ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ 
ದೇಶ

ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ: ಡಿ.ಕೆ ಶಿವಕುಮಾರ್

ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಅವರು, ರಾಹುಲ್‌ ಗಾಂಧಿ, ಸಿಎಂ ಸಿದ್ದರಾಮಯ್ಯನವರ ಭೇಟಿ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ.

ನವದೆಹಲಿ: ಕರ್ನಾಟಕದಲ್ಲಿ ನವೆಂಬರ್ ಕ್ರಾಂತಿಯ ಬದಲು ಸಚಿವ ಸಂಪುಟ ಪುನಾರಚನೆ ಬಗ್ಗೆ ಈಗ ತೀವ್ರ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಇಬ್ಬರೂ ದೆಹಲಿಯಲ್ಲಿದ್ದಾರೆ.

ದೆಹಲಿಯಲ್ಲಿ 'ದಿಲ್ ಸೇ ವಿತ್ ಕಪಿಲ್ ಸಿಬಲ್' ನ 100 ನೇ ಸಂಚಿಕೆಯ ಬಿಡುಗಡೆ ಕಾರ್ಯಕ್ರಮದಲ್ಲಿ ನಿನ್ನೆ ಭಾಗಿಯಾಗಿದ್ದರು. ಈ ಮಧ್ಯೆ ನಿನ್ನೆ ಸಿದ್ದರಾಮಯ್ಯ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಬಹಳ ಹೊತ್ತು ಚರ್ಚಿಸಿದ್ದಾರೆ. ಹೊರಗೆ ಬಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಸಿಎಂ, ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯೇ ಆಗಿಲ್ಲ, ಬಿಹಾರ ಎಲೆಕ್ಷನ್ ಫಲಿತಾಂಶ ಬಗ್ಗೆ ಮಾತ್ರ ಚರ್ಚೆ ಮಾಡಿದೆವು ಎಂದಿದ್ದಾರೆ.

ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಅವರು, ರಾಹುಲ್‌ ಗಾಂಧಿ, ಸಿಎಂ ಸಿದ್ದರಾಮಯ್ಯನವರ ಭೇಟಿ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಯಾವ ವಿಚಾರಕ್ಕೆ ಭೇಟಿಯಾಗಿದ್ದರು, ಏನು ಚರ್ಚೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ ಎಂದಿದ್ದಾರೆ.

ಸಾಮಾನ್ಯವಾಗಿ ಸಿಎಂ ಬಂದಾಗ ಪಕ್ಷದ ವರಿಷ್ಠರನ್ನು ಭೇಟಿಯಾಗುವುದು ಸಹಜ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಏನೂ ಗೊತ್ತಿಲ್ಲ, ಏನಾದರೂ ಇದ್ದರೆ ಸಿಎಂ ಹತ್ತಿರ ಮಾತನಾಡಿ. ಪಕ್ಷ ಏನು ಹೇಳುತ್ತೋ ಹಾಗೆ ನಡೆದುಕೊಳ್ಳುವುದು ನನ್ನ ಕೆಲಸ. ಪಕ್ಷದ ಹೈಕಮಾಂಡ್‌ ನನ್ನ ಕೇಳ್ತಾರೆ, ಆಗ ನಾನು ಮಾತನಾಡುತ್ತೇನೆ. ಏನು ಮಾತಾಡಬೇಕೆಂದು ನನಗೆ ಗೊತ್ತು ಎಂದು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹೈಕಮಾಂಡ್ ಅವರನ್ನು ಸಿಎಂ ಭೇಟಿ ಮಾಡಿದರೆ ತಪ್ಪೇನು, ಅವರು ಯಾರನ್ನೂ ಬೇಕಾದರೆ ಭೇಟಿ ಮಾಡುವ ಅಧಿಕಾರ ಅವರಿಗಿದೆ, ನಾನು ಭೇಟಿ ಮಾಡಿದರೆ ಏನು ಕೇಳುತ್ತಾರೆ ಎಂದು ನನಗೆ ಗೊತ್ತಿದೆ, ಅದಕ್ಕೆ ನಾನು ಉತ್ತರ ಕೊಡುತ್ತೇನೆ ಎಂದಷ್ಟೇ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವೆನೆಜುವೆಲಾ ಮೇಲೆ ಅಮೆರಿಕ ಮತ್ತೊಂದು ದಾಳಿ; ತೈಲ ಟ್ಯಾಂಕರ್ ವಶಕ್ಕೆ, ರಷ್ಯಾ ಖಂಡನೆ, Video

ಜನಗಣತಿ 2027: ಮನೆ ಪಟ್ಟಿಗಳನ್ನು ಒಳಗೊಂಡ ಮೊದಲ ಹಂತ ಏಪ್ರಿಲ್ 1 ರಿಂದ ಆರಂಭ

'ಹೊಡಿತಾಳೆ.. ಬಡಿತಾಳೆ ನನ್ ಹೆಡ್ತಿ': ನಟ Dhanush ಪೊಲೀಸ್ ದೂರು! ಮದುವೆಯಾದ 9 ತಿಂಗಳಿಗೇ ಬೀದಿಗೆ ಬಂದ ಸಂಸಾರ!

'ಗಂಡಸರ ಮನಸ್ಸೂ ಅರ್ಥವಾಗಲ್ಲ, ಯಾವಾಗ ರೇಪ್‌/ಕೊಲೆ ಮಾಡ್ತಾರೋ ಗೊತ್ತಿಲ್ಲ': ನಟಿ ರಮ್ಯಾ ವಿವಾದಾತ್ಮಕ ಪೋಸ್ಟ್

10 ವರ್ಷಗಳಲ್ಲಿ ಗುಜರಾತ್ ಬಿಜೆಪಿ ಸಂಸದರ ಆಸ್ತಿ ಹಲವು ಪಟ್ಟು ಹೆಚ್ಚಳ: ADR ವರದಿ

SCROLL FOR NEXT