ಶತ್ರುಘ್ನ ಸಿನ್ಹಾ , ನಿತೀಶ್ ಕುಮಾರ್ 
ದೇಶ

ಬಿಹಾರ ಚುನಾವಣೆಯಲ್ಲಿ ಭರ್ಜರಿ ಗೆಲುವು: ನಿತೀಶ್ ಕುಮಾರ್ ಹಾಡಿ ಹೊಗಳಿದ TMC ಸಂಸದ ಶತ್ರುಘ್ನ ಸಿನ್ಹಾ!

ಜನರ ನಿರೀಕ್ಷೆಗಳಿಗೆ ತಕ್ಕಂತೆ ಆಡಳಿತ ನಡೆಸಲು ನಿತೀಶ್ ಕುಮಾರ್ ಅವರಿಗೆ ದೇವರು ಆಶೀರ್ವದಿಸಲಿ. ಅದೇ ರೀತಿ ಎನ್ ಡಿಎ ಮಿತ್ರ ಪಕ್ಷಗಳಿಗೆ ಅಭಿನಂದನೆಗಳು

ಕೋಲ್ಕತ್ತ: ಇತ್ತೀಚಿಗೆ ನಡೆದ ಬಿಹಾರ ವಿಧಾನಸಭೆಯಲ್ಲಿ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಜೆಡಿಯು ನಾಯಕ ನಿತೀಶ್ ಕುಮಾರ್ ಅವರನ್ನು ಹಾಡಿ ಹೊಗಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶತ್ರುಘ್ನ ಸಿನ್ಹಾ, ನಮ್ಮ ಬಿಹಾರದ ಜನರು ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತ ಚಲಾಯಿಸುವ ಮೂಲಕ ಅರ್ಹವಾದ ಸರ್ಕಾರವನ್ನು ಮಾಡಿಕೊಂಡಿದ್ದಕ್ಕಾಗಿ ಮತ್ತು ಅತ್ಯಂತ ಜನಪ್ರಿಯ, ಸಜ್ಜನ ರಾಜಕಾರಣಿಯಾದ ನಿತೀಶ್ ಕುಮಾರ್ ಅವರ ನಾಯಕತ್ವವನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲರಿಗೂ ಅಭಿನಂದನೆ ಎಂದಿದ್ದಾರೆ.

ಜನರ ನಿರೀಕ್ಷೆಗಳಿಗೆ ತಕ್ಕಂತೆ ಆಡಳಿತ ನಡೆಸಲು ನಿತೀಶ್ ಕುಮಾರ್ ಅವರಿಗೆ ದೇವರು ಆಶೀರ್ವದಿಸಲಿ. ಅದೇ ರೀತಿ ಎನ್ ಡಿಎ ಮಿತ್ರ ಪಕ್ಷಗಳಿಗೆ ಅಭಿನಂದನೆಗಳು, ಜೈ ಬಿಹಾರ, ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.

ಶತ್ರುಘ್ನ ಸಿನ್ಹಾ ಅವರ ಹೇಳಿಕೆ ರಾಜಕೀಯ ವಲಯಗಳಿಗೆ ಕುತೂಹಲ ಮೂಡಿಸಿದೆ. ಸಿನ್ಹಾ ಅವರು ಬಿಹಾರ ಮೂಲದವರಾಗಿದ್ದು, ಇದು ಅವರ ವೈಯುಕ್ತಿಕ ಅಭಿಪ್ರಾಯವಾಗಿದೆ ಎಂದು ಟಿಎಂಸಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

ಸೌದಿಯಲ್ಲಿ ಘೋರ ದುರಂತ: 42 ಭಾರತೀಯ ಯಾತ್ರಿಕರ ಸಾವು, ಹೊತ್ತಿ ಉರಿಯುತ್ತಿದ್ದ ಬಸ್ ನಿಂದ ಜಿಗಿದು ಬದುಕುಳಿದ ಏಕೈಕ ಯುವಕ!

SCROLL FOR NEXT