ಶಂಕಿತ ಆತ್ಮಹತ್ಯಾ ಬಾಂಬರ್  
ದೇಶ

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಹೊರಟ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌; ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪತ್ತೆಯಾಗಿದೆ.

ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮುನ್ನ ಮಸೀದಿಯೊಂದರ ಬಳಿ ಮೂರು ಗಂಟೆಗಳ ಕಾಲ ಪಾರ್ಕಿಂಗ್‌ ಮಾಡಲಾಗಿತ್ತು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ.

ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪತ್ತೆಯಾಗಿದೆ.

ಪಾರ್ಕಿಂಗ್ ಸ್ಥಳದಿಂದ ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಕೆಂಪು ಕೋಟೆಯ ಬಳಿ ಸಂಜೆ 6:52–7:00 ಗಂಟೆ ನಡುವೆ ಸ್ಫೋಟಗೊಂಡಿದೆ.

ಪಾರ್ಕಿಂಗ್ ಪ್ರದೇಶಕ್ಕೆ ಪ್ರವೇಶಿಸುವ ಮತ್ತು ನಿರ್ಗಮಿಸುವ ವೇಳೆ ಕಾರಿನಲ್ಲಿ ನೀಲಿ ಮತ್ತು ಕಪ್ಪು ಬಣ್ಣದ ಟೀ ಶರ್ಟ್, ಮುಖಕ್ಕೆ ಮಾಸ್ಕ್‌ ಧರಿಸಿದ್ದ ಚಾಲಕ ಒಬ್ಬನೇ ಕುಳಿತ್ತಿದ್ದ.

ತನಿಖಾಧಿಕಾರಿಗಳು ಈಗ ದರ್ಯಗಂಜ್ ಕಡೆಗೆ ಹೋಗುವ ಮಾರ್ಗವನ್ನು ಪತ್ತೆಹಚ್ಚುತ್ತಿದ್ದಾರೆ. ಕಾರು ಎಲ್ಲಿಂದ ಆಗಮಿಸಿದೆ ಎನ್ನುವುದರ ಜಾಡು ಹಿಡಿಯಲು 100ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ.

ಏತನ್ಮಧ್ಯೆ ದೆಹಲಿ ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ.

ಉಮರ್ ಇನ್ನೂ ಇಬ್ಬರು ಸಹಚರರೊಂದಿಗೆ ದಾಳಿಯನ್ನು ಯೋಜಿಸಿದ್ದಲ್ಲದೆ ಕಾರಿನಲ್ಲಿ ಡಿಟೋನೇಟರ್ ಅಳವಡಿಸಿದ್ದ ಎಂದು ಮೂಲಗಳು ತಿಳಿಸಿವೆ.

ಇದೀಗ ಡಾ. ಉಮರ್ ಮೊಹಮ್ಮದ್ ನಿಜವಾಗಿಯೂ ಕಾರಿನಲ್ಲಿದ್ದನೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮೃತರ ಡಿಎನ್‌ಎ ಪರೀಕ್ಷೆಯನ್ನು ನಡೆಸಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

'ವಂದೇ ಮಾತರಂ' ಹಾಡುವುದು ಕಡ್ಡಾಯ: ಮತೀಯ ಅಜೆಂಡಾ, ಮುಸ್ಲಿಂ ಸಂಘಟನೆ ಜಮಿಯತ್ ತೀವ್ರ ವಿರೋಧ!

ಕೂಡಲೇ ಭಾರತಕ್ಕೆ ವಾಪಸ್ಸಾಗಿ: ಇಲ್ಲವಾದ್ರೆ! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯ

ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದ ಬ್ರೇಕ್!

ದೂರದರ್ಶನದ ಖ್ಯಾತ 'ನ್ಯೂಸ್ ಆಂಕರ್' ಸರಳ ಮಹೇಶ್ವರಿ ನಿಧನ!

SCROLL FOR NEXT