ಬಂಧಿತ ವೈದ್ಯೆ ಶಾಹೀನ್ ಶಾಹಿದ್ 
ದೇಶ

Delhi Blast: ಬಂಧಿತ ವೈದ್ಯೆಗೆ 'ಜೈಶ್ ಇ ಮಹಮದ್' ಉಗ್ರ ಸಂಘಟನೆಯ ಮಹಿಳಾ ಘಟಕ ಸ್ಥಾಪನೆ 'ಟಾಸ್ಕ್'; ವರದಿ

ಸಾದಿಯಾ ಅಜರ್ ಅವರ ಪತಿ ಯೂಸುಫ್ ಅಜರ್, ಕಂದಹಾರ್ ಅಪಹರಣದ ಮಾಸ್ಟರ್‌ಮೈಂಡ್ ಆಗಿದ್ದು, ಮೇ 7 ರಂದು ಆಪರೇಷನ್ ಸಿಂಧೂರ್ ಸಮಯದಲ್ಲಿ ಕೊಲ್ಲಲ್ಪಟ್ಟಿದ್ದ ಎಂದು ವರದಿಯಾಗಿದೆ.

ನವದೆಹಲಿ: ದೆಹಲಿಯಲ್ಲಿ 12 ಮಂದಿಯ ಸಾವಿಗೆ ಕಾರಣವಾದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಲಕ್ನೋ ಮೂಲದ ಮಹಿಳಾ ವೈದ್ಯೆಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಇಎಂ) ಗೆ ಮಹಿಳಾ ವಿಭಾಗವನ್ನು ಸ್ಥಾಪಿಸುವ ಮತ್ತು ನೇಮಕಾತಿ ಮಾಡುವ ಜವಾಬ್ದಾರಿ ನೀಡಲಾಗಿತ್ತು ಎಂಬ ಸ್ಫೋಟಕ ಅಂಶ ಬಯಲಾಗಿದೆ.

ಈ ಬಗ್ಗೆ ಎನ್ ಡಿಟಿವಿ ವರದಿ ಮಾಡಿದ್ದು, ದೆಹಲಿ ಬಳಿಯ ಫರಿದಾಬಾದ್‌ನಲ್ಲಿ ನಡೆದ ಬೃಹತ್ ಸ್ಫೋಟಕಗಳ ಸಾಗಣೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಲಕ್ನೋ ಮೂಲದ ಮಹಿಳಾ ವೈದ್ಯೆ ಡಾ. ಶಾಹೀನ್ ಶಾಹಿದ್ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಇಎಂ) ಗೆ ಮಹಿಳಾ ವಿಭಾಗವನ್ನು ಸ್ಥಾಪಿಸುವ ಮತ್ತು ನೇಮಕಾತಿ ಮಾಡುವ ಜವಾಬ್ದಾರಿಯನ್ನು ಹೊಂದಿದ್ದರು ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಪಾಕಿಸ್ತಾನದಲ್ಲಿ ಜೆಇಎಂ ಸಂಸ್ಥಾಪಕ ಮಸೂದ್ ಅಜರ್ ಅವರ ಸಹೋದರಿ ಸಾದಿಯಾ ಅಜರ್ ನೇತೃತ್ವದ ಜೆಇಎಂನ ಮಹಿಳಾ ವಿಭಾಗವಾದ ಜಮಾತ್ ಉಲ್-ಮೊಮಿನಾತ್‌ನ ಕಮಾಂಡ್ ಅನ್ನು ಡಾ. ಶಾಹೀನ್ ಶಾಹಿದ್ ಅವರಿಗೆ ವಹಿಸಲಾಗಿತ್ತು. ಸಾದಿಯಾ ಅಜರ್ ಅವರ ಪತಿ ಯೂಸುಫ್ ಅಜರ್, ಕಂದಹಾರ್ ಅಪಹರಣದ ಮಾಸ್ಟರ್‌ಮೈಂಡ್ ಆಗಿದ್ದು, ಮೇ 7 ರಂದು ಆಪರೇಷನ್ ಸಿಂಧೂರ್ ಸಮಯದಲ್ಲಿ ಕೊಲ್ಲಲ್ಪಟ್ಟಿದ್ದ ಎಂದು ವರದಿಯಾಗಿದೆ.

ಯಾರು ಈ ಡಾ. ಶಾಹೀನ್ ಶಾಹಿದ್?

ವೈದ್ಯೆ ಶಹೀನ್ ಶಾಹಿದ್ ಲಕ್ನೋದ ಲಾಲ್ ಬಾಗ್ ನಿವಾಸಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫರಿದಾಬಾದ್‌ನಲ್ಲಿ ಜೆಇಎಂನ ಭಯೋತ್ಪಾದನಾ ಮಾಡ್ಯೂಲ್ ಅನ್ನು ಪತ್ತೆಹಚ್ಚಲಾಗಿತ್ತು. ಬಳಿಕ ಅವರ ಕಾರಿನಿಂದ ಅಸಾಲ್ಟ್ ರೈಫಲ್ ಅನ್ನು ವಶಪಡಿಸಿಕೊಂಡ ನಂತರ ಅವರನ್ನು ಬಂಧಿಸಲಾಯಿತು. ಅಸಾಲ್ಟ್ ರೈಫಲ್, ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಲು ಬಳಸಿದ ಕಾರು ಶಾಹೀನ್ ಶಾಹಿದ್‌ಗೆ ಸೇರಿದೆ ಎಂದು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.

ಶಹೀನ್ ಅಲ್-ಫಲಾಹ್ ವಿಶ್ವವಿದ್ಯಾಲಯದ ಭಾಗವಾಗಿದ್ದರು ಎಂದು ಹೇಳಲಾಗಿದ್ದು, ಅಂತೆಯೇ ಫರಿದಾಬಾದ್‌ನಲ್ಲಿ ಬಾಡಿಗೆಗೆ ಪಡೆದಿದ್ದ ಎರಡು ಕೊಠಡಿಗಳಲ್ಲಿದ್ದ 2,900 ಕೆಜಿ ಸ್ಫೋಟಕಗಳು ಮತ್ತು ದಹನಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ವೈದ್ಯ ಮುಜಮ್ಮಿಲ್ ಗನೈ ಅಲಿಯಾಸ್ ಮುಸೈಬ್ ರ ಪಾತ್ರ ನಿಕಟವಾಗಿದೆ ಎಂದು ಹೇಳಲಾಗಿತ್ತು. ಇದೇ ವೈದ್ಯ ಮುಜಮ್ಮಿಲ್ ಗನೈ ಅಲಿಯಾಸ್ ಮುಸೈಬ್ ರೊಂದಿಗೂ ವೈದ್ಯೆ ಶಹೀನ್ ನಿಕಟ ಸಂಬಂಧ ಹೊಂದಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video