ಏಕನಾಥ್ ಶಿಂಧೆ, ಸಿಎಂ ದೇವೇಂದ್ರ ಫಡ್ನವೀಸ್ ಸಾಂದರ್ಭಿಕ ಚಿತ್ರ 
ದೇಶ

ಥಾಣೆ: 'ಮಹಾಯುತಿ'ಯಲ್ಲಿ ಬಿರುಕು, ಶಿಂಧೆ ತವರು ಕ್ಷೇತ್ರದಲ್ಲಿ ಬಿಜೆಪಿ- ಶಿವಸೇನೆ ಕಾರ್ಯಕರ್ತರ ನಡುವೆ ಘರ್ಷಣೆ!

ಪಕ್ಷದ ಇಬ್ಬರು ಪದಾಧಿಕಾರಿಗಳ ಮೇಲೆ ಬಿಜೆಪಿ ನಾಯಕ ಹಲ್ಲೆ ನಡೆಸಿರುವುದಾಗಿ ಶಿವಸೇನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ತದನಂತರ ಪೊಲೀಸರು ತೀರಾ ಗಂಭೀರವಲ್ಲದ (NC)ಪ್ರಕರಣ ದಾಖಲಿಸಿದ್ದಾರೆ.

ಥಾಣೆ: ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿಯಲ್ಲಿ ಅಸಮಾಧಾನದ ಹೊಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿರುಕು ಉಂಟಾಗಿದೆ.

ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ತವರು ಕ್ಷೇತ್ರವಾದ ಥಾಣೆಯಲ್ಲಿ ಮಿತ್ರಪಕ್ಷಗಳಾದ ಬಿಜೆಪಿ ಹಾಗೂ ಶಿವಸೇನಾ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಬಿಜೆಪಿ ನಾಯಕ ಮತ್ತು ಮಾಜಿ ಕಾರ್ಪೊರೇಟರ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.

ಪಕ್ಷದ ಇಬ್ಬರು ಪದಾಧಿಕಾರಿಗಳ ಮೇಲೆ ಬಿಜೆಪಿ ನಾಯಕ ಹಲ್ಲೆ ನಡೆಸಿರುವುದಾಗಿ ಶಿವಸೇನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ತದನಂತರ ಪೊಲೀಸರು ತೀರಾ ಗಂಭೀರವಲ್ಲದ (NC)ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ರಾತ್ರಿ ಥಾಣೆಯ ಪಚ್ಪಖಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನಗರದ ಬಡವರಿಗೆ ಮೂಲ ಸೇವೆಗಳು(BSUP) (ಯೋಜನೆಯಡಿ ಮನೆಗಳ ನೋಂದಣಿಗೆ ಅವಕಾಶ ನೀಡುವ ಸರ್ಕಾರದ ನಿರ್ಧಾರಕ್ಕೆ ಕ್ರೆಡಿಟ್ ತೆಗೆದುಕೊಳ್ಳುತ್ತಾ ಶಿವಸೇನೆಯ ಕೆಲವು ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರೊಂದಿಗೆ ಘರ್ಷಣೆ ನಡೆದಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಬಾಗ್ದಾದ್​ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ, ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ

Pakistan-Taliban Conflicts: ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; ಬೆಚ್ಚಿದ ಕಾಬುಲ್, 400 ಜನರು ಸಾವು, 250 ಗಾಯ

ಕಾಬೂಲ್ ನಲ್ಲಿ ವೈಮಾನಿಕ ದಾಳಿ: ಪಾಕ್ ಸೇನೆಯಿಂದ ಹತ್ಯೆ, ರಶೀದ್ ಖಾನ್ ಸೇರಿದಂತೆ ಅಪ್ಘನ್ ಕ್ರಿಕೆಟಿಗರ ಆಕ್ರೋಶ

ಗ್ಯಾಸ್ ಟ್ರಬಲ್ ಮಧ್ಯೆ ಕೊಂಚ ನಿರಾಳ: ಭಾರತಕ್ಕೆ ಬಂದಿಳಿದ ಎರಡು ತೈಲ ಹಡಗು, ಇಂದು ಮಂಗಳೂರು ತಲುಪಲಿದೆ 26 ಸಾವಿರ ಮೆಟ್ರಿಕ್ ಟನ್

ಉಪಚುನಾವಣೆ ಟಿಕೆಟ್ ಗಾಗಿ ಬಣ ಬಡಿದಾಟ: ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕುರುಬ ನಾಯಕನಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಚೆಕ್ ಮೇಟ್?

SCROLL FOR NEXT