ದೇಶ

Delhi Blast: ಘಟನಾ ಸ್ಥಳದಲ್ಲಿ ಪೊಲೀಸರಿಗೆ ಮಹತ್ವದ ಸುಳಿವು ಪತ್ತೆ; ತನಿಖೆ ಆಯಾಮವೇ ಬದಲು!

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ. ಹಲವಾರು ವಾಹನಗಳು ಸುಟ್ಟು ಭಸ್ಮವಾದ ಸ್ಥಳದ ಬಳಿ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಕಾರಿನಲ್ಲಿ ಸ್ಫೋಟ ಸಂಭವಿಸಿ 11 ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ. ಹಲವಾರು ವಾಹನಗಳು ಸುಟ್ಟು ಭಸ್ಮವಾದ ಸ್ಥಳದ ಬಳಿ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಮಹತ್ವದ ಸುಳಿವು ದೊರೆತಿದೆ. ಈ ಸುಳಿವಿನಿಂದ ಘಟನೆಗೆ ಸಂಬಂಧಿಸಿದ ತನಿಖೆಯ ಆಯಾಮವೇ ಬದಲಾವಣೆಯಾಗುವ ಸಾಧ್ಯತೆ ಇದೆ.

ಘಟನಾ ಸ್ಥಳದಲ್ಲಿ ನೆಲದ ಮೇಲೆ ಜೀವಂತ ಗುಂಡು ಪತ್ತೆಯಾಗಿರುವುದು, ತನಿಖೆಗೆಯ ದಿಕ್ಕನ್ನು ಬದಲಿಸಿದೆ. ಘಟನೆಯ ಹಿಂದೆ ಭಯೋತ್ಪಾದಕರ ಕೃತ್ಯ ಇದೆ ಎಂದು ಶಂಕಿಸಲಾಗುತ್ತಿದೆ. ಇತ್ತೀಚಿನ ಮಾಹಿತಿಯ ಪ್ರಕಾರ ಪ್ರಕರಣದ ಸಂಬಂಧ ಓರ್ವ ಶಂಕಿತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

"ನಾವು ತಕ್ಷಣ ಪ್ರತಿಕ್ರಿಯಿಸಿದೆವು ಮತ್ತು ಏಳು ತುಕಡಿಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಸಂಜೆ 7:29 ಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು" ಎಂದು ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಎ.ಕೆ. ಮಲಿಕ್ ಹೇಳಿದ್ದಾರೆ. ಸ್ಫೋಟದ ನಂತರ, ಪ್ರವಾಸಿ ದಟ್ಟಣೆಯನ್ನು ಹೊಂದಿರುವ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi ಸ್ಫೋಟ: ತನಿಖೆಗೆ ಕೈಜೋಡಿಸುವಂತೆ NIA, NSGಗೆ ಅಮಿತ್ ಶಾ ಆದೇಶ; ಕಾರು ಮಾಲೀಕ ವಶಕ್ಕೆ

Delhi ಕಾರು ಸ್ಫೋಟದ ಬಗ್ಗೆ ಅಮಿತ್ ಶಾ ಜೊತೆ ಪ್ರಧಾನಿ ಮೋದಿ ಚರ್ಚೆ

Delhi: ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 13 ಸಾವು, 17 ಜನರಿಗೆ ಗಾಯ; ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ, Video!

Delhi Blast: ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; 'ದೊಡ್ಡ ಪಿತೂರಿ' ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

Delhi ಕೆಂಪುಕೋಟೆ ಬಳಿ ಕಾರು ಸ್ಫೋಟ; ಬೆಂಗಳೂರಿನಲ್ಲೂ ತೀವ್ರ ಕಟ್ಟೆಚ್ಚರ; ಗಸ್ತು, ತಪಾಸಣೆ ಹೆಚ್ಚಿಸಲು ಸೂಚನೆ

SCROLL FOR NEXT