ಡಾ. ಉಮರ್ 
ದೇಶ

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ವಿಡಿಯೋದಲ್ಲಿ ಉಗ್ರ ಹೇಳಿದ್ದೇನು?

ದೆಹಲಿ ಬಾಂಬರ್ ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿ ಕಾರು ಸ್ಫೋಟಕ್ಕೂ ಮುನ್ನ ಆತ್ಮಹುತಿ ಬಾಂಬ್ ದಾಳಿ ಬಗ್ಗೆ ಮತ್ತು "ಹುತಾತ್ಮತೆ" ಬಗ್ಗೆ ಮಾತನಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ 15 ಜನ ಸಾವನ್ನಪ್ಪಿದ ಒಂದು ವಾರದ ನಂತರ, ಬಾಂಬರ್ ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿ ಸ್ವತಃ ಮಾತನಾಡಿದ ಮತ್ತು ದಿನಾಂಕವಿಲ್ಲದ ವಿಡಿಯೋ ಈಗ ಹೊರಬಿದ್ದಿದೆ.

ದೆಹಲಿ ಬಾಂಬರ್ ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿ ಕಾರು ಸ್ಫೋಟಕ್ಕೂ ಮುನ್ನ ಆತ್ಮಹುತಿ ಬಾಂಬ್ ದಾಳಿ ಬಗ್ಗೆ ಮತ್ತು "ಹುತಾತ್ಮತೆ" ಬಗ್ಗೆ ಮಾತನಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಈ ವಿಡಿಯೋದಲ್ಲಿ, ಭಯೋತ್ಪಾದಕ ಉಮರ್ ಆತ್ಮಹುತಿ ಬಾಂಬ್ ದಾಳಿಯನ್ನು ನೀವು ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂದು ಹೇಳುತ್ತಾನೆ. ಜನರು ಮಾಡುವ ದೊಡ್ಡ ತಪ್ಪು ಎಂದರೆ ಬಾಂಬ್ ದಾಳಿ ಅಥವಾ ಆತ್ಮಹುತಿ ಬಾಂಬ್ ದಾಳಿಯ ಕಲ್ಪನೆ ನಿಜವಾಗಿಯೂ ಏನೆಂದು ಅರ್ಥಮಾಡಿಕೊಳ್ಳಲು ವಿಫಲವಾಗಿರುವುದು ಎಂದು ಹೇಳಿದ್ದಾನೆ.

"ಬಹಳ ತಪ್ಪಾಗಿ ಅರ್ಥೈಸಿಕೊಳ್ಳಲಾದ ಪರಿಕಲ್ಪನೆಗಳಲ್ಲಿ ಒಂದು ಆತ್ಮಹತ್ಯಾ ಬಾಂಬ್ ದಾಳಿಯಾಗಿದ್ದು, ಇದು ಇಸ್ಲಾಂನಲ್ಲಿ ತಿಳಿದಿರುವ ಹುತಾತ್ಮ ಕಾರ್ಯಾಚರಣೆಯಾಗಿದೆ. ಈಗ, ಬಹು ವಿರೋಧಾಭಾಸಗಳಿವೆ; ಅದರ ವಿರುದ್ಧ ಹಲವಾರು ವಾದಗಳನ್ನು ತರಲಾಗಿದೆ" ಎಂದು ಯುವ ವೈದ್ಯ ವಿಡಿಯೋದಲ್ಲಿ ಹೇಳಿದ್ದಾರೆ.

"ಹುತಾತ್ಮತೆ" ಕಾರ್ಯಾಚರಣೆ ಎಂದರೆ ಒಬ್ಬ ವ್ಯಕ್ತಿಯು ಒಂದು ನಿರ್ದಿಷ್ಟ ಸ್ಥಳ ಮತ್ತು ಸಮಯದಲ್ಲಿ ತಾನು ಸಾಯುತ್ತೇನೆ ಎಂದು ಗೊತ್ತಿರುತ್ತದೆ. ಆದರೆ ಯಾರೂ ಯಾವಾಗ ಅಥವಾ ಎಲ್ಲಿ ಸಾಯುತ್ತಾರೆ ಎಂಬುದನ್ನು ನಿಖರವಾಗಿ ಊಹಿಸಲು ಸಾಧ್ಯವಿಲ್ಲ ಮತ್ತು ಅದು ಯಾವಾಗ ಬೇಕಾದರೂ ಸಂಭವಿಸುತ್ತದೆ ಎಂದು ಉಮರ್ ಹೇಳುತ್ತಾರೆ. ಅಲ್ಲದೆ "ಸಾವಿಗೆ ಭಯಪಡಬೇಡಿ" ಎಂದು ಸಹ ವೈದ್ಯ ಹೇಳುತ್ತಾರೆ.

ಇಸ್ಲಾಂನಲ್ಲಿ ಆತ್ಮಹತ್ಯೆಯನ್ನು ನಿಷೇಧಿಸಲಾಗಿದೆ. ಆದರೆ ಆತ್ಮಹತ್ಯಾ ಬಾಂಬ್ ದಾಳಿಯನ್ನು "ಹುತಾತ್ಮತೆ"ಯ ಕೃತ್ಯವೆಂದು ಉಮರ್ ವಿಡಿಯೋದಲ್ಲಿ ಸಮರ್ಥಿಸುತ್ತಿರುವಂತೆ ತೋರುತ್ತದೆ.

ಈ ವಿಡಿಯೋದಲ್ಲಿ, ಉಮರ್ ಇಂಗ್ಲಿಷ್‌ನಲ್ಲಿ ಮಾತನಾಡಿದ್ದು, ಸಾಕಷ್ಟು ಸ್ಪಷ್ಟವಾಗಿ ಹೇಳುವುದರಿಂದ ಅವರು ಆತ್ಮಹತ್ಯಾ ಬಾಂಬ್ ದಾಳಿ ಮತ್ತು "ಹುತಾತ್ಮತೆ" ಯಂತಹ ವಿಷಯಗಳ ಬಗ್ಗೆ ಆಳವಾಗಿ ಯೋಚಿಸಿದ್ದಾರೆಂದು ತಿಳಿಯುತ್ತದೆ. ಇದು ಅವರನ್ನು ಸಂಪೂರ್ಣವಾಗಿ ಮೂಲಭೂತೀಕರಣಗೊಳಿಸಲಾಗಿದೆ ಎಂದು ಸೂಚಿಸುತ್ತದೆ. ಈ ವಿಡಿಯೋ ಶಾಂತ, ಸಂಯಮದ ವ್ಯಕ್ತಿಯೊಬ್ಬರು ಘೋರ ಕೃತ್ಯವನ್ನು ಸಮರ್ಥಿಸಿಕೊಳ್ಳುವುದನ್ನು ತೋರಿಸುತ್ತದೆ. ವಿಡಿಯೋ ಭಾರತದಲ್ಲಿ ಭಯೋತ್ಪಾದನೆಯ ಹೊಸ ಮುಖವನ್ನು ಸಹ ಪರಿಚಯಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!

News wrap of the day 17-02-2026| Muda case: CS ಶಾಲಿನಿ ರಜನೀಶ್ ವಿರುದ್ಧ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ, ಆಡಿಯೋ ಬಿಡುಗಡೆ; ನಾಯಿ, ನಾಯಕತ್ವ: ಮಹದೇವಪ್ಪ ಹೇಳಿಕೆಗೆ DK Suresh ಪ್ರತಿಕ್ರಿಯೆ ಏನು?

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

SCROLL FOR NEXT