ರಾಬರ್ಟ್ ವಾದ್ರಾ 
ದೇಶ

NDA ಗೆಲುವಿನಲ್ಲಿ ಆಯೋಗದ ಕೈವಾಡ: ಬಿಹಾರದಲ್ಲಿ ಮರುಚುನಾವಣೆ ನಡೆಯಬೇಕು- ರಾಬರ್ಟ್ ವಾದ್ರಾ!

ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.

ಇಂದೋರ್: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸಾಮಾನ್ಯ ಒಕ್ಕೂಟ ಭರ್ಜರಿ ಬಹುಮತ ಗಳಿಸಿ ಅಧಿಕಾರ ಉಳಿಸಿಕೊಂಡ ಬೆನ್ನಲ್ಲೇ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಅವರು ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ, ರಾಜ್ಯದಲ್ಲಿ ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಮಧ್ಯಪ್ರದೇಶಕ್ಕೆ ಎರಡು ದಿನಗಳ ಧಾರ್ಮಿಕ ಭೇಟಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.

ರಾಹುಲ್ ಗಾಂಧಿ ಜನರನ್ನು ಭೇಟಿಯಾಗಲಿದ್ದು ಯವಕರು ಅವರ ಜೊತೆ ಕೈಜೋಡಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಅವರು ಆಂದೋಲನವನ್ನು ಪ್ರಾರಂಭಿಸುತ್ತಾರೆ. ಬಿಹಾರದಲ್ಲಿ ಚುನಾವಣೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಹೇಳಿದರು.

ನಾವು ಖಂಡಿತವಾಗಿಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುತ್ತೇವೆ. ದೇಶಕ್ಕೆ ಬದಲಾವಣೆಯ ಅಗತ್ಯವಿದೆ. ಸರ್ಕಾರ ಏನೇ ತಪ್ಪುಗಳನ್ನು ಮಾಡಿದರೂ, ಯುವಕರು ಅದನ್ನು ಇಷ್ಟಪಡುವುದಿಲ್ಲ ಎಂದು ವಾದ್ರಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶಕ್ಕೆ ಬದಲಾವಣೆಯ ಅಗತ್ಯವಿದೆ. ಸರ್ಕಾರ ಏನೇ ತಪ್ಪು ಮಾಡಿದರೂ, ಯುವಕರು ಅದನ್ನು ಇಷ್ಟಪಡುವುದಿಲ್ಲ. ನಾವು ಖಂಡಿತವಾಗಿಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುತ್ತೇವೆ ಎಂದರು.

ಬಿಹಾರದ 243 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!