ಏಕನಾಥ್ ಶಿಂಧೆ, ಸಿಎಂ ದೇವೇಂದ್ರ ಫಡ್ನವೀಸ್ ಸಾಂದರ್ಭಿಕ ಚಿತ್ರ 
ದೇಶ

ಥಾಣೆ: 'ಮಹಾಯುತಿ'ಯಲ್ಲಿ ಬಿರುಕು, ಶಿಂಧೆ ತವರು ಕ್ಷೇತ್ರದಲ್ಲಿ ಬಿಜೆಪಿ- ಶಿವಸೇನೆ ಕಾರ್ಯಕರ್ತರ ನಡುವೆ ಘರ್ಷಣೆ!

ಪಕ್ಷದ ಇಬ್ಬರು ಪದಾಧಿಕಾರಿಗಳ ಮೇಲೆ ಬಿಜೆಪಿ ನಾಯಕ ಹಲ್ಲೆ ನಡೆಸಿರುವುದಾಗಿ ಶಿವಸೇನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ತದನಂತರ ಪೊಲೀಸರು ತೀರಾ ಗಂಭೀರವಲ್ಲದ (NC)ಪ್ರಕರಣ ದಾಖಲಿಸಿದ್ದಾರೆ.

ಥಾಣೆ: ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿಯಲ್ಲಿ ಅಸಮಾಧಾನದ ಹೊಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿರುಕು ಉಂಟಾಗಿದೆ.

ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ತವರು ಕ್ಷೇತ್ರವಾದ ಥಾಣೆಯಲ್ಲಿ ಮಿತ್ರಪಕ್ಷಗಳಾದ ಬಿಜೆಪಿ ಹಾಗೂ ಶಿವಸೇನಾ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಬಿಜೆಪಿ ನಾಯಕ ಮತ್ತು ಮಾಜಿ ಕಾರ್ಪೊರೇಟರ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.

ಪಕ್ಷದ ಇಬ್ಬರು ಪದಾಧಿಕಾರಿಗಳ ಮೇಲೆ ಬಿಜೆಪಿ ನಾಯಕ ಹಲ್ಲೆ ನಡೆಸಿರುವುದಾಗಿ ಶಿವಸೇನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ತದನಂತರ ಪೊಲೀಸರು ತೀರಾ ಗಂಭೀರವಲ್ಲದ (NC)ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ರಾತ್ರಿ ಥಾಣೆಯ ಪಚ್ಪಖಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನಗರದ ಬಡವರಿಗೆ ಮೂಲ ಸೇವೆಗಳು(BSUP) (ಯೋಜನೆಯಡಿ ಮನೆಗಳ ನೋಂದಣಿಗೆ ಅವಕಾಶ ನೀಡುವ ಸರ್ಕಾರದ ನಿರ್ಧಾರಕ್ಕೆ ಕ್ರೆಡಿಟ್ ತೆಗೆದುಕೊಳ್ಳುತ್ತಾ ಶಿವಸೇನೆಯ ಕೆಲವು ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರೊಂದಿಗೆ ಘರ್ಷಣೆ ನಡೆದಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

New Labour Codes- ಕೇಂದ್ರ ಸರ್ಕಾರದಿಂದ ಐತಿಹಾಸಿಕ 4 ಕಾರ್ಮಿಕ ಸಂಹಿತೆ ಜಾರಿ, ಯೂನಿಯನ್‌ ಗಳ ವಿರೋಧ, ಎಚ್ಚರಿಕೆ ಹೆಜ್ಜೆಯಿಡಲು ಕಂಪೆನಿಗಳ ನಿರ್ಧಾರ

ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ: ದೆಹಲಿಯಲ್ಲಿ ಡಿಕೆ ಶಿವಕುಮಾರ್ ಬಣದ ಮೇಲಾಟ; ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೋರಾಟ!

ಇಂದು ಸಿಎಂ ಆಗಿರುವ ಮಹಾನುಭಾವರೇ ಅಂದು ಕುಮಾರಸ್ವಾಮಿ ಸರ್ಕಾರ ಕೆಡವಿದ್ರು: ಎಚ್.ಡಿ ದೇವೇಗೌಡ

ಬಣ ಬಡಿದಾಟ, ಅಧಿಕಾರ ಗುದ್ದಾಟ: ಇಂದು ಸಿದ್ದರಾಮಯ್ಯ- ಡಿಕೆಶಿ ಜೊತೆ ಮಲ್ಲಿಕಾರ್ಜುನ ಖರ್ಗೆ ಮುಖಾಮುಖಿ ಚರ್ಚೆ ಸಾಧ್ಯತೆ, ತೆರೆ ಎಳೆಯುತ್ತಾರೆಯೇ ಗೊಂದಲಕ್ಕೆ?

ನಾನಂತೂ ಬರೋಬ್ಬರಿ 100 ವರ್ಷ ಬದುಕುತ್ತೇನೆ: ಸಿಎಂ ಸಿದ್ದರಾಮಯ್ಯ

SCROLL FOR NEXT