ಎಕೋಸ್ಪೋರ್ಟ್ ಕಾರ್ ಜಪ್ತಿ 
ದೇಶ

Delhi blast: ಶಂಕಿತ ಆರೋಪಿ ಡಾ. ಉಮರ್ ಬಳಸಿದ್ದ ರೆಡ್ ಎಕೋಸ್ಪೋರ್ಟ್ ಕಾರು ಜಪ್ತಿ

ಫರಿದಾಬಾದ್ ಪೊಲೀಸರು DL 10 CK 0458 ನೋಂದಣಿ ಸಂಖ್ಯೆ ಹೊಂದಿರುವ ಕೆಂಪು ಬಣ್ಣದ ಇಕೋಸ್ಪೋರ್ಟ್ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಫರಿದಾಬಾದ್: ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಕಾರು ಸುದ್ದಿಯಲ್ಲಿದ್ದು, ಶಂಕಿತ ಆರೋಪಿ ಡಾ. ಉಮರ್ ಉನ್ ನಬಿ ಅವರದ್ದು ಎನ್ನಲಾದ ಕೆಂಪು ಬಣ್ಣದ ಫೋರ್ಡ್ ಇಕೋಸ್ಪೋರ್ಟ್ ಕಾರನ್ನು ಪತ್ತೆಹಚ್ಚಿ ಜಪ್ತಿ ಮಾಡಲಾಗಿದೆ.

ಫರಿದಾಬಾದ್ ಪೊಲೀಸರು DL 10 CK 0458 ನೋಂದಣಿ ಸಂಖ್ಯೆ ಹೊಂದಿರುವ ಕೆಂಪು ಬಣ್ಣದ ಇಕೋಸ್ಪೋರ್ಟ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಿದ ಈ ಕಾರನ್ನು ಖಂಡವಾಲಿ ಗ್ರಾಮದ ಬಳಿ ನಿಲ್ಲಿಸಲಾಗಿತ್ತು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಸ್ಫೋಟಕ್ಕೆ ಬಳಸಲಾದ ಹುಂಡೈ ಐ20 ಕಾರಿನೊಂದಿಗೆ ನಂಟು ಹೊಂದಿರುವ ಇತರ ಶಂಕಿತರು ಮತ್ತೊಂದು ಕೆಂಪು ಬಣ್ಣದ ಕಾರನ್ನು ಹೊಂದಿದ್ದಾರೆ ಎಂದು ತನಿಖೆಯಲ್ಲಿ ಬಹಿರಂಗವಾದ ನಂತರ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ ಎಲ್ಲಾ ಪೊಲೀಸ್ ಠಾಣೆಗಳು, ಪೋಸ್ಟ್‌ಗಳು ಮತ್ತು ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಎಚ್ಚರಿಕೆ ನೀಡಿದ್ದರು.

ಈ ವಾಹನವನ್ನು ಪತ್ತೆಹಚ್ಚಲು ದೆಹಲಿ ಪೊಲೀಸರ ಕನಿಷ್ಠ ಐದು ತಂಡಗಳನ್ನು ನಿಯೋಜಿಸಿದ್ದರು ಮತ್ತು ನೆರೆಯ ಉತ್ತರ ಪ್ರದೇಶ ಮತ್ತು ಹರಿಯಾಣ ಪೊಲೀಸರಿಗೂ ಹುಡುಕಾಟದಲ್ಲಿ ಸಹಾಯ ಮಾಡುವಂತೆ ಸೂಚನೆ ನೀಡಲಾಗಿತ್ತು. ಅಲ್ಲದೆ ಕಾರಿನ ವಿವರಗಳನ್ನು ಉತ್ತರ ಪ್ರದೇಶ ಮತ್ತು ಹರಿಯಾಣ ಪೊಲೀಸರೊಂದಿಗೆ ಹಂಚಿಕೊಂಡಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಿಮವಾಗಿ ಖಂಡವಾಲಿ ಗ್ರಾಮದ ಬಳಿ ರೆಡ್ ಕಾರನ್ನು ಪತ್ತೆ ಮಾಡಿ ಜಪ್ತಿ ಮಾಡಲಾಗಿದ್ದು, ಈ ಕಾರು ಉಮರ್ ಉನ್ ನಬಿ ಹೆಸರಿನಲ್ಲಿ ನೋಂದಾಯಿಸಲಾಗಿದೆ.

ಸೋಮವಾರ ಸಂಜೆ ಹುಂಡೈ ಐ20 ಕಾರು ಸ್ಫೋಟ ಸಂಭವಿಸುವ ಮೊದಲು, ಉಮರ್ ನಬಿ ರಾಮಲೀಲಾ ಮೈದಾನದ ಬಳಿಯ ಅಸಫ್ ಅಲಿ ರಸ್ತೆಯಲ್ಲಿರುವ ಮಸೀದಿಯಲ್ಲಿ ತಂಗಿದ್ದರು ಎಂದು ಮೂಲಗಳು ತಿಳಿಸಿವೆ.

ಮಸೀದಿಯಿಂದ ಹೊರಬಂದ ನಂತರ, ಆರೋಪಿ ನೇರವಾಗಿ ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಹೋದರ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT