ಬಾಲಕನ ಮೇಲೆ ಹರಿದ ಲಾರಿ 
ದೇಶ

Hyderabad: ಬ್ಲೈಂಡ್ ಸ್ಪಾಟ್ ಗೆ ಮತ್ತೊಂದು ಬಲಿ, ತಿರುವಿನಲ್ಲಿ ಬಾಲಕನ ಮೇಲೆ ಹರಿದ ಲಾರಿ!, Video

ಸ್ನೇಹಿತರೊಂದಿಗೆ ತೆರಳುತ್ತಿದ್ದ ಬಾಲಕನ ಮೇಲೆ ಮರಳು ಸಾಗಾಣಿಕಾ ಲಾರಿ ಹರಿದಿದೆ. ಈ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಬಾಲಕನೋರ್ವ ಮೃತಪಟ್ಟಿದ್ದಾನೆ.

ಹೈದರಾಬಾದ್: ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ನೇಹಿತರೊಂದಿಗೆ ತೆರಳುತ್ತಿದ್ದ ಬಾಲಕನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ತೆಲಂಗಾಣ ರಾಜಧಾನಿ ಹೈದರಾಬಾದ್ ನ ಮೈಲಾರದೇವಪಲ್ಲಿಯಲ್ಲಿ ಈ ಘಟನೆ ನಡೆದಿದ್ದು ಸ್ನೇಹಿತರೊಂದಿಗೆ ತೆರಳುತ್ತಿದ್ದ ಬಾಲಕನ ಮೇಲೆ ಮರಳು ಸಾಗಾಣಿಕಾ ಲಾರಿ ಹರಿದಿದೆ. ಈ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಬಾಲಕನೋರ್ವ ಮೃತಪಟ್ಟಿದ್ದಾನೆ.

ಮೃತ ಬಾಲಕನನ್ನು 8 ವರ್ಷದ ಸೈಯದ್ ರಿಯಾನುದ್ದೀನ್ ಎಂದು ಹೇಳಲಾಗಿದ್ದು, ಇಲ್ಲಿನ ಶಾಸ್ತ್ರಿಪುರಂನಲ್ಲಿ ಬಾಲಕ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ತಿರುವಿನಲ್ಲಿ ಲಾರಿ ಹರಿದು ಬಾಲಕ ಮೃತಪಟ್ಟಿದ್ದಾನೆ.

ಬಾಲಕ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಹಠಾತ್ತನೆ ಯು-ಟರ್ನ್ ತೆಗೆದುಕೊಂಡಿದೆ. ಈ ವೇಳೆ ಬಾಲಕ ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆ ಬಳಿಕ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi: ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ; ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ, Video!

ವೈಟ್-ಕಾಲರ್ ಭಯೋತ್ಪಾದಕ ಪರಿಸರ ಅನಾವರಣ; 350 ಕೆಜಿ ಸ್ಫೋಟಕಗಳ ಪತ್ತೆ ಬೆನ್ನಲ್ಲೆ ವೈದ್ಯರ ಮನೆಯಿಂದ 2,563 ಕೆಜಿ ಸ್ಫೋಟಕಗಳು ವಶಕ್ಕೆ!

ಕಾರಿನಲ್ಲಿ ಎಕೆ-47 ರೈಫಲ್ ಇಟ್ಟುಕೊಂಡಿದ್ದ ಲಖನೌ ವೈದ್ಯೆಯ ಬಂಧನ!

ಮುಂಬೈ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ ಮಾಜಿ ಸೇನಾಧಿಕಾರಿಯ ಬಂಧನ!

ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷರಾಗಿ ಕೆ ಜಯಕುಮಾರ್ ನೇಮಕ

SCROLL FOR NEXT