ಪಾಕ್ ಡ್ರೋನ್ ಹೊಡೆದುರುಳಿಸಿದ ಸೇನೆ 
ದೇಶ

ಈ ವರ್ಷ ಇಲ್ಲಿಯವರೆಗೆ 255 ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದ BSF

ಮುಂಬರುವ ಚಳಿಗಾಲದ ಋತುವಿನ ಹಿನ್ನೆಲೆಯಲ್ಲಿ ಗಡಿಯಾಚೆಯಿಂದ ಕಳ್ಳಸಾಗಣೆ ಚಟುವಟಿಕೆಗಳನ್ನು ಪರಿಶೀಲಿಸಲು ಬಿಎಸ್‌ಎಫ್ ಕಣ್ಗಾವಲು ಬಲಪಡಿಸಿದೆ ಎಂದು ಅವರು ಹೇಳಿದ್ದಾರೆ.

ಚಂಡೀಗಢ: ಈ ವರ್ಷ ಇಲ್ಲಿಯವರೆಗೆ ಹೆರಾಯಿನ್ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡಲು ಪಾಕಿಸ್ತಾನದಿಂದ ಬಂದ 255 ಡ್ರೋನ್‌ಗಳನ್ನು ಬಿಎಸ್‌ಎಫ್ ತಟಸ್ಥಗೊಳಿಸಿದೆ ಎಂದು ಪಂಜಾಬ್ ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬರುವ ಚಳಿಗಾಲದ ಋತುವಿನ ಹಿನ್ನೆಲೆಯಲ್ಲಿ ಗಡಿಯಾಚೆಯಿಂದ ಕಳ್ಳಸಾಗಣೆ ಚಟುವಟಿಕೆಗಳನ್ನು ಪರಿಶೀಲಿಸಲು ಬಿಎಸ್‌ಎಫ್ ಕಣ್ಗಾವಲು ಬಲಪಡಿಸಿದೆ ಎಂದು ಅವರು ಹೇಳಿದ್ದಾರೆ.

ಸೋಮವಾರ ಅಮೃತಸರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್‌ಎಫ್ ಇನ್ಸ್‌ಪೆಕ್ಟರ್ ಜನರಲ್ ಅತುಲ್ ಫುಲ್ಜೆಲೆ, ಫಾಗ್ ಋತುವಿನಲ್ಲಿ ಗೋಚರತೆ ಕಡಿಮೆಯಾಗುತ್ತದೆ. ಡ್ರೋನ್‌ಗಳನ್ನು ಬಳಸುವ ಕಳ್ಳಸಾಗಣೆದಾರರು ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ಉಲ್ಲೇಖಿಸಿದ್ದಾರೆ.

"ಈ ಸಮಸ್ಯೆಯನ್ನು ಪರಿಹರಿಸಲು ನಾವು ಅಗತ್ಯ ವ್ಯವಸ್ಥೆಗಳನ್ನು ಮಾಡಿದ್ದೇವೆ. ಮಂಜಿನ ಪರಿಸ್ಥಿತಿಗಳಲ್ಲಿ ವಿಶೇಷ ಕಣ್ಗಾವಲು ಉಪಕರಣಗಳನ್ನು ಬಳಸಿಕೊಳ್ಳಲಾಗುವುದು ಮತ್ತು ನದಿ ಪ್ರದೇಶಗಳ ಮೇಲೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಮಾಡುತ್ತೇವೆ. ನಮ್ಮ ಒಟ್ಟಾರೆ ಕಣ್ಗಾವಲು ಗ್ರಿಡ್ ಅನ್ನು ಬಲಪಡಿಸುತ್ತೇವೆ" ಎಂದು ಫುಲ್ಜೆಲೆ ತಿಳಿಸಿದ್ದಾರೆ.

ಗಡಿಯಾಚೆಯಿಂದ ಡ್ರೋನ್ ಡ್ರಾಪ್-ಆಫ್‌ಗಳನ್ನು ಹಿಂಪಡೆಯಲು ಗಡಿ ಪ್ರದೇಶಗಳ ಬಳಿ ತೆರಳುವ ವ್ಯಕ್ತಿಗಳ ಮೇಲೆ ಬಿಎಸ್‌ಎಫ್ ಸಿಬ್ಬಂದಿ ನಿಗಾ ಇಡುತ್ತಾರೆ ಎಂದು ಅವರು ಹೇಳಿದ್ದಾರೆ.

ಕಳ್ಳಸಾಗಣೆ ತಡೆಗಟ್ಟಲು ಗಡಿ ಪ್ರದೇಶಗಳಿಗೆ ಹೋಗುವ ರಸ್ತೆಗಳಲ್ಲಿ ಬಿಎಸ್‌ಎಫ್ ಪಡೆಗಳು ಮತ್ತು ಪಂಜಾಬ್ ಪೊಲೀಸರು ಜಂಟಿ ತಪಾಸಣೆ ನಡೆಸುತ್ತಾರೆ. "ನಾವು ಇದನ್ನು ಪ್ರತಿ ವರ್ಷ ಮಾಡುತ್ತೇವೆ ಮತ್ತು ಈ ಬಾರಿಯೂ ಮಾಡುತ್ತಿದ್ದೇವೆ" ಎಂದು ಐಜಿ ತಿಳಿಸಿದ್ದಾರೆ.

"ಇಲ್ಲಿಯವರೆಗೆ, ಬಿಎಸ್‌ಎಫ್ ಪಾಕಿಸ್ತಾನದಿಂದ ಬರುವ 255 ಡ್ರೋನ್‌ಗಳನ್ನು ತಟಸ್ಥಗೊಳಿಸಿದೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ಉಗ್ರ ಹೇಳಿದ್ದೇನು?

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ..!

ಪಶ್ಚಿಮ ಬಂಗಾಳ: SIR ಸಮಯದಲ್ಲಿ ನಕಲಿ, ಮೃತ ಮತದಾರರನ್ನು ಪತ್ತೆಹಚ್ಚಲು ECಯಿಂದ AI ಬಳಕೆ!

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: 31ಕ್ಕೇರಿದ ಸಾವಿನ ಸಂಖ್ಯೆ, ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!

SCROLL FOR NEXT