ಶರದ್ ಪವಾರ್  
ದೇಶ

ಬಿಹಾರದಲ್ಲಿ ಎನ್‌ಡಿಎ ಸೋತರೂ ಆಶ್ಚರ್ಯವೇನಿಲ್ಲ! ಶರದ್ ಪವಾರ್

ಬಿಹಾರ ದೇಶದ ಉಳಿದ ಭಾಗಗಳಿಗಿಂತ ಭಿನ್ನವಾದ ರಾಜ್ಯವಾಗಿದ್ದು, ದೇಶದ ರಾಜಕೀಯದಲ್ಲಿ ಕೆಲವು ನಿರ್ಣಾಯಕ ಕ್ಷಣಗಳಿಗೆ ಸಾಕ್ಷಿಯಾಗಿದೆ ಎಂದರು.

ಮುಂಬೈ: ಪೂರ್ವ ರಾಜ್ಯದ ಜನರು ಬದಲಾವಣೆಯನ್ನು ಬಯಸುತ್ತಿರುವುದರಿಂದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸೋತರೂ ಆಶ್ಚರ್ಯವೇನಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ-ಶರದ್‌ಚಂದ್ರ ಪವಾರ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ಬಿಹಾರ ದೇಶದ ಉಳಿದ ಭಾಗಗಳಿಗಿಂತ ಭಿನ್ನವಾದ ರಾಜ್ಯವಾಗಿದ್ದು, ದೇಶದ ರಾಜಕೀಯದಲ್ಲಿ ಕೆಲವು ನಿರ್ಣಾಯಕ ಕ್ಷಣಗಳಿಗೆ ಸಾಕ್ಷಿಯಾಗಿದೆ ಎಂದರು.

ಹಿರಿಯ ರಾಜಕಾರಣಿಯಾಗಿರುವ ಶರದ್ ಪವಾರ್ , ಬಿಹಾರದಲ್ಲಿ ಪ್ರಚಾರ ಮಾಡಿಲ್ಲವಾದರೂ ರಾಜ್ಯದಲ್ಲಿನ ತಮ್ಮ ಸಂಪರ್ಕಗಳಿಂದ ಪಡೆದ ಪ್ರತಿಕ್ರಿಯೆಗಳ ಪ್ರಕಾರ, ಎನ್‌ಡಿಎ ಅಧಿಕಾರ ಕಳೆದುಕೊಂಡರೂ ಆಶ್ಚರ್ಯವೇನಿಲ್ಲ. ಬಿಹಾರದ ಜನರು ಬದಲಾವಣೆ ಬಯಸುತ್ತಾರೆ ಎಂದು ಅವರು ಹೇಳಿದರು.

"ಇದು ರಾಜಕೀಯ ಅರಿವು ಹೊಂದಿರುವ ಬಡ ರಾಜ್ಯ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಚಂಪಾರಣ್‌ನಲ್ಲಿ ಮಹಾತ್ಮ ಗಾಂಧಿಯವರ ಹೋರಾಟ, ತುರ್ತು ಪರಿಸ್ಥಿತಿಯ ವಿರುದ್ಧ ಜಯಪ್ರಕಾಶ್ ನಾರಾಯಣ್ ಅವರ ಆಂದೋಲನ ಮತ್ತು ಇಂದಿರಾ ಗಾಂಧಿಯವರು ವಿರೋಧ ಪಕ್ಷದಲ್ಲಿದ್ದಾಗ ಆನೆಯ ಮೇಲೆ ಸವಾರಿ ಮಾಡಿದ ಬೆಲ್ಚಿಗೆ ಭೇಟಿ ನೀಡಿದದ್ದು, ಭಾರತೀಯ ರಾಜಕೀಯದಲ್ಲಿ ನಿರ್ಣಾಯಕ ಕ್ಷಣಗಳಾಗಿವೆ ಎಂದು ಅವರು ಹೇಳಿದರು.

ಮೊನ್ನೆ ನಡೆದ ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ ದಾಖಲೆಯ ಶೇ. 65. 08 ರಷ್ಟು ಮತದಾನವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

EC ಬೇಜವಾಬ್ದಾರಿ ಸಂಸ್ಧೆ: ಸ್ವತಂತ್ರ ಸಂಸ್ಥೆಗಳನ್ನು ಪ್ರಧಾನಿ ಮೋದಿ ನಾಶಪಡಿಸಿದ್ದಾರೆ - ಸಿಎಂ ಸಿದ್ದರಾಮಯ್ಯ

ಬೆಂಗಳೂರು ಕಾರಾಗೃಹವೋ ಐಷಾರಾಮಿ ಕೇಂದ್ರವೋ?: ವಿಕೃತಕಾಮಿ ಉಮೇಶ್ ರೆಡ್ಡಿ, ISIS ಉಗ್ರನಿಗೆ ಟಿವಿ, ಮೊಬೈಲ್ ರಾಜಾತಿಥ್ಯ!

'ಚಪ್ಪಲಿ ತೋರಿಸಿ ಕಲಾವಿದರಿಗೆ ಅಪಮಾನ'.. ರಕ್ಷಿತಾ ವಿರುದ್ಧ ಅಶ್ವಿನಿಗೌಡ ಆರೋಪ, ಕಿಚ್ಚಾ ಸುದೀಪ್ ವಿಡಿಯೋ ಸಹಿತ ತಿರುಗೇಟು! Video

Cricket: ಮಳೆಯಿಂದ ರದ್ದಾದ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ! ಕೊಹ್ಲಿ ದಾಖಲೆ ಜಸ್ಟ್ ಮಿಸ್!

Parliament Winter Session: ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

SCROLL FOR NEXT