ಅಶೋಕ್ ಗೆಹ್ಲೋಟ್ 
ದೇಶ

ಹಣದ ಆಮಿಷದಿಂದ ಸಿಕ್ಕ ಗೆಲುವು: ಬಿಹಾರ ಚುನಾವಣಾ ಫಲಿತಾಂಶ ಕುರಿತು ಅಶೋಕ್ ಗೆಹ್ಲೋಟ್‌ ಹೇಳಿಕೆ

ಬಿಹಾರ ವಿಧಾನಸಭಾ ಚುನಾವಣೆ ಕುರಿತು ಮಾತನಾಡಿರುವ ಅವರು, ಚುನಾವಣಾ ಫಲಿತಾಂಶ ನಿರಾಶದಾಯಕವಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಹಣದ ಆಮಿಷವೊಡ್ಡಲಾಗಿದೆ.

ಜೈಪುರ: ಬಿಹಾರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೊಡಿಸಿದ್ದು, ಮತದಾರರಿಗೆ ಹಣ ಕೊಟ್ಟು ಪಡೆದ ಗೆಲುವು ಇದಾಗಿದೆ ಎಂದು ರಾಜಸ್ಥಾನ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕ ಅಶೋಕ್‌ ಗೆಹ್ಲೋಟ್ ಅವರು ಶುಕ್ರವಾರ ಹೇಳಿದ್ದಾರೆ,

ಬಿಹಾರ ವಿಧಾನಸಭಾ ಚುನಾವಣೆ ಕುರಿತು ಮಾತನಾಡಿರುವ ಅವರು, ಚುನಾವಣಾ ಫಲಿತಾಂಶ ನಿರಾಶದಾಯಕವಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಹಣದ ಆಮಿಷವೊಡ್ಡಲಾಗಿದೆ. ಇದು ಮಹಿಳಾ ಮತದಾರರಿಗೆ ಹಣ ಕೊಟ್ಟು ಪಡೆದ ಗೆಲುವು ಎಂದು ಟೀಕಿಸಿದ್ದಾರೆ.

ಚುನಾವಣೆಗೂ ಮುನ್ನ ಬಿಹಾರದ ಮಹಿಳಾ ಮತದಾರರಿಗೆ ತಲಾ 10,000 ರೂ.ಗಳನ್ನು ನೀಡಲಾಗಿದೆ. ಮಹಿಳೆಯರಿಗೆ ಹಣದ ಆಮಿಷವೊಡ್ಡಿದೆ. ಚುನಾವಣಾ ಪ್ರಚಾರದ ಸಮಯದಲ್ಲೂ ಇದು ನಡೆದಿದೆ. ಆದರೆ, ಚುನಾವಣಾ ಆಯೋಗವು ಮೂಕ ಪ್ರೇಕ್ಷಕನಾಗಿತ್ತು ಎಂದು ಆರೋಪಿಸಿದ್ದಾರೆ.

ಬಿಹಾರ ಫಲಿತಾಂಶಗಳು ನಿರಾಶಾದಾಯಕವಾಗಿವೆ. ಬಿಹಾರದಲ್ಲಿ ನಾನು ಕಂಡಂತೆ, ಹಣ ಹಂಚಿಕೆ ನಡೆಯುತ್ತಲೇ ಇತ್ತು. ಆದರೆ, ಚುನಾವಣಾ ಆಯೋಗ ಅದನ್ನು ನಿಲ್ಲಿಸಲಿಲ್ಲ. ಬಿಜೆಪಿ ಹಣದ ಶಕ್ತಿಯನ್ನು ಬಳಸಿದೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡಿದೆ, ದೇಶಕ್ಕೆ ಕಾಂಗ್ರೆಸ್ ಮತ್ತು ಅದರ ಸಿದ್ಧಾಂತದ ಅಗತ್ಯವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್

ಮೇ ತಿಂಗಳ ಭಾರತ-ಪಾಕಿಸ್ತಾನ ಸಂಘರ್ಷ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವೇ: ಚೀನಾ

ಭಾರತೀಯ ರೈಲ್ವೆ ಇತಿಹಾಸದಲ್ಲಿ ಮಹತ್ತರ ಸಾಧನೆ: ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್ ; ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್

New Year ಗೆ ಆನ್ ಲೈನ್ ಫುಡ್ ಆರ್ಡರ್ ಗೆ ಸಮಸ್ಯೆ: ಒಕ್ಕೂಟಗಳಿಂದ ಇಂದು ಮೆಗಾ ಪ್ರತಿಭಟನೆ, 1.5 ಲಕ್ಷ ಕಾರ್ಮಿಕರು ಭಾಗಿ

ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!

SCROLL FOR NEXT