ ಪಡೆಗಳ ಕಾರ್ಯಾಚರಣೆಯ ಸನ್ನದ್ಧತೆಯನ್ನು ನಿರ್ಣಯಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಚಳಿಗಾಲದ ತಿಂಗಳುಗಳಿಗೆ ಯೋಧರು ಸಜ್ಜಾಗುತ್ತಿರುವಾಗ, ಜಮ್ಮು ವಲಯದ ಎತ್ತರದ ಪ್ರದೇಶಗಳಲ್ಲಿ ಮತ್ತು ಅರಣ್ಯ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರಿಂದ ಬರುವ ಬೆದರಿಕೆಗಳನ್ನು ಎದುರಿಸಲು ಅವರು ಸಿದ್ಧರಾಗಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಪರಿಶೀಲನೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಯುದ್ಧ ಭುಗಿಲೆದ್ದರೆ ನಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ನಮಗಿದೆ': ಆಫ್ಘಾನಿಸ್ತಾನ, ಪಾಕಿಸ್ತಾನ ಜೊತೆ ಶಾಂತಿ ಮಾತುಕತೆ ಮತ್ತೆ ವಿಫಲ

'vote chori': ರಾಜ್ಯದ 1.12 ಕೋಟಿ ಜನರಿಂದ 'ಕೈ' ಸಹಿ ಸಂಗ್ರಹ, ನ.10ಕ್ಕೆ ಹೈಕಮಾಂಡ್'ಗೆ ಸಲ್ಲಿಕೆ

ವಿಶ್ವಕಪ್ ಗೆಲುವು ಬೆನ್ನಲ್ಲೇ ಭಾರತ ತಂಡದ ಆಟಗಾರ್ತಿಯರ 'ಬ್ರಾಂಡ್ ವಾಲ್ಯೂ' ಭಾರಿ ಏರಿಕೆ! ಯಾರಿಗೆ ಎಷ್ಟು ಗೊತ್ತಾ?

ಆನೇಕಲ್: ಸಲಿಂಗ ಕಾಮಕ್ಕೆ ಅಡ್ಡಿ ಎಂದು ಮಗು ಹತ್ಯೆ, ಕೊನೆಗೂ ಆರೋಪಿ ಮಹಿಳೆಯರ ಬಂಧನ

ಕಬ್ಬು ಬೆಳೆಗಾರರ ಹೋರಾಟ ಬೇರೆ ರಾಜ್ಯಗಳಲ್ಲೇಕಿಲ್ಲ?: ರಾಜ್ಯಕ್ಕೆ ಕೇಂದ್ರ ಸರ್ಕಾರ ಪ್ರಶ್ನೆ

SCROLL FOR NEXT