ಬಾಲಕನ ಮೇಲೆ ಹರಿದ ಲಾರಿ 
ದೇಶ

Hyderabad: ಬ್ಲೈಂಡ್ ಸ್ಪಾಟ್ ಗೆ ಮತ್ತೊಂದು ಬಲಿ; ತಿರುವಿನಲ್ಲಿ ಬಾಲಕನ ಮೇಲೆ ಹರಿದ ಲಾರಿ! Video

ಸ್ನೇಹಿತರೊಂದಿಗೆ ತೆರಳುತ್ತಿದ್ದ ಬಾಲಕನ ಮೇಲೆ ಮರಳು ಸಾಗಾಣಿಕಾ ಲಾರಿ ಹರಿದಿದೆ. ಈ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಬಾಲಕನೋರ್ವ ಮೃತಪಟ್ಟಿದ್ದಾನೆ.

ಹೈದರಾಬಾದ್: ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ನೇಹಿತರೊಂದಿಗೆ ತೆರಳುತ್ತಿದ್ದ ಬಾಲಕನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ತೆಲಂಗಾಣ ರಾಜಧಾನಿ ಹೈದರಾಬಾದ್ ನ ಮೈಲಾರದೇವಪಲ್ಲಿಯಲ್ಲಿ ಈ ಘಟನೆ ನಡೆದಿದ್ದು ಸ್ನೇಹಿತರೊಂದಿಗೆ ತೆರಳುತ್ತಿದ್ದ ಬಾಲಕನ ಮೇಲೆ ಮರಳು ಸಾಗಾಣಿಕಾ ಲಾರಿ ಹರಿದಿದೆ. ಈ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಬಾಲಕನೋರ್ವ ಮೃತಪಟ್ಟಿದ್ದಾನೆ.

ಮೃತ ಬಾಲಕನನ್ನು 8 ವರ್ಷದ ಸೈಯದ್ ರಿಯಾನುದ್ದೀನ್ ಎಂದು ಹೇಳಲಾಗಿದ್ದು, ಇಲ್ಲಿನ ಶಾಸ್ತ್ರಿಪುರಂನಲ್ಲಿ ಬಾಲಕ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ತಿರುವಿನಲ್ಲಿ ಲಾರಿ ಹರಿದು ಬಾಲಕ ಮೃತಪಟ್ಟಿದ್ದಾನೆ.

ಬಾಲಕ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಹಠಾತ್ತನೆ ಯು-ಟರ್ನ್ ತೆಗೆದುಕೊಂಡಿದೆ. ಈ ವೇಳೆ ಬಾಲಕ ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆ ಬಳಿಕ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT