ಉದ್ಧವ್ ಠಾಕ್ರೆ 
ದೇಶ

ಬಿಹಾರ ಚುನಾವಣೆಯಲ್ಲಿ NDA ಗೆಲುವು ECI ಪ್ರಾಯೋಜಿತ 'ಹಗರಣ': ಸಾಮ್ನಾ ಸಂಪಾದಕೀಯ

ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಮರಣಶಕ್ತಿ ಕಳೆದುಕೊಳ್ಳುತ್ತಿದ್ದು, ಅಂತಹ ಸಮಸ್ಯೆಗಳನ್ನು ಹೊಂದಿರುವ ನಾಯಕ ಬಿಹಾರವನ್ನು ಹೇಗೆ ಮುನ್ನಡೆಸಬಹುದು ಎಂದು ಶಿವಸೇನೆ(ಯುಬಿಟಿ) ಪ್ರಶ್ನಿಸಿದೆ.

ಮುಂಬೈ: ಬಿಹಾರ ವಿಧಾಸಭೆ ಚುನಾವಣೆಯ ಫಲಿತಾಂಶ ಚುನಾವಣಾ ಆಯೋಗವು ಮಾಡಿದ ಮಹಾ ವಂಚನೆ ಎಂದು ಶಿವಸೇನೆ(ಯುಬಿಟಿ) ಶನಿವಾರ ಟೀಕಿಸಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಮತ ಕಳ್ಳತನದ ಮೂಲಕ ಗೆಲುವು ಸಾಧಿಸಿದೆ ಎಂದು ಆರೋಪಿಸಿದೆ.

ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅದ್ಭುತ ಗೆಲುವು ಸಾಧಿಸಿದ ಒಂದು ದಿನದ ನಂತರ, ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವು, ಬಿಹಾರ ಮುಖ್ಯಮಂತ್ರಿ ಹುದ್ದೆಗಾಗಿ ಜೆಡಿಯು ಮೇಲೆ ಹಿಡಿತ ಸಾಧಿಸಲು ಬಿಜೆಪಿ ಹಿಂಜರಿಯುವುದಿಲ್ಲ ಎಂದು ಹೇಳಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಮರಣಶಕ್ತಿ ಕಳೆದುಕೊಳ್ಳುತ್ತಿದ್ದು, ಅಂತಹ ಸಮಸ್ಯೆಗಳನ್ನು ಹೊಂದಿರುವ ನಾಯಕ ಬಿಹಾರವನ್ನು ಹೇಗೆ ಮುನ್ನಡೆಸಬಹುದು ಎಂದು ಶಿವಸೇನೆ(ಯುಬಿಟಿ) ಪ್ರಶ್ನಿಸಿದೆ.ಬಿಹಾರ

ಪಕ್ಷದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಶಿವಸೇನೆ(ಯುಬಿಟಿ), ಮಹಾರಾಷ್ಟ್ರದಂತೆಯೇ ಬಿಹಾರದಲ್ಲಿಯೂ ಬಿಜೆಪಿಯ ಗೆಲುವಿನ ಸೂತ್ರವನ್ನು ನಿರ್ಧರಿಸಲಾಗಿದೆ. ಅಲ್ಲಿ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ 50 ಸ್ಥಾನಗಳನ್ನು ಗೆಲ್ಲಲು ಅವಕಾಶ ನೀಡಿಲ್ಲ ಎಂದು ಹೇಳಿದೆ.

ಬಿಹಾರ ಚುನಾವಣೆಯ ಫಲಿತಾಂಶವು ಆಶ್ಚರ್ಯಕರವಲ್ಲ, ಚುನಾವಣಾ ಆಯೋಗ ಮತ್ತು ಬಿಜೆಪಿ ತಾವು ಬಯಸಿದ ಫಲಿತಾಂಶ ಪಡೆಯಲು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದೆ.

"ಬಿಹಾರ ಚುನಾವಣೆ ಭಾರತೀಯ ಪ್ರಜಾಪ್ರಭುತ್ವದಲ್ಲಿ ನಡೆದ ಒಂದು ದೊಡ್ಡ ಹಗರಣ. ಇದಕ್ಕೆ ಚುನಾವಣಾ ಆಯೋಗ ಸಹಕಾರ ನೀಡಿದೆ" ಎಂದು ಸಂಪಾದಕೀಯ ಟೀಕಿಸಿದೆ.

"ಮತಗಳನ್ನು ಮತ್ತೆ ಕದಿಯಲಾಯಿತು. ಅದರ ಆಧಾರದ ಮೇಲೆ ಬಿಜೆಪಿ ಮತ್ತು (ಬಿಹಾರ ಮುಖ್ಯಮಂತ್ರಿ) ನಿತೀಶ್ ಕುಮಾರ್ ಚುನಾವಣೆಯಲ್ಲಿ ಗೆದ್ದರು" ಎಂದು ಉದ್ಧವ್ ನೇತೃತ್ವದ ಪಕ್ಷ ಆರೋಪಿಸಿದೆ.

ಚುನಾವಣಾ ಪ್ರಕ್ರಿಯೆಯ ದ್ವಾರಪಾಲಕನಾಗಿರುವ ಚುನಾವಣಾ ಆಯೋಗವೇ ಕಳ್ಳರಿಗೆ ಸಹಾಯ ಮಾಡಿದರೆ ಜನರು ಯಾರನ್ನು ನಂಬುತ್ತಾರೆ ಎಂದು ಶಿವಸೇನೆ ಪ್ರಶ್ನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವೆಂಬರ್ ಕ್ರಾಂತಿ ಇಲ್ಲ: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್; 8-12 ಸಚಿವರಿಗೆ ಕೊಕ್? ಆಕಾಂಕ್ಷಿಗಳ ಪಟ್ಟಿ!

ಬಿಹಾರ ಚುನಾವಣೆ: ಸೋಲಿಗೆ ದುಃಖವಿಲ್ಲ, 'ಸಾರ್ವಜನಿಕ ಜೀವನದಲ್ಲಿ ಏರಿಳಿತ ಅನಿವಾರ್ಯ: RJD ಮೊದಲ ಪ್ರತಿಕ್ರಿಯೆ

ಬಿಹಾರ ಚುನಾವಣೆ ಫಲಿತಾಂಶಕ್ಕೆ ರಾಜಕೀಯ ಅಷ್ಟೇ ಅಲ್ಲ, ಕುಟುಂಬವೂ ಛಿದ್ರ; ರಾಜಕಾರಣದ ಜೊತೆ ಕುಟುಂಬಕ್ಕೂ ಲಾಲು ಪುತ್ರಿ ಗುಡ್ ಬೈ!

ಮಣ್ಣಲ್ಲಿ ಮಣ್ಣಾದ ʻವೃಕ್ಷಮಾತೆʼ; ಸಕಲ ಸರ್ಕಾರಿ ಗೌರವಗಳೊಂದಿಗೆ ತಿಮ್ಮಕ್ಕ ಅಂತ್ಯಕ್ರಿಯೆ

ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ; ರಾಜ್ಯದ 114 ಸ್ಥಳದಲ್ಲಿ 114 ಸಸಿ ನೆಟ್ಟು ಪೋಷಣೆ

SCROLL FOR NEXT