ಪ್ರಾತಿನಿಧಿಕ ಚಿತ್ರ 
ದೇಶ

ಆಂಧ್ರ ಪ್ರದೇಶ: ಮತ್ತೆ ಗುಂಡಿನ ಚಕಮಕಿ, ಎನ್‌ಕೌಂಟರ್‌‌ಗೆ ಮೂವರು ಮಹಿಳೆಯರು ಸೇರಿ ಏಳು ನಕ್ಸಲರು ಸಾವು

ವಿಜಯವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗುಪ್ತಚರ ಇಲಾಖೆಯ ಎಡಿಜಿಪಿ ಮಹೇಶ್ ಚಂದ್ರ ಲಡ್ಡಾ, ಇಂದು ಸಾವಿಗೀಡಾದವರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಹೇಳಿದರು.

ಅಮರಾವತಿ: ಆಂಧ್ರ ಪ್ರದೇಶದ ಮಾರೆಡುಮಿಲ್ಲಿಯಲ್ಲಿ ಮೋಸ್ಟ್ ವಾಂಟೆಂಡ್ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಸೇರಿ ಆರು ಮಂದಿ ಆರು ಮಾವೋವಾದಿಗಳನ್ನು ಗುಂಡಿಕ್ಕಿ ಕೊಂದ ಒಂದು ದಿನದ ನಂತರ, ಬುಧವಾರ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆದ ಮತ್ತೊಂದು ಗುಂಡಿನ ಚಕಮಕಿಯಲ್ಲಿ ಇನ್ನೂ ಏಳು ಮಂದಿ ನಕ್ಸಲರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗುಪ್ತಚರ ಇಲಾಖೆಯ ಎಡಿಜಿಪಿ ಮಹೇಶ್ ಚಂದ್ರ ಲಡ್ಡಾ, ಇಂದು ಸಾವಿಗೀಡಾದವರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಹೇಳಿದರು.

'ಮಂಗಳವಾರದ ಕಾರ್ಯಾಚರಣೆಯ ಮುಂದುವರಿಕೆಯಾಗಿ, ಇಂದು (ಬುಧವಾರ) ಏಳು ಮಾವೋವಾದಿಗಳು ಸಾವಿಗೀಡಾಗಿದ್ದಾರೆ. ಇಂದಿನ ಕಾರ್ಯಾಚರಣೆ ಮಂಗಳವಾರ ಆರಂಭವಾಗಿದ್ದ ಗುಂಡಿನ ಚಕಮಕಿ (ಇಒಎಫ್) ಸ್ಥಳದಿಂದ ಸುಮಾರು 7 ಕಿಮೀ ದೂರದಲ್ಲಿ ನಡೆದಿದೆ' ಎಂದು ಹೇಳಿದರು.

ಹಿರಿಯ ಅಧಿಕಾರಿ ಪ್ರಕಾರ, ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಮಾರೆಡುಮಿಲ್ಲಿಯಲ್ಲಿ ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ನಡೆದ ಕಾರ್ಯಾಚರಣೆಯಲ್ಲಿ ಏಳು ಮಾವೋವಾದಿಗಳು ಬಲಿಯಾಗಿದ್ದಾರೆ.

ಹತ್ಯೆಗೀಡಾದ ಮಾವೋವಾದಿಗಳ ಪೈಕಿ ಒಬ್ಬಾತನನ್ನು ಮೇತುರಿ ಜೋಖಾ ರಾವ್ ಅಲಿಯಾಸ್ ಟೆಕ್ ಶಂಕರ್ ಎಂದು ಗುರುತಿಸಲಾಗಿದೆ ಎಂದು ಲಡ್ಡಾ ಹೇಳಿದ್ದಾರೆ.

ಶ್ರೀಕಾಕುಳಂ ಮೂಲದ ಶಂಕರ್, ಆಂಧ್ರ ಒಡಿಶಾ ಗಡಿ (ಎಒಬಿ) ಯ ಉಸ್ತುವಾರಿ (ಸಿಸಿಎಂ) ಆಗಿದ್ದರು. ಶಸ್ತ್ರಾಸ್ತ್ರ ತಯಾರಿಕೆ ಮತ್ತು ಸಂವಹನದಂತಹ ತಾಂತ್ರಿಕ ಕಾರ್ಯಾಚರಣೆಗಳಲ್ಲಿ ಪರಿಣತಿ ಹೊಂದಿದ್ದರು ಎಂದು ಪ್ರಾಥಮಿಕ ಮಾಹಿತಿ ಆಧಾರದ ಮೇಲೆ ಅಧಿಕಾರಿ ತಿಳಿಸಿದ್ದಾರೆ.

ಲಡ್ಡಾ ಅವರ ಪ್ರಕಾರ, ಶಂಕರ್ ಸುಮಾರು 20 ವರ್ಷಗಳಿಂದ ಮಾವೋವಾದಿ ಚಳವಳಿಯಲ್ಲಿದ್ದರು ಮತ್ತು ನಿರಂತರ ನಕ್ಸಲ್ ವಿರೋಧಿ ಕಾರ್ಯಾಚರಣೆಗಳಿಂದಾಗಿ ಅವರು ಸ್ಥಳಾಂತರಗೊಳ್ಳುತ್ತಿರಬೇಕಾಯಿತು. ಅಲ್ಲದೆ, ಶ್ರೀಕಾಕುಳಂ ಮೂಲದ ಶಂಕರ್ ಬಹುಶಃ ನಕ್ಸಲ್ ಚಳುವಳಿಯನ್ನು ಪುನರುಜ್ಜೀವನಗೊಳಿಸಲು ದಕ್ಷಿಣದ ರಾಜ್ಯಕ್ಕೆ ಬಂದಿರಬಹುದು ಎಂದರು.

ಮಂಗಳವಾರ, ಮಾರೆಡುಮಿಲ್ಲಿ ಮಂಡಲದ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಉನ್ನತ ನಕ್ಸಲೈಟ್ ಕಮಾಂಡರ್ ಮದ್ವಿ ಹಿದ್ಮಾ ಸೇರಿದಂತೆ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ!

ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆ; ನಾಳೆ ಬಿಹಾರ ನೂತನ ಸಿಎಂ ಆಗಿ ಪ್ರಮಾಣ

ಇಸ್ಲಾಂನಲ್ಲಿ 'ಆತ್ಮಾಹುತಿ' ದಾಳಿ ಹರಾಮ್, ಅಮಾಯಕರ ಹತ್ಯೆ ಗಂಭೀರ ಪಾಪ : ಅಸಾದುದ್ದೀನ್ ಓವೈಸಿ

'ಯಕ್ಷಗಾನ ಕಲಾವಿದರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ': KDA ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕೊಟ್ಟ ಸ್ಪಷ್ಟನೆಯೇನು?

ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಆರೋಪಿ ಅನ್ಮೋಲ್ ಬಿಷ್ಣೋಯ್‌ ಅಮೆರಿಕದಿಂದ ಗಡಿಪಾರು; ಭಾರತಕ್ಕೆ ಕರೆತಂದು ಬಂಧನ!

SCROLL FOR NEXT