ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ನಿಷೇಧಿತ ಸಂಘಟನೆ ಜಮಾತ್-ಇ-ಇಸ್ಲಾಮಿ (ಜೆಇಐ) ವಿರುದ್ಧ ಕಾರ್ಯಾಚರಣೆಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ. 
ದೇಶ

ಜಮ್ಮು ಮತ್ತು ಕಾಶ್ಮೀರ: ನಿಷೇಧಿತ ಜಮಾತ್-ಎ-ಇಸ್ಲಾಮಿ ವಿರುದ್ಧ ಬೃಹತ್ ಕಾರ್ಯಾಚರಣೆ; ಕುಲ್ಗಾಮ್‌ನ 200 ಸ್ಥಳಗಳಲ್ಲಿ ದಾಳಿ!

ಕಳೆದ ನಾಲ್ಕು ದಿನಗಳಲ್ಲಿ, 500ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಮತ್ತು ಅವರಲ್ಲಿ ಹಲವರನ್ನು ಬಂಧಿಸಲಾಗಿದೆ.

ಶ್ರೀನಗರ: ಹರಿಯಾಣದ ಫರಿದಾಬಾದ್‌ನಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ವಶ ಮತ್ತು ದೆಹಲಿಯಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೇ, ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ನಿಷೇಧಿತ ಜಮಾತ್-ಎ-ಇಸ್ಲಾಮಿ (ಜೆಇಐ) ವಿರುದ್ಧ ಪೊಲೀಸರು ಬೃಹತ್ ಕಾರ್ಯಾಚರಣೆ ಆರಂಭಿಸಿದ್ದಾರೆ. 200ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿ, ಅಪರಾಧ ಸಾಮಗ್ರಿಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ನಾಲ್ಕು ದಿನಗಳಲ್ಲಿ, 500ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಮತ್ತು ಅವರಲ್ಲಿ ಹಲವರನ್ನು ಬಂಧಿಸಲಾಗಿದೆ. ಜಿಲ್ಲೆಯಲ್ಲಿ 400 ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಗಳನ್ನು (ಸಿಎಎಸ್ಒ) ಭದ್ರತಾ ಸಿಬ್ಬಂದಿ ಪ್ರಾರಂಭಿಸಿದ್ದಾರೆ.

ಕುಲ್ಗಾಮ್ ಪೊಲೀಸರು ನಿಷೇಧಿತ ಜಮಾತ್-ಎ-ಇಸ್ಲಾಮಿ ವಿರುದ್ಧ ದೊಡ್ಡ ಪ್ರಮಾಣದ ಕಾರ್ಯಾಚರಣೆ ನಡೆಸಿದ್ದಾರೆ. ಕೇಂದ್ರ ಸರ್ಕಾರವು 2019ರಲ್ಲಿ ಸಂಘಟನೆ ಮೇಲೆ ನಿಷೇಧ ಹೇರಿದ ನಂತರ, ಅದರ ಅನೇಕ ಹಿರಿಯ ನಾಯಕರನ್ನು ಕಾಶ್ಮೀರದ ಒಳಗೆ ಮತ್ತು ಹೊರಗೆ ಬಂಧಿಸಿ ಜೈಲಿನಲ್ಲಿರಿಸಲಾಯಿತು.

ಭಯೋತ್ಪಾದನೆಯನ್ನು ತಳಮಟ್ಟದಲ್ಲಿ ಹತ್ತಿಕ್ಕಲು ಮಾಡುತ್ತಿರುವ ನಿರಂತರ ಪ್ರಯತ್ನಗಳ ಭಾಗವಾಗಿ ಜಮಾತ್ ಸದಸ್ಯರು ಮತ್ತು ಅವರ ಸಹಚರರ ಮನೆಗಳು ಮತ್ತು ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

'ದಾಳಿಯ ಸಮಯದಲ್ಲಿ, ಪೊಲೀಸರು ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನಿಷೇಧಿತ ಜೆಇಇಯ ಹಲವಾರು ಸದಸ್ಯರನ್ನು ವಿಚಾರಣೆಗೆ ಒಳಪಡಿಸಲಾಯಿತು. ಭಯೋತ್ಪಾದನೆಯನ್ನು ಬೆಂಬಲಿಸುವ ಜಾಲಗಳನ್ನು ಪತ್ತೆಹಚ್ಚಲು ಮತ್ತು ತಡೆಯಲು ಬಂಧಿಸಲಾಗಿದೆ' ಎಂದು ಅವರು ಹೇಳಿದರು.

