ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ 
ದೇಶ

ರೈತರಿಗೆ ಗುಡ್ ನ್ಯೂಸ್: ಪಿಎಂ-ಕಿಸಾನ್ ಯೋಜನೆಯ 21ನೇ ಕಂತಿನ ಹಣ, ನಾಳೆ ಬಿಡುಗಡೆ

ಜೈಪುರದ ದುರ್ಗಾಪುರದ ರಾಜ್ಯ ಕೃಷಿ ನಿರ್ವಹಣಾ ಸಂಸ್ಥೆಯಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಭಾಗವಹಿಸಲಿದ್ದಾರೆ.

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 21 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜೈಪುರದ ದುರ್ಗಾಪುರದ ರಾಜ್ಯ ಕೃಷಿ ನಿರ್ವಹಣಾ ಸಂಸ್ಥೆಯಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಭಾಗವಹಿಸಲಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಲಾಗಿದೆ.

21ನೇ ಕಂತು ಬಿಡುಗಡೆಯ ಸಮಯದಲ್ಲಿ ರಾಜಸ್ಥಾನದ 66.62 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ 1,332 ಕೋಟಿ ರೂ.ಗಳನ್ನು ವರ್ಗಾಯಿಸಲಾಗುತ್ತದೆ

ರಾಷ್ಟ್ರವ್ಯಾಪಿ, ಸುಮಾರು ಒಂಬತ್ತು ಕೋಟಿ ರೈತರು ಈ ಯೋಜನೆಯಡಿಯಲ್ಲಿ ರೂ. 18,000 ಕೋಟಿ ಪಡೆಯುವ ನಿರೀಕ್ಷೆಯಿದೆ. ಪಿಎಂ-ಕಿಸಾನ್ ಪ್ರಾರಂಭವಾದಾಗಿನಿಂದ, ಕೇಂದ್ರ ಸರ್ಕಾರ ಇಲ್ಲಿಯವರೆಗೆ 20 ಕಂತುಗಳನ್ನು ಬಿಡುಗಡೆ ಮಾಡಿದೆ.

ರಾಜಸ್ಥಾನದ ರೈತರಿಗೆ 25,142 ಕೋಟಿ ರೂ.ಗಳನ್ನು ವರ್ಗಾಯಿಸಿದೆ. ಪಿಎಂ-ಕಿಸಾನ್ ಅಡಿಯಲ್ಲಿ, ಅರ್ಹ ರೈತರು ವಾರ್ಷಿಕವಾಗಿ ರೂ. 6,000 ರೂ.ಗಳನ್ನು ಪಡೆಯುತ್ತಾರೆ. ಇದನ್ನು ಮೂರು ಸಮಾನ ಕಂತುಗಳಲ್ಲಿ ಪಾವತಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಷ್ಯಾದಿಂದ ತೈಲ ಖರೀದಿಗೆ ಭಾರತಕ್ಕೆ ಶೇ.500ರಷ್ಟು ಸುಂಕ ಶಿಕ್ಷೆ: ಮಸೂದೆಗೆ Donald Trump ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ತೀವ್ರ ಚಳಿ: ಮುಂದಿನ ಏಳು ದಿನ ಉತ್ತರ ಒಳನಾಡಿನಲ್ಲಿ ಮತ್ತಷ್ಟು ಚಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ನಿರೀಕ್ಷೆ!

ಕೋಗಿಲು ವಿವಾದ: ಅಕ್ರಮ ಮನೆ ನಿರ್ಮಾಣ ಆರೋಪ, ನಾಲ್ವರ ವಿರುದ್ಧ FIR ದಾಖಲು!

ಸುಳ್ಯ MLA ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ದೂರು ದಾಖಲು

ವೆನೆಜುವೆಲಾ ಮೇಲೆ ಅಮೆರಿಕ ಮತ್ತೊಂದು ದಾಳಿ; ತೈಲ ಟ್ಯಾಂಕರ್ ವಶಕ್ಕೆ, ರಷ್ಯಾ ಖಂಡನೆ, Video

SCROLL FOR NEXT