ಬೆಂಕಿಗೆ ಆಂಬ್ಯುಲೆನ್ಸ್ ಭಸ್ಮ  
ದೇಶ

ಗುಜರಾತ್‌: ಆಂಬ್ಯುಲೆನ್ಸ್‌ಗೆ ಬೆಂಕಿ; ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಾವು; Video

ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ದಾರಿ ಮಧ್ಯೆ ಆಂಬ್ಯುಲೆನ್ಸ್ ಗೆ ಬೆಂಕಿಗೆ ಆಹುತಿಯಾಯಿತು.

ಮೋಡಸಾ: ಗುಜರಾತ್‌ನ ಅರ್ವಳ್ಳಿ ಜಿಲ್ಲೆಯ ಮೋಡಸಾ ಪಟ್ಟಣದ ಬಳಿ ಇಂದು ಮಂಗಳವಾರ ಬೆಳಗಿನ ಜಾವ ನವಜಾತ ಶಿಶು, ವೈದ್ಯರು ಮತ್ತು ಹಾಗೂ ಮತ್ತಿಬ್ಬರು ಪ್ರಯಾಣಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಸಜೀವ ದಹನಗೊಂಡಿದ್ದಾರೆ.

ಹೆರಿಗೆಯ ನಂತರ ಅಸ್ವಸ್ಥವಾಗಿದ್ದ ಒಂದು ದಿನದ ಗಂಡು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೋಡಸಾ ಮೂಲದ ಆಸ್ಪತ್ರೆಯಿಂದ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮೋಡಸಾ-ಧನ್ಸುರ ರಸ್ತೆಯಲ್ಲಿ ಆಂಬ್ಯುಲೆನ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಡಿಬಿ ವಾಲಾ ತಿಳಿಸಿದ್ದಾರೆ.

ಮಗು, ಅವರ ತಂದೆ ಜಿಗ್ನೇಶ್ ಮೋಚಿ (38ವ), ಅಹಮದಾಬಾದ್‌ನ ವೈದ್ಯ ಶಾಂತಿಲಾಲ್ ರೆಂಟಿಯಾ (30ವ) ಮತ್ತು ಅರ್ವಳ್ಳಿ ಮೂಲದ ನರ್ಸ್ ಭೂರಿಬೆನ್ ಮನಾತ್ (23ವ) ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು.

ಮೋಚಿಯ ಇಬ್ಬರು ಸಂಬಂಧಿಕರು ಮತ್ತು ಖಾಸಗಿ ಆಂಬ್ಯುಲೆನ್ಸ್ ಚಾಲಕ ಸೇರಿದಂತೆ ಮೂವರು ಸುಟ್ಟ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಜಿಗ್ನೇಶ್ ಮೋಚಿ ನೆರೆಯ ಮಹಿಸಾಗರ್ ಜಿಲ್ಲೆಯವರಾಗಿದ್ದು, ಅವರ ನವಜಾತ ಶಿಶು ಹೆರಿಗೆಯ ನಂತರ ಮೋಡಸಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ದಾರಿ ಮಧ್ಯೆ ಆಂಬ್ಯುಲೆನ್ಸ್ ಗೆ ಬೆಂಕಿಗೆ ಆಹುತಿಯಾಯಿತು ಎಂದು ವಾಲಾ ಹೇಳಿದರು.

ಪೊಲೀಸರು ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಆಂಬ್ಯುಲೆನ್ಸ್ ಹಿಂಭಾಗದಲ್ಲಿ ಬೆಂಕಿ ಹೊತ್ತಿಕೊಂಡಿರುವುದನ್ನು ಚಾಲಕನಿಗೆ ಗೊತ್ತಾದ ನಂತರ ಪೆಟ್ರೋಲ್ ಪಂಪ್ ಬಳಿ ಆಂಬ್ಯುಲೆನ್ಸ್ ನಿಧಾನವಾಗಿ ಚಲಿಸುತ್ತಿರುವುದು ಕಂಡುಬಂತು.

ಚಾಲಕ ಮತ್ತು ಮುಂಭಾಗದ ಸೀಟಿನಲ್ಲಿದ್ದ ಮೋಚಿಯ ಇಬ್ಬರು ಸಂಬಂಧಿಕರು ಗಾಯಗಳೊಂದಿಗೆ ಪಾರಾಗಿದ್ದರೂ, ಮಗು, ತಂದೆ, ವಾಹನದ ಹಿಂಭಾಗದಲ್ಲಿದ್ದ ವೈದ್ಯರು ಮತ್ತು ನರ್ಸ್ ಬೆಂಕಿಯಲ್ಲಿ ಸುಟ್ಟು ಕರಕಲಾದರು ಎಂದು ವಾಲಾ ಹೇಳಿದರು.

ಗಾಯಗೊಂಡವರನ್ನು ಚಾಲಕ ಅಂಕಿತ್ ಠಾಕೂರ್ ಮತ್ತು ಜಿಗ್ನೇಶ್ ಮೋಚಿಯ ಸಂಬಂಧಿಕರಾದ ಗೌರಂಗ್ ಮೋಚಿ ಮತ್ತು ಗೀತಾಬೆನ್ ಮೋಚಿ ಎಂದು ಗುರುತಿಸಲಾಗಿದೆ.

ಘಟನೆಯ ತನಿಖೆ ನಡೆಸಲು ಮತ್ತು ದುರಂತಕ್ಕೆ ಕಾರಣಗಳನ್ನು ಹುಡುಕಲು ವಿಧಿವಿಜ್ಞಾನ ತಜ್ಞರನ್ನು ಕರೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಹರಸಿನ್ಹ ಜಡೇಜಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ ‘ವಿಶ್ವಾಸಾರ್ಹ ಪಾಲುದಾರಿಕೆ’ ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಮಹತ್ವದ ಕರೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

SCROLL FOR NEXT