ತೇಜಸ್ವಿ ಯಾದವ್  
ದೇಶ

ನ.18ರಂದು ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಖಚಿತ: ತೇಜಸ್ವಿ ಯಾದವ್

ಮಂಗಳವಾರ ನಡೆದ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜನರು ಮತ ಚಲಾಯಿಸುತ್ತಿದ್ದಾಗ ಎಕ್ಸಿಟ್ ಪೋಲ್ ಭವಿಷ್ಯವಾಣಿಗಳು ಹರಿದಾಡುತ್ತಿದ್ದವು ಎಂದು ತೇಜಸ್ವಿ ಯಾದವ್ ಮಾಧ್ಯಮಗಳಿಗೆ ತಿಳಿಸಿದರು.

ಪಾಟ್ನಾ: ರಾಷ್ಟ್ರೀಯ ಜನತಾ ದಳ (RJD) ನಾಯಕ ಮತ್ತು ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಪ್ರಸಾದ್ ಯಾದವ್ ಅವರು ನವೆಂಬರ್ 18 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದಾಗಿ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದು, ಎಕ್ಸಿಟ್ ಪೋಲ್ ಗಳನ್ನು ತಳ್ಳಿಹಾಕಿದ್ದಾರೆ. ಮಹಾಘಟಬಂಧನ ಖಂಡಿತವಾಗಿಯೂ ಅಧಿಕಾರಕ್ಕೆ ಬರುತ್ತದೆ, ತಾವು ನವೆಂಬರ್ 18ಕ್ಕೆ ಅಧಿಕಾರ ಪಡೆಯುವುದು ನಿಶ್ಚಿತ ಎಂದು ಮತ ಎಣಿಕೆಗೆ ಮುನ್ನ ಬರೆದುಕೊಂಡಿದ್ದಾರೆ.

ಮಂಗಳವಾರ ನಡೆದ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜನರು ಮತ ಚಲಾಯಿಸುತ್ತಿದ್ದಾಗ ಎಕ್ಸಿಟ್ ಪೋಲ್ ಭವಿಷ್ಯವಾಣಿಗಳು ಹರಿದಾಡುತ್ತಿದ್ದವು ಎಂದು ತೇಜಸ್ವಿ ಯಾದವ್ ಮಾಧ್ಯಮಗಳಿಗೆ ತಿಳಿಸಿದರು.

ಅಧಿಕಾರಿಗಳ ಮೇಲೆ ಮಾನಸಿಕ ಒತ್ತಡ ಹೇರುವ ಉದ್ದೇಶವಿತ್ತು, ಮತ ಎಣಿಕೆ ನಿಧಾನವಾಗುವುದನ್ನು ಸಹ ಇದು ಸ್ಪಷ್ಟವಾಗಿ ತೋರಿಸಿದೆ ಎಂದು ಅವರು ಹೇಳಿದ್ದಾರೆ.

ಬಿಹಾರದಲ್ಲಿ ಇಂದಿನ ಪರಿಸ್ಥಿತಿ 1995 ರಂತೆಯೇ ಇದೆ ಎಂದು ಹೇಳಿರುವ ತೇಜಸ್ವಿ ಯಾದವ್ , ಈ ಬಾರಿ ಬದಲಾವಣೆ ಖಚಿತ ಎಂದು ಹೇಳಿದರು, ಪಕ್ಷವು ತಳಮಟ್ಟದಿಂದ ಪ್ರೋತ್ಸಾಹದಾಯಕ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Live: Bihar Election Results 2025: ನಿತೀಶ್ ಕುಮಾರ್ ನೇತೃತ್ವದ JD(U) ಪುನರಾಗಮನ ನಿರೀಕ್ಷೆ, NDAಗೆ ಆರಂಭಿಕ ಮುನ್ನಡೆ

Bihar trends- ಬಿಹಾರ ಮತ ಎಣಿಕೆ ಪ್ರಗತಿಯಲ್ಲಿ, ಆರಂಭಿಕ ಟ್ರೆಂಡ್ ನಲ್ಲಿ NDA ಮುನ್ನಡೆ, ಮಹಾಘಟಬಂಧನ್ ಹಿನ್ನಡೆ

Bihar Election Results 2025: ಮತ ಎಣಿಕೆ ಆರಂಭ, ಸತತ 5ನೇ ಬಾರಿ ಗೆಲುವಿನ ಉತ್ಸಾಹದಲ್ಲಿ ನಿತೀಶ್ ಕುಮಾರ್, ಬದಲಾವಣೆ ನಿರೀಕ್ಷೆಯಲ್ಲಿ ತೇಜಸ್ವಿ ಯಾದವ್

Bihar Election Results 2025: ಇಂದು ಬಿಹಾರ ಚುನಾವಣೆ ಮತ ಎಣಿಕೆ, ಕೆಲವೇ ಹೊತ್ತಿನಲ್ಲಿ ಭವಿಷ್ಯ ನಿರ್ಧಾರ; ಗೆಲುವಿನ 'ಹಾರ' ಯಾರ ಪಾಲು?

'ನಮಗೆ ಆತುರವಿಲ್ಲ, ಪಕ್ಷ ಕಟ್ಟಲು ರಕ್ತ -ಬೆವರು ಸುರಿಸಿದ್ದೇವೆ: ಅಧಿಕಾರಕ್ಕಾಗಿ ಇನ್ನೂ 5 ವರ್ಷ ಕಾಯುತ್ತೇವೆ; ಸಮ್ಮಿಶ್ರ ಸರ್ಕಾರ ಸೇರುವ ಪ್ರಶ್ನೆಯೇ ಇಲ್ಲ'

SCROLL FOR NEXT