ಕುಲ್ಗಾಮ್ ಜಿಲ್ಲೆಯಲ್ಲಿ ಪೊಲೀಸರು ಕಳೆದ ನಾಲ್ಕು ದಿನಗಳಲ್ಲಿ ನೂರಾರು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ.

'ಕಳೆದ ನಾಲ್ಕು ದಿನಗಳಲ್ಲಿ, ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ 400ಕ್ಕೂ ಹೆಚ್ಚು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಗಳನ್ನು (CASO) ನಡೆಸಲಾಗಿದೆ. OGW ಗಳು, JKNOPS ಆವರಣಗಳು, ಈ ಹಿಂದೆ ಎನ್‌ಕೌಂಟರ್‌ಗಳು ನಡೆದ ಸ್ಥಳಗಳು, ಸಕ್ರಿಯ ಮತ್ತು ಕೊಲ್ಲಲ್ಪಟ್ಟ ಉಗ್ರರ ಅಡಗುತಾಣಗಳಲ್ಲಿ ಕಾರ್ಯಾಚರಣೆಯನ್ನು ನಡೆಸಲಾಯಿತು' ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಗಳ ಸಮಯದಲ್ಲಿ, JKNOP ಗಳು ಮತ್ತು ಇತರ ನಿಷೇಧಿತ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಸುಮಾರು 500 ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಯಿತು ಮತ್ತು ಅವರಲ್ಲಿ ಹಲವರನ್ನು ಬಂಧಿಸಿ ಭಯೋತ್ಪಾದನಾ ನಿಗ್ರಹ ಕಾನೂನುಗಳ ಅಡಿಯಲ್ಲಿ ಅನಂತನಾಗ್‌ನ ಮಟ್ಟನ್ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ ಎಂದಿದ್ದಾರೆ.

ಜೆಇಐ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನೆರೆಯ ಶೋಪಿಯಾನ್‌ನಲ್ಲಿಯೂ ಇದೇ ರೀತಿಯ ದಾಳಿಗಳನ್ನು ನಡೆಸಲಾಗಿದೆ. ದೆಹಲಿ ಸ್ಫೋಟದ ನಂತರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ವಾಹನ ತಪಾಸಣೆ ಮತ್ತು ಅಚ್ಚರಿಯ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಗಳನ್ನು (CASO) ತೀವ್ರಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಸಂತ್ರಸ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ಸಂಜೆ 5.30ಕ್ಕೆ CCS ತುರ್ತು ಸಭೆ!

ಆಕೆ ಹಿಂದೆಂದೂ ಬುರ್ಖಾ ಸಹ ಧರಿಸಿರಲಿಲ್ಲ, ಶಾಹೀನ್ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದಾಳೆ ಎಂಬುದು ನಮಗೆ ನಂಬಲು ಇನ್ನೂ ಅಸಾಧ್ಯ- ಮಾಜಿ ಪತಿ, ಸಹೋದರ

'ಸುಮ್ನೆ ಗಾಸಿಪ್ ಬೇಡ.. ಅವಳು ನನ್ನ ಹೆಂಡತಿ': ಒಂದೇ ವರ್ಷದ ಅವಧಿಯಲ್ಲಿ Rashid Khan 2ನೇ ಮದುವೆ!

ದೆಹಲಿ ಸ್ಫೋಟ ಕೇಂದ್ರ 'ಸರ್ಕಾರದ ವೈಫಲ್ಯ': ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

H-1B visa: 'ನಮ್ಮಲ್ಲಿ ಕೊರತೆ ಇದೆ, ವಿದೇಶಿ ಪ್ರತಿಭೆಗಳೂ ಬೇಕು'; ಅಮೆರಿಕ ಅಧ್ಯಕ್ಷ ಟ್ರಂಪ್ ಯೂಟರ್ನ್

SCROLL FOR NEXT