ಅಲ್ ಫಲಾಹ್ ವಿಶ್ವವಿದ್ಯಾಲಯ PTI
ದೇಶ

Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!

ಅಲ್ ಫಲಾಹ್ ವಿಶ್ವವಿದ್ಯಾಲಯದ ಸ್ಥಾಪಕ ಜವಾದ್ ಅಹ್ಮದ್ ಸಿದ್ದಿಕಿ ಅವರನ್ನು ಮಂಗಳವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿದ್ದಾರೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ದೆಹಲಿಯ ಕೆಂಪುಕೋಟೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ ಫಲಾಹ್ ವಿಶ್ವ ವಿದ್ಯಾಲಯ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಎಂಬುವವರನ್ನು ಬಂಧಿಸಲಾಗಿದೆ.

ದೆಹಲಿ ಸ್ಫೋಟ ಮತ್ತು ವೈಟ್ ಕಾಲರ್ ಉಗ್ರ ಮಾಡ್ಯೂಲ್ ನ ಹಿಂದಿನ ಭಯೋತ್ಪಾದಕ ಘಟಕದ ಕೇಂದ್ರ ಬಿಂದುವಾಗಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಸ್ಥಾಪಕ ಜವಾದ್ ಅಹ್ಮದ್ ಸಿದ್ದಿಕಿ ಅವರನ್ನು ಮಂಗಳವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ಭಯೋತ್ಪಾದನಾ ಹಣಕಾಸು ಸಂಬಂಧಿತ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ್ದ ಇಡಿ ಅಧಿಕಾರಿಗಳು ಇಂದು ಜವಾದ್ ಅಹ್ಮದ್ ಸಿದ್ದಿಕಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ದೆಹಲಿ ಪೊಲೀಸ್ ಅಪರಾಧ ವಿಭಾಗವು ಇತ್ತೀಚೆಗೆ ಅಲ್-ಫಲಾಹ್ ವಿಶ್ವವಿದ್ಯಾಲಯದ ವಿರುದ್ಧ ದಾಖಲಿಸಿದ ಎರಡು ಎಫ್‌ಐಆರ್‌ಗಳನ್ನು ಅನುಸರಿಸಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಇದರಲ್ಲಿ ವಂಚನೆ ಮತ್ತು ಮಾನ್ಯತೆ ದಾಖಲೆಗಳಿಗೆ ಸಂಬಂಧಿಸಿದ ನಕಲಿ ಆರೋಪದ ಪ್ರಕರಣಗಳು ಸೇರಿವೆ ಎನ್ನಲಾಗಿದೆ.

ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಹಲವಾರು ವೈದ್ಯರನ್ನು ಬಂಧಿಸಿದ ನಂತರ ಫರಿದಾಬಾದ್‌ನ ಧೌಜ್‌ನಲ್ಲಿರುವ ಅಲ್ ಫಲಾಹ್ ವಿಶ್ವವಿದ್ಯಾಲಯವು ಪರಿಶೀಲನೆಗೆ ಒಳಪಟ್ಟಿದೆ. 15 ಜನರ ಸಾವು ಮತ್ತು ಹಲವರು ಗಾಯಗೊಳ್ಳಲು ಕಾರಣವಾಗಿದ್ದ ಈ ಸ್ಫೋಟದಲ್ಲಿ ಆತ್ಮಹತ್ಯಾ ಬಾಂಬರ್ ಆಗಿದ್ದ ಕಾಶ್ಮೀರಿ ನಿವಾಸಿ ಡಾ. ಉಮರ್ ಉನ್ ನಬಿ ಇದೇ ವಿಶ್ವವಿದ್ಯಾಲಯದೊಂದಿಗೆ ಸಂಬಂಧ ಹೊಂದಿದ್ದರು.

ಅಲ್ ಫಲಾಹ್ ಗ್ರೂಪ್‌ಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಸಂಗ್ರಹಿಸಿದ ಸಾಕ್ಷ್ಯಗಳ ವಿವರವಾದ ತನಿಖೆ ಮತ್ತು ವಿಶ್ಲೇಷಣೆಯ ನಂತರ ಈ ಬಂಧನ ನಡೆದಿದೆ ಎಂದು ಕೇಂದ್ರ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ತನಿಖಾ ಸಂಸ್ಥೆ ದೆಹಲಿಯ 19 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತು.

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ಮತ್ತು ಉತ್ತರ ಪ್ರದೇಶಗಳನ್ನು ಒಳಗೊಂಡ ಜೈಶ್-ಎ-ಮೊಹಮ್ಮದ್ ಮತ್ತು ಅನ್ಸರ್ ಘಜ್ವತ್-ಉಲ್-ಹಿಂದ್ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ 'ವೈಟ್-ಕಾಲರ್' ಭಯೋತ್ಪಾದಕ ಮಾಡ್ಯೂಲ್ ಅನ್ನು ಅಧಿಕಾರಿಗಳು ಇತ್ತೀಚೆಗೆ ಭೇದಿಸಿದ ನಂತರ ಈ ಸ್ಫೋಟ ಸಂಭವಿಸಿದೆ.

ತನಿಖೆಯ ಪರಿಣಾಮವಾಗಿ ಫರಿದಾಬಾದ್‌ನ ಎರಡು ಬಾಡಿಗೆ ಕೊಠಡಿಗಳಿಂದ ಸುಮಾರು 2,900 ಕೆಜಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು ಮತ್ತು ಅಲ್ ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ವೈದ್ಯರು ಮತ್ತು ಫರಿದಾಬಾದ್‌ನ ಮಸೀದಿಗೆ ಸಂಬಂಧಿಸಿದ ಧರ್ಮಗುರು ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಬಂಧಿಸಲಾಯಿತು.

ವಿಶ್ವವಿದ್ಯಾನಿಲಯಕ್ಕೆ ಸಂಬಂಧಿಸಿದ ಸಂಸ್ಥೆಗಳ ಮೂಲಕ ನಡೆಸಲಾದ ನಿಧಿಯ ತಿರುವು ಮತ್ತು ಅನುಮಾನಾಸ್ಪದ ಹಣಕಾಸು ವಹಿವಾಟುಗಳು ಸೇರಿದಂತೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆರೋಪಿಸಲಾಗಿದೆ ಎಂದು ಹೇಳಲಾದ ಉಲ್ಲಂಘನೆಗಳನ್ನು ತನಿಖಾ ಸಂಸ್ಥೆ ಪರಿಶೀಲಿಸುತ್ತಿದೆ.

"1990 ರ ದಶಕದಿಂದ ದೊಡ್ಡ ಶೈಕ್ಷಣಿಕ ಸಂಸ್ಥೆಯಾಗಿ ರೂಪಾಂತರಗೊಂಡ ನಂತರ ಇಡೀ ಅಲ್-ಫಲಾಹ್ ಸಮೂಹ ಸಂಸ್ಥೆ ದೊಡ್ಡ ಶೈಕ್ಷಣಿಕ ಸಂಸ್ಥೆಯಾಗಿ ಬೆಳೆದಿತ್ತು. ಆದಾಗ್ಯೂ, ಈ ಬೆಳವಣಿಗೆ ಸಾಕಷ್ಟು ಹಣಕಾಸಿನ ಬೆಂಬಲವಿಲ್ಲ" ಎಂದು ಆರ್ಥಿಕ ಅಪರಾಧಗಳ ತನಿಖೆ ನಡೆಸುವ ತನಿಖಾ ಸಂಸ್ಥೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT