ಅಲ್ ಫಲಾಹ್ ವಿಶ್ವವಿದ್ಯಾಲಯ 
ದೇಶ

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ, 25 ಸ್ಥಳಗಳ ಮೇಲೆ ED ದಾಳಿ; ತೀವ್ರ ಶೋಧ..!

ಫರಿದಾಬಾದ್‌ನಲ್ಲಿರುವ 70 ಎಕರೆ ವಿಸ್ತೀರ್ಣದ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಯ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ 12 ಮಂದಿಯ ಸಾವಿಗೆ ಕಾರಣವಾದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಉಗ್ರರ ಜೊತೆಗಿನ ಸಂಬಂಧ ಹೊಂದಿರುವ ಅಲ್​-ಫಲಾಹ್ ವಿಶ್ವವಿದ್ಯಾಲಯದ (Al-Falah University) ಹಣಕಾಸು ವ್ಯವಹಾರದ ಕುರಿತ ತನಿಖೆನ್ನು ಜಾರಿ ನಿರ್ದೇಶನಾಲಯ ತೀವ್ರಗೊಳಿಸಿದ್ದು, ವಿವಿಯ ಕಚೇರಿ ಸೇರಿ 25 ಸ್ಥಳಗಳ ಮೇಲೆ ಮಂಗಳವಾರ ದಾಳಿ ನಡೆಸಿ, ತೀವ್ರ ಶೋಧ ನಡೆಸುತ್ತಿದೆ.

ಫರಿದಾಬಾದ್‌ನಲ್ಲಿರುವ 70 ಎಕರೆ ವಿಸ್ತೀರ್ಣದ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಯ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.

ನ. 10ರಂದು ನಡೆಸಿದ ಸ್ಫೋಟದ ಪಿತೂರಿಯನ್ನು ಅದೇ ವಿವಿಯಲ್ಲಿ ರೂಪಿಸಲಾಗಿತ್ತು ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅಲ್ ಫಲಾಹ್ ವಿಶ್ವವಿದ್ಯಾಲಯದ ಖಾತೆಗಳ ಹಣಕಾಸು ಕುರಿತು ತನಿಖೆಗೆ ಆದೇಶಿಸಿತ್ತು. ಜೊತೆಗೆ ಆರ್ಥಿಕ ಅಪರಾಧಗಳ ವಿಭಾಗಕ್ಕೆ ವಿವಿಯ ಕಾರ್ಯನಿರ್ವಹಣೆಯನ್ನೂ ಪರಿಶೀಲಿಸುವಂತೆ ಸೂಚನೆ ನೀಡಿತ್ತು.

ದೆಹಲಿ-ಹರಿಯಾಣ ಗಡಿಯಿಂದ ಸುಮಾರು 27ಕಿಮೀ ದೂರದಲ್ಲಿರುವ 70 ಎಕರೆಗಳಷ್ಟು ವಿಸ್ತಾರವಾದ ಅಲ್ ಫಲಾಹ್ ವಿಶ್ವವಿದ್ಯಾಲಯ ಒಂದು ಖಾಸಗಿ ಸಂಸ್ಥೆಯಾಗಿದೆ. ದೆಹಲಿಯಲ್ಲಿ ಸ್ಫೋಟಗೊಂಡ ಹುಂಡೈ ಐ20 ಕಾರಿನ ಚಾಲಕ ಮೃತ ಡಾ. ಉಮರ್ ಮೊಹಮ್ಮದ್ ಇದೇ ವಿವಿಯಲ್ಲಿ ವೈದ್ಯನಾಗಿದ್ದನು. ಜೊತೆಗೆ, ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಡಾ. ಶಾಹೀನ್ ಸಯೀದ್, ಡಾ. ಆದಿಲ್ ರಾಥರ್ ಮತ್ತು ಡಾ. ಮುಜಮ್ಮಿಲ್ ಶಕೀಲ್ ವಿಶ್ವವಿದ್ಯಾಲಯದವರೇ ಎನ್ನಲಾಗಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ತನಿಖಾಧಿಕಾರಿಗಳು ಡಾ.ಮುಜಮ್ಮಿಲ್ ಶಕೀಲ್ ಕೊಠಡಿಯಿಂದ ಅಪರಾಧ ಸಾಬೀತು ಪಡಿಸುವ ವಸ್ತುಗಳನ್ನು ಪತ್ತೆ ಹೆಚ್ಚಿದ್ದು, ಅದರಲ್ಲಿ ಇಬ್ಬರು ವೈದ್ಯರ ಡೈರಿಗಳಲ್ಲಿ ಕೋಡ್ ಇರುವ ಸಂದೇಶಗಳಿರುವುದು ಪತ್ತೆಯಾಗಿದೆ.

ಶಂಕಿತ ಉಗ್ರರು ತಮ್ಮ ಭಯೋತ್ಪಾದಕ ಯೋಜನೆಗಳ ಕುರಿತು ಚರ್ಚಿಸಲು ವಿಶ್ವವಿದ್ಯಾಲಯದಲ್ಲಿರುವ ಡಾ. ಮುಜಮ್ಮಿಲ್ ಅವರ ಕೋಣೆಯಲ್ಲಿ ರಹಸ್ಯವಾಗಿ ಭೇಟಿಯಾಗಿದ್ದರು ಎಂದು ತಿಳಿದುಬಂದಿದೆ.

ಬಾಂಬ್ ತಯಾರಿಕೆಯಲ್ಲಿ ಬಳಸಲು ವಿಶ್ವವಿದ್ಯಾಲಯದ ಪ್ರಯೋಗಾಲಯದಿಂದ ಕೆಲವು ರಾಸಾಯನಿಕಗಳನ್ನೂ ಕಳ್ಳಸಾಗಣೆ ಮಾಡಿದ್ದರು ಎನ್ನಲಾಗಿದೆ. ಈ ಎಲ್ಲಾ ಆರೋಪ ಬೆನ್ನಲ್ಲೇ ಇಡಿ ಅಧಿಕಾರಿಗಲು ವಿವಿಯ ಕಚೇರಿ ಮೇಲೆ ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT