ಅಲ್ ಫಲಾಹ್ ವಿಶ್ವವಿದ್ಯಾಲಯ online desk
ದೇಶ

ವಂಚನೆ ಪ್ರಕರಣ: ಅಲ್ ಫಲಾಹ್ ವಿವಿ ಅಧ್ಯಕ್ಷರ ಸಹೋದರನ ಬಂಧನ

25 ವರ್ಷಗಳ ಹಿಂದೆ ಮಧ್ಯಪ್ರದೇಶದ ಮ್ಹೋವ್‌ನಲ್ಲಿ ದೊಡ್ಡ ಪ್ರಮಾಣದ ಹಣಕಾಸು ವಂಚನೆ ಎಸಗಿದ ಆರೋಪದ ಮೇಲೆ ಹಮೂದ್ ಅಹ್ಮದ್ ಸಿದ್ದಿಕಿ ಅವರನ್ನು ಭಾನುವಾರ ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ.

ಮ್ಹೋವ್: ದೆಹಲಿ ಸ್ಫೋಟದಲ್ಲಿ ತನಿಖೆ ಎದುರಿಸುತ್ತಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಅಧ್ಯಕ್ಷ ಜಾವೇದ್ ಸಿದ್ದಿಕಿ ಅವರ ಸಹೋದರನನ್ನು ಮಧ್ಯಪ್ರದೇಶ ಪೊಲೀಸರು ಮ್ಹೋವ್‌ನಲ್ಲಿ ನಡೆದ ಆರ್ಥಿಕ ವಂಚನೆಗೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

25 ವರ್ಷಗಳ ಹಿಂದೆ ಮಧ್ಯಪ್ರದೇಶದ ಮ್ಹೋವ್‌ನಲ್ಲಿ ದೊಡ್ಡ ಪ್ರಮಾಣದ ಹಣಕಾಸು ವಂಚನೆ ಎಸಗಿದ ಆರೋಪದ ಮೇಲೆ ಹಮೂದ್ ಅಹ್ಮದ್ ಸಿದ್ದಿಕಿ ಅವರನ್ನು ಭಾನುವಾರ ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"2000ದಲ್ಲಿ ನಕಲಿ ಖಾಸಗಿ ಬ್ಯಾಂಕ್ ಸ್ಥಾಪಿಸಿ, ನೂರಾರು ನಿವಾಸಿಗಳಿಗೆ ಠೇವಣಿ ದ್ವಿಗುಣಗೊಳಿಸುವ ಭರವಸೆ ನೀಡಿ ಕೋಟ್ಯಾಂತರ ರೂ. ಸಂಗ್ರಹಿಸಿದ ನಂತರ ಹಮೂದ್ ಸಿದ್ದಿಕಿ ಮ್ಹೋವ್‌ನಿಂದ ನಾಪತ್ತೆಯಾಗಿದ್ದರು.

ಅಲ್ ಫಲಾಹ್ಹಗರಣ ಬೆಳಕಿಗೆ ಬಂದ ಕೂಡಲೇ ಅವರು ತಮ್ಮ ಕುಟುಂಬದೊಂದಿಗೆ ಪರಾರಿಯಾಗಿದ್ದರು. ಇದರಿಂದಾಗಿ ಅಧಿಕಾರಿಗಳು ದಶಕಗಳಿಂದ ಅವರನ್ನು ಹುಡುಕುತ್ತಿದ್ದರು.

ನಿನ್ನೆ ಹೈದರಾಬಾದ್‌ನಲ್ಲಿ ವಂಚಕ ಸಿದ್ದಿಕಿಯನ್ನು ಬಂಧಿಸಲಾಯಿತು ಎಂದು ಮ್ಹೋವ್ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಲಲಿತ್ ಸಿಂಗ್ ಸಿಕಾರ್ವಾರ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಮ್ಹೋವ್ ಪೊಲೀಸರು ಜಾವೇದ್ ಸಿದ್ದಿಕಿಯ ಹಿನ್ನೆಲೆಯನ್ನು ಮರುಪರಿಶೀಲಿಸಲು ಪ್ರಾರಂಭಿಸಿದ ನಂತರ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಗಮನಾರ್ಹವಾಗಿ, ದೆಹಲಿ ಸ್ಫೋಟದ ಪ್ರಮುಖ ಆರೋಪಿ ಡಾ. ಉಮರ್ ಉನ್ ನಬಿ, ಜಾವೇದ್ ಸಿದ್ದಿಕಿ ಅಧ್ಯಕ್ಷರಾಗಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾರೆ.

ಫರಿದಾಬಾದ್ ಭಯೋತ್ಪಾದನಾ ಘಟಕ, ಪ್ರಕರಣದ ತನಿಖೆ ನಡೆಸುತ್ತಿದ್ದು, ನಕಲಿ ಮತ್ತು ವಂಚನೆಗಾಗಿ ವಿಶ್ವವಿದ್ಯಾಲಯದ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅಲ್ ಫಲಾಹ್ ವಿಶ್ವವಿದ್ಯಾಲಯದ ಅಧ್ಯಕ್ಷರಿಗೆ ಎರಡು ಸಮನ್ಸ್ ಜಾರಿ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಲು ಶಿಕ್ಷೆಗೆ ಗುರಿಯಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಿಸಿ: ಭಾರತಕ್ಕೆ ಬಾಂಗ್ಲಾದೇಶ ಆಗ್ರಹ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್!

ಕೊನೆಗೂ ಪೊಲೀಸ್ ಬಲೆಗೆ ಬಿದ್ದ Piracy ಮಾಸ್ಟರ್ ಮೈಂಡ್, iBomma ಮಾಲೀಕ ರವಿ ಅರೆಸ್ಟ್! ಅಂದಿನ ವಾರ್ನಿಂಗ್ ಮುಳುವಾಯ್ತಾ?

INDI ಮೈತ್ರಿಕೂಟದಲ್ಲಿ ಭಾರಿ ಭಿನ್ನಮತ: ಸಾಕಪ್ಪಾ ಸಾಕು ಕಾಂಗ್ರೆಸ್, ರಾಹುಲ್ ಸಹವಾಸ; ಅಖಿಲೇಶ್ ನೇತೃತ್ವ ವಹಿಸಲಿ!: ಹೆಚ್ಚಾದ ಒತ್ತಡ

Delhi Blast: 'ವೈಟ್ ಕಾಲರ್' ಉಗ್ರ ಜಾಲ: ಹರಿಯಾಣದ ವೈದ್ಯೆ ಪ್ರಿಯಾಂಕಾ ಶರ್ಮಾ ವಿಚಾರಣೆ, ಯಾರು ಈಕೆ?

SCROLL FOR NEXT