ಶ್ರೀನಗರದಲ್ಲಿ ಭದ್ರತಾ ಅಧಿಕಾರಿಗಳು 
ದೇಶ

'ವೈಟ್-ಕಾಲರ್' ಭಯೋತ್ಪಾದನೆ ಪ್ರಕರಣದಲ್ಲಿ ವಿಚಾರಣೆ ನಂತರ ಡ್ರೈ ಫ್ರೂಟ್ಸ್ ಮಾರಾಟಗಾರ ಆತ್ಮಹತ್ಯೆ!

ಅಂತರ್ರಾಜ್ಯ "ವೈಟ್-ಕಾಲರ್" ಭಯೋತ್ಪಾದನಾ ನಂಟಿಗೆ ಸಂಬಂಧಿಸಿದಂತೆ ಅವರ ಮಗ ಮತ್ತು ಸಹೋದರನನ್ನು ಪೊಲೀಸರು ಈ ಮೊದಲೇ ಬಂಧಿಸಿದ್ದರು.

ಶ್ರೀನಗರ: 'ವೈಟ್-ಕಾಲರ್' ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸಿದ ನಂತರ ಭಾನುವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಡ್ರೈ ಫ್ರೂಟ್ಸ್ ಮಾರಾಟಗಾರ ಸೋಮವಾರ ಶ್ರೀನಗರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಂತರ್ರಾಜ್ಯ "ವೈಟ್-ಕಾಲರ್" ಭಯೋತ್ಪಾದನಾ ನಂಟಿಗೆ ಸಂಬಂಧಿಸಿದಂತೆ ಅವರ ಮಗ ಮತ್ತು ಸಹೋದರನನ್ನು ಪೊಲೀಸರು ಈ ಮೊದಲೇ ಬಂಧಿಸಿದ್ದರು.

ದಕ್ಷಿಣ ಕಾಶ್ಮೀರದ ಖಾಜಿಗುಂಡ್ ನಿವಾಸಿ ಬಿಲಾಲ್ ಅಹ್ಮದ್ ವಾನಿ ಅವರು ತಮ್ಮ ಮನೆಯಲ್ಲಿ ಬೆಂಕಿ ಹಚ್ಚಿಕೊಂಡಿದ್ದರು. ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಮೃತಪಟ್ಟಿದ್ದಾರೆ.

ಪ್ರಸ್ತುತ ತನಿಖೆಯ ಸಮಯದಲ್ಲಿ ಬಂಧಿಸಲ್ಪಟ್ಟ ಆರೋಪಿಗಳಲ್ಲಿ ಒಬ್ಬರಾದ ಡಾ. ಅದೀಲ್ ಅಹ್ಮದ್ ರಾಥರ್ ಅವರ ನಿವಾಸದ ಬಳಿ ವಾಸಿಸುವ ಬಿಲಾಲ್ ಅವರನ್ನು ಶನಿವಾರ ಪೊಲೀಸರು ವಿಚಾರಣೆಗೆ ಕರೆದಿದ್ದರು ಮತ್ತು ಸಂಜೆ ವಿಚಾರಣೆ ನಂತರ ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.

ಬಿಲಾಲ್ ಅವರ ಮಗ ಜಸ್ಬೀರ್ ಬಿಲಾಲ್ ಮತ್ತು ಸಹೋದರ ನಬೀಲ್ ಅಹ್ಮದ್ ಅವರನ್ನು ಪೊಲೀಸರು ಈಗಾಗಲೇ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಬಿಲಾಲ್ ಅವರ ನೆರೆಹೊರೆಯವರನ್ನು ನವೆಂಬರ್ 6 ರಂದು ಉತ್ತರ ಪ್ರದೇಶದ ಸಹರಾನ್‌ಪುರದಿಂದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಯಾಗಿ ಹೊರಹೊಮ್ಮಿರುವ ರಾಥರ್ ಅವರ ಕಿರಿಯ ಸಹೋದರ ಡಾ. ಮುಜಾಫರ್ ರಾಥರ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಮತ್ತು ಅವರು ಅಫ್ಘಾನಿಸ್ತಾನದಲ್ಲಿ ಅಡಗಿಕೊಂಡಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT