ಪ್ರಶಾಂತ್ ಕಿಶೋರ್ 
ದೇಶ

ಬಿಹಾರ ವಿಧಾನಸಭೆ ಚುನಾವಣೆ: NDA ಜನರಿಗೆ ಲಂಚ ನೀಡಿ ಮತಗಳ ಖರೀದಿ- 'ಜನ್ ಸುರಾಜ್' ಪಕ್ಷದ ಮೊದಲ ಪ್ರತಿಕ್ರಿಯೆ!

ಭರ್ಜರಿ ಪ್ರಚಾರ ಹಾಗೂ ರಾಜ್ಯದಲ್ಲಿನ ನಿರುದ್ಯೋಗ, ವಲಸೆ ಮತ್ತು ಕೈಗಾರಿಕೆಗಳ ಕೊರತೆಯಂತಹ ಸಮಸ್ಯೆಗಳನ್ನು ಎತ್ತಿದರೂ ಪಕ್ಷ ಮತಗಳನ್ನು ಕ್ರೋಢೀಕರಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದೆ.

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಖಾತೆ ತೆರೆಯುವಲ್ಲಿ 'ಜನ್ ಸುರಾಜ್' ವಿಫಲವಾಗಿದ್ದು, ಮಾಜಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಈ ಕುರಿತು ಶನಿವಾರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಚುನಾವಣಾ ಸೋಲಿನ ಬಗ್ಗೆ ನಿರಾಶೆ ವ್ಯಕ್ತಪಡಿಸಿದೆ. ಮಹಿಳೆಯರ ಖಾತೆಗಳಿಗೆ ನಗದು ವರ್ಗಾವಣೆ ಎನ್‌ಡಿಎ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದೆ.

ಭರ್ಜರಿ ಪ್ರಚಾರ ಹಾಗೂ ರಾಜ್ಯದಲ್ಲಿನ ನಿರುದ್ಯೋಗ, ವಲಸೆ ಮತ್ತು ಕೈಗಾರಿಕೆಗಳ ಕೊರತೆಯಂತಹ ಸಮಸ್ಯೆಗಳನ್ನು ಎತ್ತಿದರೂ ಪಕ್ಷ ಮತಗಳನ್ನು ಕ್ರೋಢೀಕರಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದೆ.

ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನ್ ಸುರಾಜ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಉದಯ್ ಸಿಂಗ್, ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ನಾವು ನಿರಾಶೆಗೊಂಡಿದ್ದೇವೆ ಆದರೆ ಅಸಮಾಧಾನಗೊಂಡಿಲ್ಲ. ನಾವು ಒಂದೇ ಒಂದು ಸ್ಥಾನವನ್ನು ಗೆಲ್ಲದಿದ್ದರೂ, ಆಡಳಿತಾರೂಢ ಎನ್‌ಡಿಎಯನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

ಬಿಹಾರದಲ್ಲಿ ಮುಸ್ಲಿಂ ಮತದಾರರನ್ನು ಮನವೊಲಿಸುವಲ್ಲಿ ಪಕ್ಷ ಸಾಧ್ಯವಾಗಲಿಲ್ಲ. ಜನರು ಆರ್‌ಜೆಡಿ ಅಧಿಕಾರಕ್ಕೆ ಬರುವುದನ್ನು ಬಯಸಿಲ್ಲ ಎಂಬುದನ್ನು ಜನಾದೇಶವು ಸಾಬೀತುಪಡಿಸಿದೆ ಎಂದು ಸಿಂಗ್ ಹೇಳಿದರು.

ಬಿಹಾರದಲ್ಲಿ ಆಡಳಿತಾರೂಢ ಎನ್‌ಡಿಎ ಸರ್ಕಾರ ಮಹಿಳೆಯರ ಖಾತೆಗಳಿಗೆ ರೂ. 40,000 ಕೋಟಿ ನಗದು ವರ್ಗಾವಣೆ ಅದರ ಗೆಲುವಿನಲ್ಲಿ "ಪ್ರಮುಖ ಪಾತ್ರ" ವಹಿಸಿದೆ. ಮಹಿಳಾ ರೋಜ್‌ಗಾರ್ ಯೋಜನೆಯಡಿ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ಗಳನ್ನು ವರ್ಗಾಯಿಸಲಾಗಿದೆ. ಚುನಾವಣೆಗೆ ಮುಂಚಿತವಾಗಿ ಜನರಿಗೆ ಲಂಚ ನೀಡಿ ಮತಗಳ ಖರೀದಿಸಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರವೂ ನಗದು ಪ್ರಯೋಜನಗಳನ್ನು ವರ್ಗಾಯಿಸಲಾಗಿದೆ" ಎಂದು ಅವರು ಆರೋಪಿಸಿದರು.

ಈಗ ಉಳಿದ 2 ಲಕ್ಷ ರೂ.ಗಳನ್ನು ಸರ್ಕಾರವು ರಾಜ್ಯದ ಮಹಿಳೆಯರ ಖಾತೆಗಳಿಗೆ ಹೇಗೆ ವರ್ಗಾಯಿಸುತ್ತದೆ ಎಂದು ನೋಡಲು ನಾವು ಕಾಯುತ್ತಿದ್ದೇವೆ. ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಶೇಕಡಾ 50 ರಷ್ಟು ಮತಗಳನ್ನು ಸಹ ಪಡೆದಿಲ್ಲ ಎಂದು ಅವರು ಹೇಳಿದರು. ಜೆಡಿಯು 25 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿರುವಂತೆಯೇ ಪ್ರಶಾಂತ್ ಕಿಶೋರ್ ರಾಜಕೀಯದಲ್ಲಿ ಸಕ್ರಿಯರಾಗುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಂಗ್, "ನೀವು ಈ ಪ್ರಶ್ನೆಯನ್ನು ಕಿಶೋರ್‌ಗೆ ಅವರನ್ನೇ ಕೇಳಬೇಕು"ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವೆಂಬರ್ ಕ್ರಾಂತಿ ಇಲ್ಲ: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್; 8-12 ಸಚಿವರಿಗೆ ಕೊಕ್? ಆಕಾಂಕ್ಷಿಗಳ ಪಟ್ಟಿ!

ಬಿಹಾರ ಚುನಾವಣೆ: ಸೋಲಿಗೆ ದುಃಖವಿಲ್ಲ, 'ಸಾರ್ವಜನಿಕ ಜೀವನದಲ್ಲಿ ಏರಿಳಿತ ಅನಿವಾರ್ಯ: RJD ಮೊದಲ ಪ್ರತಿಕ್ರಿಯೆ

ಬಿಹಾರ ಚುನಾವಣೆ ಫಲಿತಾಂಶಕ್ಕೆ ರಾಜಕೀಯ ಅಷ್ಟೇ ಅಲ್ಲ, ಕುಟುಂಬವೂ ಛಿದ್ರ; ರಾಜಕಾರಣದ ಜೊತೆ ಕುಟುಂಬಕ್ಕೂ ಲಾಲು ಪುತ್ರಿ ಗುಡ್ ಬೈ!

ಮಣ್ಣಲ್ಲಿ ಮಣ್ಣಾದ ʻವೃಕ್ಷಮಾತೆʼ; ಸಕಲ ಸರ್ಕಾರಿ ಗೌರವಗಳೊಂದಿಗೆ ತಿಮ್ಮಕ್ಕ ಅಂತ್ಯಕ್ರಿಯೆ

ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ; ರಾಜ್ಯದ 114 ಸ್ಥಳದಲ್ಲಿ 114 ಸಸಿ ನೆಟ್ಟು ಪೋಷಣೆ

SCROLL FOR NEXT